<p><strong>ಹುಬ್ಬಳ್ಳಿ: </strong>ಭಾನುವಾರ(ಫೆಬ್ರುವರಿ 10) ನಡೆಯಲಿರುವ ಲೋಕಸಭಾ ಚುನಾವಣಾರ್ಯಾಲಿ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವುದಾಗಿ ಧಾರವಾಡ ಎಸ್.ಪಿ ಕಚೇರಿಗೆ ಬೆದರಿಕೆ ಪತ್ರವೊಂದು ಬಂದಿರುವುದು ತಡವಾಗಿ ಬೆಳಕಿಗೆ ಬಂದಿದೆ.</p>.<p>ಬೆದರಿಕೆ ಪತ್ರವನ್ನು 10 ದಿನಗಳ ಹಿಂದೆಯೇ ಹಾವೇರಿಯಿಂದ ಧಾರವಾಡ ಎಸ್.ಪಿ ಕಚೇರಿಗೆ ಪೋಸ್ಟ್ ಮಾಡಿರುವುದು ಪ್ರಾಥಮಿಕ ಪರಿಶೀಲನೆಯಿಂದ ತಿಳಿದುಬಂದಿದೆ.</p>.<p>ಈ ಸಂಬಂಧ ಧಾರವಾಡ ಉಪನಗರ ಠಾಣೆಯಲ್ಲಿ ಫೆಬ್ರುವರಿ 9ರಂದುಪ್ರಕರಣ ದಾಖಲಾಗಿದೆ.</p>.<p>ಬೆದರಿಕೆ ಪತ್ರದ ಹಿನ್ನೆಲೆಯಲ್ಲಿ ಎರಡು ತನಿಖಾ ತಂಡಗಳನ್ನು ರಚಿಸಲಾಗಿದ್ದು, ತಂಡವು ಹಾವೇರಿಯಲ್ಲಿ ಪರಿಶೀಲನೆ ನಡೆಸಿದ್ದು, ಇದೊಂದು ನಕಲಿ ಬೆದರಿಕೆ ಪತ್ರ ಎಂದು ಖಚಿತ ಪಡಿಸಿದ್ದಾರೆ.</p>.<p>ಈ ಕುರಿತು ಪ್ರಜಾವಾಣಿಗೆ ಪ್ರತಿಕ್ರಿಯಿಸಿರುವ ಹಾವೇರಿ ಎಸ್.ಪಿ. ಪರಶುರಾಮ 'ಮೋದಿ ಹತ್ಯೆ ಮಾಡುವುದಾಗಿ ಧಾರವಾಡ ಎಸ್.ಪಿ ಕಚೇರಿಗೆ ಬಂದಿರುವ ಬೆದರಿಕೆ ಪತ್ರವು ನಕಲಿ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಪತ್ರದ ಹಿನ್ನೆಲೆಯಲ್ಲಿ ಪ್ರಧಾನಿ ಅವರಿಗೆ ಯಾವುದೇ ಅಪಾಯವಿಲ್ಲ. ಆದರೂ ಪ್ರಧಾನಿ ಸಮಾವೇಶದ ಭದ್ರತೆಯನ್ನು ಹೆಚ್ಚಿಸಲಾಗಿದೆ' ಎಂದರು.</p>.<p>ಸಮಾವೇಶಕ್ಕೆ ಪೊಲೀಸ್ ಸರ್ಪಗಾವಲು ಏರ್ಪಡಿಸಲಾಗಿದ್ದು,'ಪತ್ರದ ಕುರಿತು ಸಮಗ್ರ ತನಿಖೆ ಮುಂದುವರಿದಿದೆ' ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಭಾನುವಾರ(ಫೆಬ್ರುವರಿ 10) ನಡೆಯಲಿರುವ ಲೋಕಸಭಾ ಚುನಾವಣಾರ್ಯಾಲಿ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವುದಾಗಿ ಧಾರವಾಡ ಎಸ್.ಪಿ ಕಚೇರಿಗೆ ಬೆದರಿಕೆ ಪತ್ರವೊಂದು ಬಂದಿರುವುದು ತಡವಾಗಿ ಬೆಳಕಿಗೆ ಬಂದಿದೆ.</p>.<p>ಬೆದರಿಕೆ ಪತ್ರವನ್ನು 10 ದಿನಗಳ ಹಿಂದೆಯೇ ಹಾವೇರಿಯಿಂದ ಧಾರವಾಡ ಎಸ್.ಪಿ ಕಚೇರಿಗೆ ಪೋಸ್ಟ್ ಮಾಡಿರುವುದು ಪ್ರಾಥಮಿಕ ಪರಿಶೀಲನೆಯಿಂದ ತಿಳಿದುಬಂದಿದೆ.</p>.<p>ಈ ಸಂಬಂಧ ಧಾರವಾಡ ಉಪನಗರ ಠಾಣೆಯಲ್ಲಿ ಫೆಬ್ರುವರಿ 9ರಂದುಪ್ರಕರಣ ದಾಖಲಾಗಿದೆ.</p>.<p>ಬೆದರಿಕೆ ಪತ್ರದ ಹಿನ್ನೆಲೆಯಲ್ಲಿ ಎರಡು ತನಿಖಾ ತಂಡಗಳನ್ನು ರಚಿಸಲಾಗಿದ್ದು, ತಂಡವು ಹಾವೇರಿಯಲ್ಲಿ ಪರಿಶೀಲನೆ ನಡೆಸಿದ್ದು, ಇದೊಂದು ನಕಲಿ ಬೆದರಿಕೆ ಪತ್ರ ಎಂದು ಖಚಿತ ಪಡಿಸಿದ್ದಾರೆ.</p>.<p>ಈ ಕುರಿತು ಪ್ರಜಾವಾಣಿಗೆ ಪ್ರತಿಕ್ರಿಯಿಸಿರುವ ಹಾವೇರಿ ಎಸ್.ಪಿ. ಪರಶುರಾಮ 'ಮೋದಿ ಹತ್ಯೆ ಮಾಡುವುದಾಗಿ ಧಾರವಾಡ ಎಸ್.ಪಿ ಕಚೇರಿಗೆ ಬಂದಿರುವ ಬೆದರಿಕೆ ಪತ್ರವು ನಕಲಿ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಪತ್ರದ ಹಿನ್ನೆಲೆಯಲ್ಲಿ ಪ್ರಧಾನಿ ಅವರಿಗೆ ಯಾವುದೇ ಅಪಾಯವಿಲ್ಲ. ಆದರೂ ಪ್ರಧಾನಿ ಸಮಾವೇಶದ ಭದ್ರತೆಯನ್ನು ಹೆಚ್ಚಿಸಲಾಗಿದೆ' ಎಂದರು.</p>.<p>ಸಮಾವೇಶಕ್ಕೆ ಪೊಲೀಸ್ ಸರ್ಪಗಾವಲು ಏರ್ಪಡಿಸಲಾಗಿದ್ದು,'ಪತ್ರದ ಕುರಿತು ಸಮಗ್ರ ತನಿಖೆ ಮುಂದುವರಿದಿದೆ' ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>