<p><strong>ಬೆಂಗಳೂರು</strong>: ಕನ್ನಡಿಗರ ಮೇಲೆ ದೌರ್ಜನ್ಯಕ್ಕೆ ಮುಂದಾಗುವ ಎಂಇಎಸ್ ಸಂಘಟನೆಯನ್ನು ನಿಷೇಧಿಸುವಂತೆ ವಾಟಾಳ್ ನಾಗರಾಜ್ ನೇತೃತ್ವದ ವಿವಿಧ ಕನ್ನಡಪರ ಸಂಘಟನೆಗಳು ಶುಕ್ರವಾರ (ಡಿಸೆಂಬರ್ 31) ರಂದು ಕರೆ ನೀಡಿದ್ದ ಕರ್ನಾಟಕ ಬಂದ್ ವಾಪಸ್ ಪಡೆಯಲಾಗಿದೆ.</p>.<p>ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರ ಜತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಡೆಸಿದ ಸಭೆ ಯಶಸ್ವಿಯಾಗಿದೆ.</p>.<p>ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿರುವ ವಾಟಾಳ್ ನಾಗರಾಜ್, ಎಂಇಎಸ್ ನಿಷೇಧಿಸಲು ಮುಖ್ಯಮಂತ್ರಿ ಅವರು ಸಮಯ ಕೇಳಿದ್ದಾರೆ. ಅವರ ಮೇಲೆ ಭರವಸೆ ಇಟ್ಟು ಕರ್ನಾಟಕ ಬಂದ್ ಮುಂದೂಡಿದ್ದೇವೆ ಎಂದು ತಿಳಿಸಿದ್ದಾರೆ.</p>.<p>ಇದೇ ವೇಳೆ ಸಿಎಂ ಬೊಮ್ಮಾಯಿ ಅವರು, ನಮ್ಮ ಮನವಿ ಮೇರೆಗೆ ಬಂದ್ ಕೈ ಬಿಡಲು ನಿರ್ಧರಿಸಿದ್ದಾರೆ, ಅವರಿಗೆ ಧನ್ಯವಾದಗಳು, ಎಂಇಎಸ್ ಬಗ್ಗೆ ಶೀಘ್ರದಲ್ಲೇ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.</p>.<p>ಸಭೆಯಲ್ಲಿ ಪ್ರವೀಣ್ ಶೆಟ್ಟಿ ಸೇರಿದಂತೆ ಇತರ ನಾಯಕರು ಇದ್ದರು. ನಾಳಿನ ಉದ್ದೇಶಿತ ಬಂದ್ಗೆ ವಿವಿಧ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು.</p>.<p><strong>ಇದನ್ನೂ ಓದಿ:<a href="https://www.prajavani.net/technology/viral/2021-top-10-viral-video-world-india-and-karnataka-897562.html" target="_blank">2021ರ ಟಾಪ್ 10 ವೈರಲ್ ವಿಡಿಯೊಗಳಾವವು? ಇಲ್ಲಿವೆ ನೋಡಿ...</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕನ್ನಡಿಗರ ಮೇಲೆ ದೌರ್ಜನ್ಯಕ್ಕೆ ಮುಂದಾಗುವ ಎಂಇಎಸ್ ಸಂಘಟನೆಯನ್ನು ನಿಷೇಧಿಸುವಂತೆ ವಾಟಾಳ್ ನಾಗರಾಜ್ ನೇತೃತ್ವದ ವಿವಿಧ ಕನ್ನಡಪರ ಸಂಘಟನೆಗಳು ಶುಕ್ರವಾರ (ಡಿಸೆಂಬರ್ 31) ರಂದು ಕರೆ ನೀಡಿದ್ದ ಕರ್ನಾಟಕ ಬಂದ್ ವಾಪಸ್ ಪಡೆಯಲಾಗಿದೆ.</p>.<p>ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರ ಜತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಡೆಸಿದ ಸಭೆ ಯಶಸ್ವಿಯಾಗಿದೆ.</p>.<p>ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿರುವ ವಾಟಾಳ್ ನಾಗರಾಜ್, ಎಂಇಎಸ್ ನಿಷೇಧಿಸಲು ಮುಖ್ಯಮಂತ್ರಿ ಅವರು ಸಮಯ ಕೇಳಿದ್ದಾರೆ. ಅವರ ಮೇಲೆ ಭರವಸೆ ಇಟ್ಟು ಕರ್ನಾಟಕ ಬಂದ್ ಮುಂದೂಡಿದ್ದೇವೆ ಎಂದು ತಿಳಿಸಿದ್ದಾರೆ.</p>.<p>ಇದೇ ವೇಳೆ ಸಿಎಂ ಬೊಮ್ಮಾಯಿ ಅವರು, ನಮ್ಮ ಮನವಿ ಮೇರೆಗೆ ಬಂದ್ ಕೈ ಬಿಡಲು ನಿರ್ಧರಿಸಿದ್ದಾರೆ, ಅವರಿಗೆ ಧನ್ಯವಾದಗಳು, ಎಂಇಎಸ್ ಬಗ್ಗೆ ಶೀಘ್ರದಲ್ಲೇ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.</p>.<p>ಸಭೆಯಲ್ಲಿ ಪ್ರವೀಣ್ ಶೆಟ್ಟಿ ಸೇರಿದಂತೆ ಇತರ ನಾಯಕರು ಇದ್ದರು. ನಾಳಿನ ಉದ್ದೇಶಿತ ಬಂದ್ಗೆ ವಿವಿಧ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು.</p>.<p><strong>ಇದನ್ನೂ ಓದಿ:<a href="https://www.prajavani.net/technology/viral/2021-top-10-viral-video-world-india-and-karnataka-897562.html" target="_blank">2021ರ ಟಾಪ್ 10 ವೈರಲ್ ವಿಡಿಯೊಗಳಾವವು? ಇಲ್ಲಿವೆ ನೋಡಿ...</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>