<p><strong>ಬೆಳಗಾವಿ:</strong> ಇಲ್ಲಿನ ಮಹಾನಗರ ಪಾಲಿಕೆ ಕಚೇರಿ ಎದುರು ಹಾರಿಸಿರುವ ಕನ್ನಡ ಬಾವುಟವನ್ನು ಯಾವುದೇ ಕಾರಣಕ್ಕೂ ತೆಗೆಯಬಾರದೆಂದು ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಹಗಲು ರಾತ್ರಿ ಎನ್ನದೇ ಕಾವಲು ನೀಡುತ್ತಿದ್ದರೆ ಮತ್ತೊಂದೆಡೆ, ಮಹಾರಾಷ್ಟ್ರ ಏಕೀಕರಣ ಯುವ ಸಮಿತಿಯವರು ಈ ಬಾವುಟವನ್ನು ಡಿ. 31ರೊಳಗೆ ತೆರವುಗೊಳಿಸಬೇಕು ಎಂದು ಮಂಗಳವಾರ ನಗರ ಪೊಲೀಸ್ ಆಯುಕ್ತರಿಗೆ ಗಡುವು ನೀಡಿದ್ದಾರೆ.</p>.<p>ಹಲವು ವರ್ಷಗಳ ಹೋರಾಟದ ನಂತರ, ಪಾಲಿಕೆ ಕಚೇರಿ ಎದುರು ಸೋಮವಾರ ದಿಢೀರನೆ ಕಂಬ ನೆಟ್ಟು, ಕನ್ನಡ ಬಾವುಟ ಹಾರಿಸಲಾಗಿತ್ತು. ಈ ಹಿಂದೆ ಕನ್ನಡ ಬಾವುಟ ಹಾರಿಸಿದ್ದಾಗ ಹಿಂದೆಯೇ ಪೊಲೀಸರು ತೆರವುಗೊಳಿಸಿದ್ದರು. ಈಗಲೂ ತೆರವುಗೊಳಿಸಬಹುದೆಂದು ಕನ್ನಡ ಪರ ಹೋರಾಟಗಾರರು ಕಂಬ ಹಾಗೂ ಬಾವುಟಕ್ಕೆ ಕಾವಲು ನೀಡಿದರು. ಕೊರೆವ ಚಳಿಯಲ್ಲೂ ಅಹೋರಾತ್ರಿ ಮಲಗಿದ್ದರು. ‘ಧ್ವಜಸ್ತಂಭ ತೆರವುಗೊಳಿಸಬಾರದು’ ಎಂದು ಒತ್ತಾಯಿಸಿದ್ದರು.</p>.<p><strong>ಎಂಇಎಸ್ ತಗಾದೆ:</strong> ‘ಮಹಾನಗರ ಪಾಲಿಕೆ ಕಚೇರಿ ಬಳಿ ಸೇರಿದಂತೆ ನಗರದ ರೈಲು ನಿಲ್ದಾಣ, ಪ್ರಾದೇಶಿಕ ಆಯುಕ್ತರ ಕಚೇರಿಯ ಬಳಿ ಕಾನೂನುಬಾಹಿರವಾಗಿ ಹಳದಿ– ಕೆಂಪು ಬಣ್ಣದ ಧ್ವಜ ಹಾರಿಸಲಾಗಿದೆ. ಈ ಧ್ವಜಕ್ಕೆ ಮಾನ್ಯತೆ ಸಿಕ್ಕಿಲ್ಲ.<br />ರಾಷ್ಟ್ರಧ್ವಜದ ಎದುರು ಹಾರಿಸಿ, ರಾಷ್ಟ್ರೀಯ ಭಾವೈಕ್ಯಕ್ಕೆ ಧಕ್ಕೆ ತರಲಾಗಿದೆ. ಬಾವುಟ ಹಾರಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಮಹಾರಾಷ್ಟ್ರ ಏಕೀಕರಣ ಯುವಸಮಿತಿಯ ಸದಸ್ಯರು ಪೊಲೀಸ್ ಆಯುಕ್ತರಿಗೆ ದೂರು ನೀಡಿದರು.</p>.<p>‘ಪಾಲಿಕೆ ಎದುರಿನ ಕನ್ನಡ ಬಾವುಟವನ್ನು ಡಿ. 31ರೊಳಗೆ ತೆರವುಗೊಳಿಸಬೇಕು. ಇಲ್ಲವಾದಲ್ಲಿ ನಾವು ಅಲ್ಲಿ ಭಗವಾಧ್ವಜ ಹಾಕಬೇಕಾಗುತ್ತದೆ’ ಎಂದು ಸವಾಲು ಹಾಕಿದರು.</p>.<p><strong>ಬಾವುಟ ಹಾರಿಸುವ ಸ್ತಂಭಕ್ಕೆ ಧಕ್ಕೆ</strong><br />ರಾಣಿ ಚನ್ನಮ್ಮ ವೃತ್ತದ ಪ್ರತಿಮೆ ಬಳಿ ಕನ್ನಡ ಬಾವುಟ ಹಾರಿಸಲು ಇದ್ದ ಸ್ತಂಭ ಮುರಿದಿರುವುದು ಹಾಗೂ ಆ ಜಾಗದಲ್ಲಿ ಚಿಕ್ಕ ಕಂಬ ಹಾಕಿರುವುದಕ್ಕೆ ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದವು. ಕಿಡಿಗೇಡಿಗಳೇ ಇದನ್ನು ಮಾಡಿರಬಹುದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದವು.</p>.<p>‘ವೃತ್ತದ ಬಳಿಯ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಕಬ್ಬಿನ ಲಾರಿ ಸಾಗುವಾಗ ವೈರ್ ತಗುಲಿ ಕನ್ನಡ ಬಾವುಟವಿದ್ದ ಕಂಬ ಮುರಿದುಬಿದ್ದಿರುವುದು ಗೊತ್ತಾಗಿದೆ’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು. ದೃಶ್ಯಾವಳಿಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಡಲಾಯಿತು. ಇದರೊಂದಿಗೆ ಗೊಂದಲ ಬಗೆಹರಿಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಇಲ್ಲಿನ ಮಹಾನಗರ ಪಾಲಿಕೆ ಕಚೇರಿ ಎದುರು ಹಾರಿಸಿರುವ ಕನ್ನಡ ಬಾವುಟವನ್ನು ಯಾವುದೇ ಕಾರಣಕ್ಕೂ ತೆಗೆಯಬಾರದೆಂದು ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಹಗಲು ರಾತ್ರಿ ಎನ್ನದೇ ಕಾವಲು ನೀಡುತ್ತಿದ್ದರೆ ಮತ್ತೊಂದೆಡೆ, ಮಹಾರಾಷ್ಟ್ರ ಏಕೀಕರಣ ಯುವ ಸಮಿತಿಯವರು ಈ ಬಾವುಟವನ್ನು ಡಿ. 31ರೊಳಗೆ ತೆರವುಗೊಳಿಸಬೇಕು ಎಂದು ಮಂಗಳವಾರ ನಗರ ಪೊಲೀಸ್ ಆಯುಕ್ತರಿಗೆ ಗಡುವು ನೀಡಿದ್ದಾರೆ.</p>.<p>ಹಲವು ವರ್ಷಗಳ ಹೋರಾಟದ ನಂತರ, ಪಾಲಿಕೆ ಕಚೇರಿ ಎದುರು ಸೋಮವಾರ ದಿಢೀರನೆ ಕಂಬ ನೆಟ್ಟು, ಕನ್ನಡ ಬಾವುಟ ಹಾರಿಸಲಾಗಿತ್ತು. ಈ ಹಿಂದೆ ಕನ್ನಡ ಬಾವುಟ ಹಾರಿಸಿದ್ದಾಗ ಹಿಂದೆಯೇ ಪೊಲೀಸರು ತೆರವುಗೊಳಿಸಿದ್ದರು. ಈಗಲೂ ತೆರವುಗೊಳಿಸಬಹುದೆಂದು ಕನ್ನಡ ಪರ ಹೋರಾಟಗಾರರು ಕಂಬ ಹಾಗೂ ಬಾವುಟಕ್ಕೆ ಕಾವಲು ನೀಡಿದರು. ಕೊರೆವ ಚಳಿಯಲ್ಲೂ ಅಹೋರಾತ್ರಿ ಮಲಗಿದ್ದರು. ‘ಧ್ವಜಸ್ತಂಭ ತೆರವುಗೊಳಿಸಬಾರದು’ ಎಂದು ಒತ್ತಾಯಿಸಿದ್ದರು.</p>.<p><strong>ಎಂಇಎಸ್ ತಗಾದೆ:</strong> ‘ಮಹಾನಗರ ಪಾಲಿಕೆ ಕಚೇರಿ ಬಳಿ ಸೇರಿದಂತೆ ನಗರದ ರೈಲು ನಿಲ್ದಾಣ, ಪ್ರಾದೇಶಿಕ ಆಯುಕ್ತರ ಕಚೇರಿಯ ಬಳಿ ಕಾನೂನುಬಾಹಿರವಾಗಿ ಹಳದಿ– ಕೆಂಪು ಬಣ್ಣದ ಧ್ವಜ ಹಾರಿಸಲಾಗಿದೆ. ಈ ಧ್ವಜಕ್ಕೆ ಮಾನ್ಯತೆ ಸಿಕ್ಕಿಲ್ಲ.<br />ರಾಷ್ಟ್ರಧ್ವಜದ ಎದುರು ಹಾರಿಸಿ, ರಾಷ್ಟ್ರೀಯ ಭಾವೈಕ್ಯಕ್ಕೆ ಧಕ್ಕೆ ತರಲಾಗಿದೆ. ಬಾವುಟ ಹಾರಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಮಹಾರಾಷ್ಟ್ರ ಏಕೀಕರಣ ಯುವಸಮಿತಿಯ ಸದಸ್ಯರು ಪೊಲೀಸ್ ಆಯುಕ್ತರಿಗೆ ದೂರು ನೀಡಿದರು.</p>.<p>‘ಪಾಲಿಕೆ ಎದುರಿನ ಕನ್ನಡ ಬಾವುಟವನ್ನು ಡಿ. 31ರೊಳಗೆ ತೆರವುಗೊಳಿಸಬೇಕು. ಇಲ್ಲವಾದಲ್ಲಿ ನಾವು ಅಲ್ಲಿ ಭಗವಾಧ್ವಜ ಹಾಕಬೇಕಾಗುತ್ತದೆ’ ಎಂದು ಸವಾಲು ಹಾಕಿದರು.</p>.<p><strong>ಬಾವುಟ ಹಾರಿಸುವ ಸ್ತಂಭಕ್ಕೆ ಧಕ್ಕೆ</strong><br />ರಾಣಿ ಚನ್ನಮ್ಮ ವೃತ್ತದ ಪ್ರತಿಮೆ ಬಳಿ ಕನ್ನಡ ಬಾವುಟ ಹಾರಿಸಲು ಇದ್ದ ಸ್ತಂಭ ಮುರಿದಿರುವುದು ಹಾಗೂ ಆ ಜಾಗದಲ್ಲಿ ಚಿಕ್ಕ ಕಂಬ ಹಾಕಿರುವುದಕ್ಕೆ ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದವು. ಕಿಡಿಗೇಡಿಗಳೇ ಇದನ್ನು ಮಾಡಿರಬಹುದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದವು.</p>.<p>‘ವೃತ್ತದ ಬಳಿಯ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಕಬ್ಬಿನ ಲಾರಿ ಸಾಗುವಾಗ ವೈರ್ ತಗುಲಿ ಕನ್ನಡ ಬಾವುಟವಿದ್ದ ಕಂಬ ಮುರಿದುಬಿದ್ದಿರುವುದು ಗೊತ್ತಾಗಿದೆ’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು. ದೃಶ್ಯಾವಳಿಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಡಲಾಯಿತು. ಇದರೊಂದಿಗೆ ಗೊಂದಲ ಬಗೆಹರಿಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>