ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಜಿತ್ ಪವಾರ್ ಅವರು ಇತಿಹಾಸವನ್ನೊಮ್ಮೆ ತೆಗೆದು ನೋಡಬೇಕು. ಅವರ ಮಾತಿನಿಂದಲೇ ಹಿಂದೆ ಅವರ ಸರ್ಕಾರದಲ್ಲಿ ಏನಾಗಿದೆ ಎನ್ನುವುದರ ಆತ್ಮಾವಲೋಕನ ಮಾಡಿಕೊಳ್ಳಲಿ. ಗಡಿ ವಿವಾದ ಮುಗಿದ ಅಧ್ಯಾಯ. ಸೂರ್ಯ ಚಂದ್ರರಿರುವವರೆಗೂ ಬೆಳಗಾವಿ ನಮ್ಮದು ಎಂದು ಸ್ಪಷ್ಟಪಡಿಸಿದರು.