ಸಿಎಸ್ಗೆ ಡಿಕೆಶಿ ಬರೆದ ಟಿಪ್ಪಣಿಯಲ್ಲಿ ಏನಿದೆ?
‘ನನ್ನ ಇಲಾಖೆಗೆ ಒಳಪಡುವ ವಿಭಾಗಗಳಿಗೆ ಸಂಬಂಧಿಸಿದಂತೆ ವರ್ಗಾವಣೆ, ನೇಮಕಾತಿ ಮುಂತಾದ ವಿಚಾರಗಳ ಬಗ್ಗೆ ಡಿಪಿಎಆರ್ನಿಂದ ಆದೇಶ ಹೊರಡಿಸಬೇಕಾದರೆ ನನ್ನ ಪೂರ್ವಾನುಮತಿ ಪಡೆದ ನಂತರವೇ ಹೊರಡಿಸಬೇಕೆಂದು ಈ ಸರ್ಕಾರ ಅಸ್ತಿತ್ವಕ್ಕೆ ಬಂದ ಆರಂಭದಲ್ಲಿಯೇ ಟಿಪ್ಪಣಿ ಮೂಲಕ ನಿಮಗೆ ತಿಳಿಸಲಾಗಿತ್ತು. ನಂತರ ಮುಖ್ಯ ಎಂಜಿನಿಯರ್ಗಳ ಕರ್ತವ್ಯಕ್ಕೆ ಸಂಬಂಧಿಸಿದ ಕಾರ್ಯವ್ಯಾಪ್ತಿಯನ್ನು ಜಲಸಂಪನ್ಮೂಲ ಇಲಾಖೆಯಿಂದ ಡಿಪಿಎಆರ್ಗೆ ವಹಿಸುವ ಕಡತದಲ್ಲಿಯೂ ಮೇಲಿನ ಸೂಚನೆಯನ್ನು ಪುನರುಚ್ಚರಿಸಿ, ಅಂತಹ ವಿಚಾರಗಳ ಬಗ್ಗೆ ನನ್ನ ಗಮನಕ್ಕೆ ತಂದು ನನ್ನ ಅನುಮೋದನೆ ಪಡೆದ ನಂತರವೇ ಡಿಪಿಎಆರ್ನಿಂದ ಆದೇಶ ಹೊರಡಿಸಬಹುದೆಂದು ಸ್ಪಷ್ಟವಾಗಿ ಸೂಚನೆ ನೀಡಿದ್ದೇನೆ. ಆದರೆ, ಮೇ 9ರಂದು ಹೊರಡಿಸಿದ ಆದೇಶದಲ್ಲಿ ನನ್ನ ಅನುಮೋದನೆ ಪಡೆಯದೆ ಕೆಲವು ಮುಖ್ಯ ಎಂಜಿನಿಯರ್ಗಳನ್ನು ಜಲಸಂಪನ್ಮೂಲ ಇಲಾಖೆಗೆ ವರ್ಗಾವಣೆ ಮಾಡಿರುವುದು ನನ್ನ ಗಮನಕ್ಕೆ ಬಂದಿದೆ. ನನ್ನ ಸೂಚನೆಯನ್ನು ಕಡೆಗಣಿಸಿ ಆದೇಶ ಹೊರಡಿಸಿರುವುದನ್ನು ನಾನು ಆಕ್ಷೇಪಿಸುತ್ತಿದ್ದೇನೆ. ಆದುದರಿಂದ ಈ ಆದೇಶವನ್ನು ಕೂಡಲೇ ವಾಪಸು ಪಡೆಯಬೇಕು. ಇಂತಹ ವಿಚಾರಗಳ ಬಗ್ಗೆ ಯಾವುದೇ ಆದೇಶ ಹೊರಡಿಸಬೇಕಾದರೆ ನನ್ನ ಪೂರ್ವಾನುಮತಿ ಪಡೆಯಬೇಕು’ ಎಂದು ಮುಖ್ಯ ಕಾರ್ಯದರ್ಶಿಗೆ ಮೇ 13ರಂದು ಬರೆದಿರುವ ಟಿಪ್ಪಣಿಯಲ್ಲಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ.