<p><strong>ಮುದ್ದೇಬಿಹಾಳ (ವಿಜಯಪುರ): </strong>ದನ ಮೇಯಿಸಲೆಂದು ಹೋಗಿದ್ದ ಶಾಂತಮ್ಮ ಭೀಮನಗೌಡ ನಾಗೋಡ (20) ಹಾಗೂ ಗುರುಸಂಗಮ್ಮ ಭೀಮಪ್ಪ ಮುದೂರ (8) ಎಂಬುವವರು ತಾಲ್ಲೂಕಿನ ಹುನಕುಂಟಿ ಗ್ರಾಮದಲ್ಲಿ ಕೃಷ್ಣಾ ನದಿಯಲ್ಲಿ ಬುಧವಾರ ಮುಳುಗಿ ಸಾವನ್ನಪ್ಪಿದ್ದಾರೆ.</p>.<p>ದನಗಳಿಗೆ ನೀರು ಕುಡಿಸುವ ವೇಳೆ ಹೊಳೆಯಲ್ಲಿಯೇ ಇದ್ದ ಆಳವಾದ ಕಂದಕಕ್ಕೆ ಮೊದಲು ಗುರುಸಂಗಮ್ಮ ಬಿದ್ದಿದ್ದಾಳೆ. ಅವಳನ್ನು ರಕ್ಷಿಸಲು ಹೋದ ಶಾಂತಮ್ಮ ಸಹ ಮುಳಗಿ ಪ್ರಾಣ ಕಳೆದುಕೊಂಡಿದ್ದಾರೆ.</p>.<p>ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p class="Subhead"><strong>4 ಲಕ್ಷ ಕ್ಯುಸೆಕ್ ನೀರು ಹೊರಕ್ಕೆ: </strong>ಆಲಮಟ್ಟಿ ಜಲಾಶಯದಿಂದ ಬುಧವಾರ 4 ಲಕ್ಷ ಕ್ಯುಸೆಕ್ ನೀರನ್ನು ಹೊರ ಬಿಡಲಾಗಿದ್ದು ಗುರುವಾರ ಈ ಪ್ರಮಾಣ ಇನ್ನಷ್ಟು ಹೆಚ್ಚಲಿದೆ.</p>.<p>ಈ ಬಗ್ಗೆ ಕೃಷ್ಣಾ ತೀರದ ಗ್ರಾಮಗಳಲ್ಲಿ ಡಂಗೂರ ಸಾರಲಾಗಿದ್ದು, ತೀವ್ರಕಟ್ಟೆಚ್ಚರದಿಂದ ಇರಲುಸೂಚಿಸಲಾಗಿದೆ. ಈಗಾಗಲೇ<br />ತಾಲ್ಲೂಕಿನ ಕೃಷ್ಣಾ ತೀರದ 100 ಎಕರೆಗೂ ಅಧಿಕ ಪ್ರದೇಶದಲ್ಲಿ ಬೆಳೆದ ಕಬ್ಬು, ಬಾಳೆ, ಸೂರ್ಯಕಾಂತಿ ಸೇರಿದಂತೆ ಹಲವು ಬೆಳೆಗಳು ಜಲಾವೃತಗೊಂಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುದ್ದೇಬಿಹಾಳ (ವಿಜಯಪುರ): </strong>ದನ ಮೇಯಿಸಲೆಂದು ಹೋಗಿದ್ದ ಶಾಂತಮ್ಮ ಭೀಮನಗೌಡ ನಾಗೋಡ (20) ಹಾಗೂ ಗುರುಸಂಗಮ್ಮ ಭೀಮಪ್ಪ ಮುದೂರ (8) ಎಂಬುವವರು ತಾಲ್ಲೂಕಿನ ಹುನಕುಂಟಿ ಗ್ರಾಮದಲ್ಲಿ ಕೃಷ್ಣಾ ನದಿಯಲ್ಲಿ ಬುಧವಾರ ಮುಳುಗಿ ಸಾವನ್ನಪ್ಪಿದ್ದಾರೆ.</p>.<p>ದನಗಳಿಗೆ ನೀರು ಕುಡಿಸುವ ವೇಳೆ ಹೊಳೆಯಲ್ಲಿಯೇ ಇದ್ದ ಆಳವಾದ ಕಂದಕಕ್ಕೆ ಮೊದಲು ಗುರುಸಂಗಮ್ಮ ಬಿದ್ದಿದ್ದಾಳೆ. ಅವಳನ್ನು ರಕ್ಷಿಸಲು ಹೋದ ಶಾಂತಮ್ಮ ಸಹ ಮುಳಗಿ ಪ್ರಾಣ ಕಳೆದುಕೊಂಡಿದ್ದಾರೆ.</p>.<p>ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p class="Subhead"><strong>4 ಲಕ್ಷ ಕ್ಯುಸೆಕ್ ನೀರು ಹೊರಕ್ಕೆ: </strong>ಆಲಮಟ್ಟಿ ಜಲಾಶಯದಿಂದ ಬುಧವಾರ 4 ಲಕ್ಷ ಕ್ಯುಸೆಕ್ ನೀರನ್ನು ಹೊರ ಬಿಡಲಾಗಿದ್ದು ಗುರುವಾರ ಈ ಪ್ರಮಾಣ ಇನ್ನಷ್ಟು ಹೆಚ್ಚಲಿದೆ.</p>.<p>ಈ ಬಗ್ಗೆ ಕೃಷ್ಣಾ ತೀರದ ಗ್ರಾಮಗಳಲ್ಲಿ ಡಂಗೂರ ಸಾರಲಾಗಿದ್ದು, ತೀವ್ರಕಟ್ಟೆಚ್ಚರದಿಂದ ಇರಲುಸೂಚಿಸಲಾಗಿದೆ. ಈಗಾಗಲೇ<br />ತಾಲ್ಲೂಕಿನ ಕೃಷ್ಣಾ ತೀರದ 100 ಎಕರೆಗೂ ಅಧಿಕ ಪ್ರದೇಶದಲ್ಲಿ ಬೆಳೆದ ಕಬ್ಬು, ಬಾಳೆ, ಸೂರ್ಯಕಾಂತಿ ಸೇರಿದಂತೆ ಹಲವು ಬೆಳೆಗಳು ಜಲಾವೃತಗೊಂಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>