<p><strong>ಬೆಂಗಳೂರು: </strong>‘ಅನಧಿಕೃತ ಧಾರ್ಮಿಕ ಕಟ್ಟಡ ತೆರವುಗೊಳಿಸುವಲ್ಲಿ ಸಾಕಷ್ಟು ವಿಳಂಬವಾಗುತ್ತಿದ್ದು, ಇಂತಹ ಕಟ್ಟಡಗಳ ತೆರವಿಗೆ ರಾಜ್ಯ ಸರ್ಕಾರ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪರಸ್ಪರ ಸಹಕಾರದೊಂದಿಗೆ ಜಂಟಿ ಕಾರ್ಯಾಚರಣೆ ನಡೆಸುವ ಅಗತ್ಯವಿದೆ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.</p>.<p>ಸಾರ್ವಜನಿಕ ಸ್ಥಳಗಳಲ್ಲಿನ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಲು ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನ ಜಾರಿಗೊಳಿಸುವ ಹಿನ್ನೆಲೆಯಲ್ಲಿ ಹೈಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿಕೊಂಡಿದ್ದು, ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಮತ್ತು ಅಶೋಕ್ ಎಸ್.ಕಿಣಗಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಪ್ರತಿವಾದಿಗಳ ಪರ ವಕೀಲರು, ‘ಈ ಹಿಂದೆ ನೀಡಿರುವ ಆದೇಶದ ಅನುಪಾಲನಾ ವರದಿ ಸಲ್ಲಿಸಲು ಇನ್ನಷ್ಟು ಕಾಲಾವಕಾಶ ನೀಡಬೇಕು’ ಎಂದು ಕೋರಿದರು.</p>.<p>ಇದನ್ನು ಮಾನ್ಯ ಮಾಡಿದ ನ್ಯಾಯಪೀಠ,‘ಹೈಕೋರ್ಟ್ ಆದೇಶ ಹೊರಡಿಸಿದ2021ರ ಆಗಸ್ಟ್ 12ರಿಂದ ವಸ್ತುಸ್ಥಿತಿ ವರದಿ ಸಲ್ಲಿಸುವ ದಿನದವರೆಗೂ ಅನಧಿಕೃತ ಧಾರ್ಮಿಕ ಕಟ್ಟಡ ಗಳ ತೆರವಿಗೆ ಏನೆಲ್ಲಾ ಕ್ರಮ ಕೈಗೊಳ್ಳಲಾಗಿದೆ ಮತ್ತು ತೆರವುಗೊಳಿರುವ ಕಟ್ಟಡಗಳ ಅಂಕಿ-ಅಂಶಗಳನ್ನು ನಿಗದಿತ ಚಾರ್ಟ್ (ವಿವರಣಾತ್ಮಕ ನಕ್ಷೆ ಒಳಗೊಂಡ ಪಟ್ಟಿ) ರೂಪದಲ್ಲಿ ಸಲ್ಲಿಸಿ‘ ಎಂದು ನಿರ್ದೇಶಿಸಿ ವಿಚಾರಣೆಯನ್ನು 2023ರ ಜನವರಿ 12ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಅನಧಿಕೃತ ಧಾರ್ಮಿಕ ಕಟ್ಟಡ ತೆರವುಗೊಳಿಸುವಲ್ಲಿ ಸಾಕಷ್ಟು ವಿಳಂಬವಾಗುತ್ತಿದ್ದು, ಇಂತಹ ಕಟ್ಟಡಗಳ ತೆರವಿಗೆ ರಾಜ್ಯ ಸರ್ಕಾರ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪರಸ್ಪರ ಸಹಕಾರದೊಂದಿಗೆ ಜಂಟಿ ಕಾರ್ಯಾಚರಣೆ ನಡೆಸುವ ಅಗತ್ಯವಿದೆ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.</p>.<p>ಸಾರ್ವಜನಿಕ ಸ್ಥಳಗಳಲ್ಲಿನ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಲು ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನ ಜಾರಿಗೊಳಿಸುವ ಹಿನ್ನೆಲೆಯಲ್ಲಿ ಹೈಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿಕೊಂಡಿದ್ದು, ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಮತ್ತು ಅಶೋಕ್ ಎಸ್.ಕಿಣಗಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಪ್ರತಿವಾದಿಗಳ ಪರ ವಕೀಲರು, ‘ಈ ಹಿಂದೆ ನೀಡಿರುವ ಆದೇಶದ ಅನುಪಾಲನಾ ವರದಿ ಸಲ್ಲಿಸಲು ಇನ್ನಷ್ಟು ಕಾಲಾವಕಾಶ ನೀಡಬೇಕು’ ಎಂದು ಕೋರಿದರು.</p>.<p>ಇದನ್ನು ಮಾನ್ಯ ಮಾಡಿದ ನ್ಯಾಯಪೀಠ,‘ಹೈಕೋರ್ಟ್ ಆದೇಶ ಹೊರಡಿಸಿದ2021ರ ಆಗಸ್ಟ್ 12ರಿಂದ ವಸ್ತುಸ್ಥಿತಿ ವರದಿ ಸಲ್ಲಿಸುವ ದಿನದವರೆಗೂ ಅನಧಿಕೃತ ಧಾರ್ಮಿಕ ಕಟ್ಟಡ ಗಳ ತೆರವಿಗೆ ಏನೆಲ್ಲಾ ಕ್ರಮ ಕೈಗೊಳ್ಳಲಾಗಿದೆ ಮತ್ತು ತೆರವುಗೊಳಿರುವ ಕಟ್ಟಡಗಳ ಅಂಕಿ-ಅಂಶಗಳನ್ನು ನಿಗದಿತ ಚಾರ್ಟ್ (ವಿವರಣಾತ್ಮಕ ನಕ್ಷೆ ಒಳಗೊಂಡ ಪಟ್ಟಿ) ರೂಪದಲ್ಲಿ ಸಲ್ಲಿಸಿ‘ ಎಂದು ನಿರ್ದೇಶಿಸಿ ವಿಚಾರಣೆಯನ್ನು 2023ರ ಜನವರಿ 12ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>