<p><strong>ನವದೆಹಲಿ:</strong> ಕರ್ನಾಟಕ ರಾಜ್ಯದಲ್ಲಿ ಮರಣದಂಡನೆ ಅರ್ಜಿಗಳು ಬಾಕಿ ಇರುವ ಬಗ್ಗೆ ವಿವರಗಳನ್ನು ನೀಡಲು ವಿಫಲವಾಗಿದ್ದಕ್ಕೆ ಹೈಕೋರ್ಟ್ ಅನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತು ಹಾಗೂ ಈ ಸಂಬಂಧ ಎರಡು ವಾರಗಳಲ್ಲಿ ರಿಜಿಸ್ಟ್ರಾರ್ ಜನರಲ್ ವಿವರ ನೀಡಬೇಕು ಎಂದು ನಿರ್ದೇಶನ ನೀಡಿತು. </p>.<p>ಪ್ರಕರಣವೊಂದರ ವಿಚಾರಣೆ ವೇಳೆ, ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದಿವಾಲಾ ಹಾಗೂ ಪಂಕಜ್ ಮಿತ್ತಲ್ ಅವರ ಪೀಠವು ದೇಶದಾದ್ಯಂತ ಬಾಕಿ ಇರುವ ಮರಣದಂಡನೆ ಅರ್ಜಿಗಳ ಕುರಿತು ವಿವರಗಳನ್ನು ಕೋರಿತು.</p>.<p>ಎಲ್ಲ ಹೈಕೋರ್ಟ್ಗಳು, ದುರದೃಷ್ಟವಶಾತ್ ಕರ್ನಾಟಕದ ಹೈಕೋರ್ಟ್ ಈ ವಿಷಯದಲ್ಲಿ ನ್ಯಾಯಾಲಯಕ್ಕೆ ಅಗತ್ಯವಾದ ದತ್ತಾಂಶ ಒದಗಿಸಲು ವಿಫಲವಾಗಿದೆ ಎಂದು ನ್ಯಾಯಪೀಠ ಗಮನಿಸಿತು.</p>.<p>‘ಅಗತ್ಯ ಮಾಹಿತಿ ಒದಗಿಸಲು ಏಕೆ ವಿಫಲರಾಗಿದ್ದಾರೆ ಎಂಬುದನ್ನು ಕರ್ನಾಟಕ ಹೈಕೋರ್ಟ್ನ ರಿಜಿಸ್ಟ್ರಾರ್ ಜನರಲ್ ವಿವರಿಸಬೇಕಾಗಿದೆ. ಈ ನಿಟ್ಟಿನಲ್ಲಿ ವಿವರಣೆ ನೀಡಲು ರಿಜಿಸ್ಟ್ರಾರ್ ಜನರಲ್ಗೆ ಎರಡು ವಾರಗಳ ಕಾಲಾವಕಾಶ ನೀಡಲಾಗಿದೆ‘ ಎಂದು ಪೀಠ ಹೇಳಿತು.</p>
<p><strong>ನವದೆಹಲಿ:</strong> ಕರ್ನಾಟಕ ರಾಜ್ಯದಲ್ಲಿ ಮರಣದಂಡನೆ ಅರ್ಜಿಗಳು ಬಾಕಿ ಇರುವ ಬಗ್ಗೆ ವಿವರಗಳನ್ನು ನೀಡಲು ವಿಫಲವಾಗಿದ್ದಕ್ಕೆ ಹೈಕೋರ್ಟ್ ಅನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತು ಹಾಗೂ ಈ ಸಂಬಂಧ ಎರಡು ವಾರಗಳಲ್ಲಿ ರಿಜಿಸ್ಟ್ರಾರ್ ಜನರಲ್ ವಿವರ ನೀಡಬೇಕು ಎಂದು ನಿರ್ದೇಶನ ನೀಡಿತು. </p>.<p>ಪ್ರಕರಣವೊಂದರ ವಿಚಾರಣೆ ವೇಳೆ, ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದಿವಾಲಾ ಹಾಗೂ ಪಂಕಜ್ ಮಿತ್ತಲ್ ಅವರ ಪೀಠವು ದೇಶದಾದ್ಯಂತ ಬಾಕಿ ಇರುವ ಮರಣದಂಡನೆ ಅರ್ಜಿಗಳ ಕುರಿತು ವಿವರಗಳನ್ನು ಕೋರಿತು.</p>.<p>ಎಲ್ಲ ಹೈಕೋರ್ಟ್ಗಳು, ದುರದೃಷ್ಟವಶಾತ್ ಕರ್ನಾಟಕದ ಹೈಕೋರ್ಟ್ ಈ ವಿಷಯದಲ್ಲಿ ನ್ಯಾಯಾಲಯಕ್ಕೆ ಅಗತ್ಯವಾದ ದತ್ತಾಂಶ ಒದಗಿಸಲು ವಿಫಲವಾಗಿದೆ ಎಂದು ನ್ಯಾಯಪೀಠ ಗಮನಿಸಿತು.</p>.<p>‘ಅಗತ್ಯ ಮಾಹಿತಿ ಒದಗಿಸಲು ಏಕೆ ವಿಫಲರಾಗಿದ್ದಾರೆ ಎಂಬುದನ್ನು ಕರ್ನಾಟಕ ಹೈಕೋರ್ಟ್ನ ರಿಜಿಸ್ಟ್ರಾರ್ ಜನರಲ್ ವಿವರಿಸಬೇಕಾಗಿದೆ. ಈ ನಿಟ್ಟಿನಲ್ಲಿ ವಿವರಣೆ ನೀಡಲು ರಿಜಿಸ್ಟ್ರಾರ್ ಜನರಲ್ಗೆ ಎರಡು ವಾರಗಳ ಕಾಲಾವಕಾಶ ನೀಡಲಾಗಿದೆ‘ ಎಂದು ಪೀಠ ಹೇಳಿತು.</p>