<p><strong>ಬೆಂಗಳೂರು:</strong>ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧದಪ್ರತಿಭಟನೆ ಕಾವನ್ನುವಿಶಿಷ್ಟ ರೀತಿಯಲ್ಲಿ ತಣ್ಣಗಾಗಿಸಿದಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋಡ್ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಕಾಯ್ದೆ ಬೆಂಬಲಿಗರುರಾಥೋಡ್ ಅವರನ್ನು ಭಾನುವಾರ ಆರತಿ ಮಾಡಿ, ಗುಲಾಬಿ ಹೂ ನೀಡಿ ಅಭಿನಂದಿಸಿದ್ದಾರೆ.</p>.<p>ನಗರದೆಲ್ಲಡೆ ಮೂರು ದಿನಗಳ ಕಾಲ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತಾದರೂ ಅದನ್ನು ಲೆಕ್ಕಿಸದೆ ಶುಕ್ರವಾರಕೆಲವು ಸಂಘಟನೆಗಳು ಟೌನ್ಹಾಲ್ ಬಳಿ ಸೇರಿ ಪ್ರತಿಭಟನೆ ನಡೆಸಿದ್ದವು. ಆ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಕುಳ್ಳಿರಿಸಿಕೊಂಡುಮಾತನಾಡಿದ್ದ ಚೇತನ್, ‘ಹಿಂಸೆಯನ್ನು ಸೃಷ್ಟಿಸುವವರು ನಮ್ಮ–ನಿಮ್ಮ ನಡುವೆಯೇ ಇದ್ದಾರೆ. ಹಿಂಸೆ ನಮ್ಮ ಗುರಿಯಾಗಬಾರದು. ನಾನು ನಿಮ್ಮವನೇ ಎನಿಸಿದರೆ, ನನ್ಮ ಮೇಲೆ ಭರವಸೆ ಇದ್ದರೆ ನಾನು ಹೇಳುವ ಹಾಡಿಗೆ ಧ್ವನಿಗೂಡಿಸಿ’ ಎಂದು ರಾಷ್ಟ್ರಗೀತೆ ಹಾಡಿ ಪ್ರತಿಭಟನಕಾರರ ಮನವೊಲಿಸಿದ್ದರು. ಈ ನಡೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿತ್ತು.</p>.<p>ಇಂತಹ ಬಿಗಡಾಯಿಸಿದ ಪರಿಸ್ಥಿತಿಯಲ್ಲಿಯೂ ಜನರಿಗೆ ಅರಿವು ಮೂಡಿಸಿರುವ ಪ್ರಯತ್ನ ಅತ್ಯುತ್ತಮ ಎಂದು ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಸಹ ಟ್ವೀಟ್ ಮಾಡಿದ್ದರು.</p>.<p><strong>ಇನ್ನಷ್ಟು...</strong></p>.<p><a href="https://www.prajavani.net/district/bengaluru-city/dcp-chetan-sing-national-anthem-and-cool-down-the-protesters-691870.html" target="_blank">ರಾಷ್ಟ್ರಭಕ್ತಿ ಪ್ರೇರೇಪಿಸಿ ಪ್ರತಿಭಟನೆ ಕಿಚ್ಚು ತಣ್ಣಗಾಗಿಸಿದ ಡಿಸಿಪಿ ಚೇತನ್</a></p>.<p><a href="https://www.prajavani.net/district/bengaluru-city/bangalore-caa-supporters-at-townhall-692380.html" target="_blank">ಬೆಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪರ ಬಲ ಪ್ರದರ್ಶನ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧದಪ್ರತಿಭಟನೆ ಕಾವನ್ನುವಿಶಿಷ್ಟ ರೀತಿಯಲ್ಲಿ ತಣ್ಣಗಾಗಿಸಿದಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋಡ್ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಕಾಯ್ದೆ ಬೆಂಬಲಿಗರುರಾಥೋಡ್ ಅವರನ್ನು ಭಾನುವಾರ ಆರತಿ ಮಾಡಿ, ಗುಲಾಬಿ ಹೂ ನೀಡಿ ಅಭಿನಂದಿಸಿದ್ದಾರೆ.</p>.<p>ನಗರದೆಲ್ಲಡೆ ಮೂರು ದಿನಗಳ ಕಾಲ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತಾದರೂ ಅದನ್ನು ಲೆಕ್ಕಿಸದೆ ಶುಕ್ರವಾರಕೆಲವು ಸಂಘಟನೆಗಳು ಟೌನ್ಹಾಲ್ ಬಳಿ ಸೇರಿ ಪ್ರತಿಭಟನೆ ನಡೆಸಿದ್ದವು. ಆ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಕುಳ್ಳಿರಿಸಿಕೊಂಡುಮಾತನಾಡಿದ್ದ ಚೇತನ್, ‘ಹಿಂಸೆಯನ್ನು ಸೃಷ್ಟಿಸುವವರು ನಮ್ಮ–ನಿಮ್ಮ ನಡುವೆಯೇ ಇದ್ದಾರೆ. ಹಿಂಸೆ ನಮ್ಮ ಗುರಿಯಾಗಬಾರದು. ನಾನು ನಿಮ್ಮವನೇ ಎನಿಸಿದರೆ, ನನ್ಮ ಮೇಲೆ ಭರವಸೆ ಇದ್ದರೆ ನಾನು ಹೇಳುವ ಹಾಡಿಗೆ ಧ್ವನಿಗೂಡಿಸಿ’ ಎಂದು ರಾಷ್ಟ್ರಗೀತೆ ಹಾಡಿ ಪ್ರತಿಭಟನಕಾರರ ಮನವೊಲಿಸಿದ್ದರು. ಈ ನಡೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿತ್ತು.</p>.<p>ಇಂತಹ ಬಿಗಡಾಯಿಸಿದ ಪರಿಸ್ಥಿತಿಯಲ್ಲಿಯೂ ಜನರಿಗೆ ಅರಿವು ಮೂಡಿಸಿರುವ ಪ್ರಯತ್ನ ಅತ್ಯುತ್ತಮ ಎಂದು ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಸಹ ಟ್ವೀಟ್ ಮಾಡಿದ್ದರು.</p>.<p><strong>ಇನ್ನಷ್ಟು...</strong></p>.<p><a href="https://www.prajavani.net/district/bengaluru-city/dcp-chetan-sing-national-anthem-and-cool-down-the-protesters-691870.html" target="_blank">ರಾಷ್ಟ್ರಭಕ್ತಿ ಪ್ರೇರೇಪಿಸಿ ಪ್ರತಿಭಟನೆ ಕಿಚ್ಚು ತಣ್ಣಗಾಗಿಸಿದ ಡಿಸಿಪಿ ಚೇತನ್</a></p>.<p><a href="https://www.prajavani.net/district/bengaluru-city/bangalore-caa-supporters-at-townhall-692380.html" target="_blank">ಬೆಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪರ ಬಲ ಪ್ರದರ್ಶನ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>