<p><strong>ಬೆಂಗಳೂರು</strong>: ‘ಪಿಎಸ್ಐ ಪರಶುರಾಮ್ ಸಾವಿಗೆ ನಾನು ಮತ್ತು ನನ್ನ ಪುತ್ರ ಕಾರಣ ಎಂಬ ಆರೋಪ ಸತ್ಯಕ್ಕೆ ದೂರವಾದುದು. ನಾನು ಯಾವ ಪೊಲೀಸರಿಂದಲೂ ಹಣ ಕೇಳಿಲ್ಲ’ ಎಂದು ಯಾದಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಚನ್ನಾರೆಡ್ಡಿ ಹೇಳಿದರು.</p>.<p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಪರಶುರಾಮ್ ಸಾವಿನ ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿದೆ. ತನಿಖೆಯ ಮೂಲಕ ಸತ್ಯಾಸತ್ಯತೆ ಹೊರಗೆ ಬರಲಿ. ಕಾನೂನಿಗೆ ನಾನು ತಲೆ ಬಾಗುತ್ತೇನೆ’ ಎಂದರು.</p>.<p>‘ಈ ಪ್ರಕರಣದಲ್ಲಿ ತಂದೆ, ಮಕ್ಕಳನ್ನು ಸೇರಿಸಬೇಕು ಎಂದು ಷಡ್ಯಂತ್ರ ಮಾಡಲಾಗುತ್ತಿದೆ’ ಎಂದು ಆರೋಪಿಸಿದ ಚನ್ನಾರೆಡ್ಡಿ, ‘ಸಿಐಡಿ ಅವರು ಕರೆ ಮಾಡಿದ ತಕ್ಷಣ ಹೋಗಿ ತನಿಖೆ ಸಹಕರಿಸುತ್ತೇನೆ. ತನಿಖಾ ವರದಿ ಬಂದ ಬಳಿಕ ಇದು ಷಡ್ಯಂತ್ರವೊ, ಸತ್ಯವೊ, ಅಸತ್ಯವೊ ಎನ್ನುವುದು ಗೊತ್ತಾಗಲಿದೆ’ ಎಂದರು.</p>.<p>ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಎಫ್ಐಆರ್ ದಾಖಲಿಸಲು ವಿಳಂಬದ ವಿಚಾರ ಪೊಲೀಸರಿಗೆ ಬಿಟ್ಟಿದ್ದು. ಅದರಲ್ಲಿ ನಾನು ಭಾಗಿ ಆಗಿಲ್ಲ. ಆ ಕುರಿತು ಯಾರ ಜೊತೆಗೂ ಮಾತನಾಡಿಲ್ಲ’ ಎಂದರು.</p>.<p>‘ಮುಖ್ಯಮಂತ್ರಿಯನ್ನು ಭೇಟಿ ಮಾಡಿದ್ದೇನೆ. ನಾವೆಲ್ಲರೂ ಜೊತೆಗಿರುತ್ತೇವೆ, ಧೈರ್ಯವಾಗಿರುವಂತೆ ಅವರು ಹೇಳಿದರು. ಹಾಗೆಂದು, ಯಾವ ವಿಚಾರವನ್ನು ಅವರಿಗೆ ನಾನು ತಿಳಿಸಿಲ್ಲ. ಗುಪ್ತಚರ ಇಲಾಖೆಯಿಂದ ಅವರಿಗೆ ಮಾಹಿತಿ ಹೋಗಿರುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಪಿಎಸ್ಐ ಪರಶುರಾಮ್ ಸಾವಿಗೆ ನಾನು ಮತ್ತು ನನ್ನ ಪುತ್ರ ಕಾರಣ ಎಂಬ ಆರೋಪ ಸತ್ಯಕ್ಕೆ ದೂರವಾದುದು. ನಾನು ಯಾವ ಪೊಲೀಸರಿಂದಲೂ ಹಣ ಕೇಳಿಲ್ಲ’ ಎಂದು ಯಾದಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಚನ್ನಾರೆಡ್ಡಿ ಹೇಳಿದರು.</p>.<p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಪರಶುರಾಮ್ ಸಾವಿನ ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿದೆ. ತನಿಖೆಯ ಮೂಲಕ ಸತ್ಯಾಸತ್ಯತೆ ಹೊರಗೆ ಬರಲಿ. ಕಾನೂನಿಗೆ ನಾನು ತಲೆ ಬಾಗುತ್ತೇನೆ’ ಎಂದರು.</p>.<p>‘ಈ ಪ್ರಕರಣದಲ್ಲಿ ತಂದೆ, ಮಕ್ಕಳನ್ನು ಸೇರಿಸಬೇಕು ಎಂದು ಷಡ್ಯಂತ್ರ ಮಾಡಲಾಗುತ್ತಿದೆ’ ಎಂದು ಆರೋಪಿಸಿದ ಚನ್ನಾರೆಡ್ಡಿ, ‘ಸಿಐಡಿ ಅವರು ಕರೆ ಮಾಡಿದ ತಕ್ಷಣ ಹೋಗಿ ತನಿಖೆ ಸಹಕರಿಸುತ್ತೇನೆ. ತನಿಖಾ ವರದಿ ಬಂದ ಬಳಿಕ ಇದು ಷಡ್ಯಂತ್ರವೊ, ಸತ್ಯವೊ, ಅಸತ್ಯವೊ ಎನ್ನುವುದು ಗೊತ್ತಾಗಲಿದೆ’ ಎಂದರು.</p>.<p>ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಎಫ್ಐಆರ್ ದಾಖಲಿಸಲು ವಿಳಂಬದ ವಿಚಾರ ಪೊಲೀಸರಿಗೆ ಬಿಟ್ಟಿದ್ದು. ಅದರಲ್ಲಿ ನಾನು ಭಾಗಿ ಆಗಿಲ್ಲ. ಆ ಕುರಿತು ಯಾರ ಜೊತೆಗೂ ಮಾತನಾಡಿಲ್ಲ’ ಎಂದರು.</p>.<p>‘ಮುಖ್ಯಮಂತ್ರಿಯನ್ನು ಭೇಟಿ ಮಾಡಿದ್ದೇನೆ. ನಾವೆಲ್ಲರೂ ಜೊತೆಗಿರುತ್ತೇವೆ, ಧೈರ್ಯವಾಗಿರುವಂತೆ ಅವರು ಹೇಳಿದರು. ಹಾಗೆಂದು, ಯಾವ ವಿಚಾರವನ್ನು ಅವರಿಗೆ ನಾನು ತಿಳಿಸಿಲ್ಲ. ಗುಪ್ತಚರ ಇಲಾಖೆಯಿಂದ ಅವರಿಗೆ ಮಾಹಿತಿ ಹೋಗಿರುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>