ಖಾನಾಪುರ (ಬೆಳಗಾವಿ ಜಿಲ್ಲೆ): ಸಕ್ಕರೆ ಕಾರ್ಖಾನೆಗಳು ತಮಗೆ ಬಾಕಿ ಪಾವತಿಸದೆ ಇರುವುದರಿಂದ ಆರ್ಥಿಕ ಸಂಕಷ್ಟ ಎದುರಾಗಿದ್ದು, ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪ್ರಧಾನಿ, ಮುಖ್ಯಮಂತ್ರಿ ಮತ್ತು ಅಧಿಕಾರಿಗಳಿಗೆ ಪತ್ರ ಬರೆದಿದ್ದ ತಾಲ್ಲೂಕಿನ ಲಿಂಗನಮಠ ಗ್ರಾಮದ ಮಾಟೊಳ್ಳಿ ಕುಟುಂಬಕ್ಕೆ ಜಿಲ್ಲಾಡಳಿತ ಸಹಾಯಹಸ್ತ ಚಾಚಿದೆ.