<p><strong>ಖಾನಾಪುರ (ಬೆಳಗಾವಿ ಜಿಲ್ಲೆ):</strong> ಸಕ್ಕರೆ ಕಾರ್ಖಾನೆಗಳು ತಮಗೆ ಬಾಕಿ ಪಾವತಿಸದೆ ಇರುವುದರಿಂದ ಆರ್ಥಿಕ ಸಂಕಷ್ಟ ಎದುರಾಗಿದ್ದು, ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪ್ರಧಾನಿ, ಮುಖ್ಯಮಂತ್ರಿ ಮತ್ತು ಅಧಿಕಾರಿಗಳಿಗೆ ಪತ್ರ ಬರೆದಿದ್ದ ತಾಲ್ಲೂಕಿನ ಲಿಂಗನಮಠ ಗ್ರಾಮದ ಮಾಟೊಳ್ಳಿ ಕುಟುಂಬಕ್ಕೆ ಜಿಲ್ಲಾಡಳಿತ ಸಹಾಯಹಸ್ತ ಚಾಚಿದೆ.</p>.<p>ಬೆಳಗಾವಿ ಉಪವಿಭಾಗಾಧಿಕಾರಿ ಕವಿತಾ ಯೋಗಪ್ಪನವರ ಮತ್ತು ತಹಶೀಲ್ದಾರ್ ದಿನಮಣಿ ಹೆಗ್ಡೆ, ಆ ಕುಟುಂಬದವರನ್ನು ಬುಧವಾರ ಭೇಟಿಯಾಗಿ ಮಾಹಿತಿ ಪಡೆದರು. ಕೂಡಲೇ ಬಾಕಿ ಕೊಡಿಸುವುದಾಗಿ ಭರವಸೆ ನೀಡಿದರು.</p>.<p>‘2015–16ರಲ್ಲಿ ರಾಮದುರ್ಗ ತಾಲ್ಲೂಕಿನ ಉದಪುಡಿಯ ಶಿವಸಾಗರ ಕಾರ್ಖಾನೆಗೆ ಪೂರೈಸಿದ್ದ ಕಬ್ಬಿನ ಬಿಲ್ ₹ 40ಸಾವಿರ ಹಾಗೂ ಗೋಕಾಕ ತಾಲ್ಲೂಕಿನ ಹಿರೇನಂದಿಯಲ್ಲಿರುವ, ಪೌರಾಡಳಿತ ಸಚಿವ ರಮೇಶ ಜಾರಕಿಹೊಳಿ ಮಾಲೀಕತ್ವದ ಸೌಭಾಗ್ಯ ಲಕ್ಷ್ಮಿ ಕಾರ್ಖಾನೆಗೆ 2013–14ರಲ್ಲಿ ಲಾರಿ ಬಾಡಿಗೆ (ಕಬ್ಬು ಸಾಗಿಸಿದ್ದಕ್ಕೆ) ₹ 90ಸಾವಿರ ಬಾಕಿ ಬರಬೇಕು. ತಂದೆ ಅನಾರೋಗ್ಯಕ್ಕೀಡಾಗಿದ್ದರಿಂದ ವಿವಿಧೆಡೆ ₹ 7.50 ಲಕ್ಷ ಸಾಲ ಮಾಡಿದ್ದೇನೆ. ಜೀವನಕ್ಕೆ ಆಧಾರವಾಗಿದ್ದ ಲಾರಿಯನ್ನೂ ಮಾರಿದ್ದೇನೆ. ಇದರಿಂದಾಗಿ ಬದುಕುವುದೇ ದುಸ್ತರವಾಗಿದೆ’ ಎಂದು ರೈತ ಬಾಳಪ್ಪ ಮಾಟೊಳ್ಳಿ ಅಧಿಕಾರಿಗಳೆದುರು ಅಳಲು ತೋಡಿಕೊಂಡರು.</p>.<p>‘ಸಮಸ್ಯೆಗಳಿಗೆ ಸಾವೊಂದೇ ಪರಿಹಾರವಲ್ಲ. ಬಾಕಿ ಹಣ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು. ಆತ್ಮಹತ್ಯೆ ನಿರ್ಧಾರವನ್ನು ಹಿಂಪಡೆಯಬೇಕು’ ಎಂದು ಅಧಿಕಾರಿಗಳು ಕೋರಿದರು.</p>.<p>ಆಸ್ಪತ್ರೆಗೆ ದಾಖಲು: ‘ರೈತ ಕುಟುಂಬಕ್ಕೆ ಧೈರ್ಯ ತುಂಬಿದ್ದೇವೆ. ಬಾಳಪ್ಪ ಅವರ ತಂದೆಯ ಆರೋಗ್ಯ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿದ್ದರಿಂದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸೌಭಾಗ್ಯಲಕ್ಷ್ಮಿ ಕಾರ್ಖಾನೆಯವರು ಬಾಕಿ ಉಳಿಸಿಕೊಂಡಿದ್ದ ಲಾರಿ ಬಾಡಿಗೆಯನ್ನು ಪಡೆಯಲಾಗಿದೆ. ಜೂನ್ 21ರಂದು ಆ ಕುಟುಂಬಕ್ಕೆ ₹ 1 ಲಕ್ಷ ತಲುಪಿಸಲಾಗುವುದು’ ಎಂದು ಎಸಿ ಕವಿತಾ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಖಾನಾಪುರ (ಬೆಳಗಾವಿ ಜಿಲ್ಲೆ):</strong> ಸಕ್ಕರೆ ಕಾರ್ಖಾನೆಗಳು ತಮಗೆ ಬಾಕಿ ಪಾವತಿಸದೆ ಇರುವುದರಿಂದ ಆರ್ಥಿಕ ಸಂಕಷ್ಟ ಎದುರಾಗಿದ್ದು, ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪ್ರಧಾನಿ, ಮುಖ್ಯಮಂತ್ರಿ ಮತ್ತು ಅಧಿಕಾರಿಗಳಿಗೆ ಪತ್ರ ಬರೆದಿದ್ದ ತಾಲ್ಲೂಕಿನ ಲಿಂಗನಮಠ ಗ್ರಾಮದ ಮಾಟೊಳ್ಳಿ ಕುಟುಂಬಕ್ಕೆ ಜಿಲ್ಲಾಡಳಿತ ಸಹಾಯಹಸ್ತ ಚಾಚಿದೆ.</p>.<p>ಬೆಳಗಾವಿ ಉಪವಿಭಾಗಾಧಿಕಾರಿ ಕವಿತಾ ಯೋಗಪ್ಪನವರ ಮತ್ತು ತಹಶೀಲ್ದಾರ್ ದಿನಮಣಿ ಹೆಗ್ಡೆ, ಆ ಕುಟುಂಬದವರನ್ನು ಬುಧವಾರ ಭೇಟಿಯಾಗಿ ಮಾಹಿತಿ ಪಡೆದರು. ಕೂಡಲೇ ಬಾಕಿ ಕೊಡಿಸುವುದಾಗಿ ಭರವಸೆ ನೀಡಿದರು.</p>.<p>‘2015–16ರಲ್ಲಿ ರಾಮದುರ್ಗ ತಾಲ್ಲೂಕಿನ ಉದಪುಡಿಯ ಶಿವಸಾಗರ ಕಾರ್ಖಾನೆಗೆ ಪೂರೈಸಿದ್ದ ಕಬ್ಬಿನ ಬಿಲ್ ₹ 40ಸಾವಿರ ಹಾಗೂ ಗೋಕಾಕ ತಾಲ್ಲೂಕಿನ ಹಿರೇನಂದಿಯಲ್ಲಿರುವ, ಪೌರಾಡಳಿತ ಸಚಿವ ರಮೇಶ ಜಾರಕಿಹೊಳಿ ಮಾಲೀಕತ್ವದ ಸೌಭಾಗ್ಯ ಲಕ್ಷ್ಮಿ ಕಾರ್ಖಾನೆಗೆ 2013–14ರಲ್ಲಿ ಲಾರಿ ಬಾಡಿಗೆ (ಕಬ್ಬು ಸಾಗಿಸಿದ್ದಕ್ಕೆ) ₹ 90ಸಾವಿರ ಬಾಕಿ ಬರಬೇಕು. ತಂದೆ ಅನಾರೋಗ್ಯಕ್ಕೀಡಾಗಿದ್ದರಿಂದ ವಿವಿಧೆಡೆ ₹ 7.50 ಲಕ್ಷ ಸಾಲ ಮಾಡಿದ್ದೇನೆ. ಜೀವನಕ್ಕೆ ಆಧಾರವಾಗಿದ್ದ ಲಾರಿಯನ್ನೂ ಮಾರಿದ್ದೇನೆ. ಇದರಿಂದಾಗಿ ಬದುಕುವುದೇ ದುಸ್ತರವಾಗಿದೆ’ ಎಂದು ರೈತ ಬಾಳಪ್ಪ ಮಾಟೊಳ್ಳಿ ಅಧಿಕಾರಿಗಳೆದುರು ಅಳಲು ತೋಡಿಕೊಂಡರು.</p>.<p>‘ಸಮಸ್ಯೆಗಳಿಗೆ ಸಾವೊಂದೇ ಪರಿಹಾರವಲ್ಲ. ಬಾಕಿ ಹಣ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು. ಆತ್ಮಹತ್ಯೆ ನಿರ್ಧಾರವನ್ನು ಹಿಂಪಡೆಯಬೇಕು’ ಎಂದು ಅಧಿಕಾರಿಗಳು ಕೋರಿದರು.</p>.<p>ಆಸ್ಪತ್ರೆಗೆ ದಾಖಲು: ‘ರೈತ ಕುಟುಂಬಕ್ಕೆ ಧೈರ್ಯ ತುಂಬಿದ್ದೇವೆ. ಬಾಳಪ್ಪ ಅವರ ತಂದೆಯ ಆರೋಗ್ಯ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿದ್ದರಿಂದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸೌಭಾಗ್ಯಲಕ್ಷ್ಮಿ ಕಾರ್ಖಾನೆಯವರು ಬಾಕಿ ಉಳಿಸಿಕೊಂಡಿದ್ದ ಲಾರಿ ಬಾಡಿಗೆಯನ್ನು ಪಡೆಯಲಾಗಿದೆ. ಜೂನ್ 21ರಂದು ಆ ಕುಟುಂಬಕ್ಕೆ ₹ 1 ಲಕ್ಷ ತಲುಪಿಸಲಾಗುವುದು’ ಎಂದು ಎಸಿ ಕವಿತಾ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>