ಸಭೆಯ ಬಳಿಕ ಮಾತನಾಡಿದ ಯಡಿಯೂರಪ್ಪ, ‘ಕೃಷ್ಣಾ ಮತ್ತು ಭೀಮಾ ನದಿಯ ಜಲಾನಯನ ಪ್ರದೇಶದಲ್ಲಿ ಪ್ರವಾಹವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವುದೂ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು. ಎರಡೂ ರಾಜ್ಯಗಳ ನಡುವೆ ಸಚಿವರು, ಕಾರ್ಯದರ್ಶಿಗಳ ಹಂತ ಹಾಗೂ ಕೆಳಹಂತದ ಅಧಿಕಾರಿಗಳ ನಡುವೆ ಉತ್ತಮ ಸಂವಹನ, ಸಮನ್ವಯ ಸಾಧಿಸಲು ತೀರ್ಮಾನಿಸಲಾಯಿತು’ ಎಂದರು.