<p><strong>ಬೆಂಗಳೂರು:</strong> ಕೋಟಿಗಟ್ಟಲೆ ಲೀಟರ್ ತ್ಯಾಜ್ಯ ನೀರು ಒಡಲು ಸೇರುತ್ತಿರುವುದರಿಂದ ಕಲುಷಿತಗೊಂಡಿರುವ ಹಾಗೂ ಬತ್ತಿ ಹೋಗುತ್ತಿರುವ ರಾಜ್ಯದ 17 ನದಿಗಳ ಶುದ್ಧೀಕರಣಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದೆ.</p>.<p>ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ನಾಲ್ವರು ಅಧಿಕಾರಿಗಳ ಸಮಿತಿಯನ್ನು ರಚಿಸಿದೆ. ಎರಡು ತಿಂಗಳಲ್ಲಿ ಕ್ರಿಯಾಯೋಜನೆ ಸಿದ್ಧಪಡಿಸಬೇಕು ಹಾಗೂ ಆರು ತಿಂಗಳಲ್ಲಿ ಪ್ರಗತಿ ತೋರಿಸಬೇಕು ಎಂದು ಸಮಿತಿಗೆ ಸೂಚಿಸಿದೆ.</p>.<p>ದೇಶದ 351 ನದಿಗಳು ಕಲುಷಿತಗೊಂಡಿವೆ. ಅದರಲ್ಲಿ ರಾಜ್ಯದ 17 ನದಿಗಳು ಸೇರಿವೆ. ಈ ಜಲಮೂಲಗಳಲ್ಲಿ ಜೀವರಾಸಾಯನಿಕ ಆಮ್ಲಜನಕ ಬೇಡಿಕೆ (ಬಿಒಡಿ) ಪ್ರಮಾಣ ಲೀಟರ್ಗೆ 3 ಎಂ.ಜಿ.ಗಿಂತ ಜಾಸ್ತಿ ಇದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಬಹಿರಂಗಪಡಿಸಿತ್ತು. ಈ ವಿಚಾರ ಹಸಿರು ನ್ಯಾಯಮಂಡಳಿಯ (ಎನ್ಜಿಟಿ) ಮೆಟ್ಟಿಲೇರಿತ್ತು. ನದಿಗಳ ಪುನರುಜ್ಜೀವನಕ್ಕೆ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಎನ್ಜಿಟಿ ರಾಜ್ಯ ಸರ್ಕಾರಗಳಿಗೆ ತಾಕೀತು ಮಾಡಿತ್ತು.</p>.<p><strong>ಡಿಸೆಂಬರ್ 3ಕ್ಕೆ ಸಭೆ:</strong> ‘ವರ್ಷದೊಳಗೆ ನದಿಗಳ ಮಾಲಿನ್ಯ ಪ್ರಮಾಣ ಕನಿಷ್ಠ ಮಟ್ಟಕ್ಕೆ ಇಳಿಸಬೇಕು ಎಂದು ಯೋಜಿಸಿದ್ದೇವೆ. ಅದಕ್ಕೆ ದೊಡ್ಡ ಮೊತ್ತದ ಅನುದಾನವೂ ಬೇಕು.</p>.<p>ಈ ದಿಸೆಯಲ್ಲಿ ಚರ್ಚಿಸಲು ಡಿ. 3ರಂದು ಜಲಸಂಪನ್ಮೂಲ, ಅರಣ್ಯ, ಕೃಷಿ ಹಾಗೂ ನೀರಾವರಿ ಮಂಡಳಿಗಳ ಪ್ರಮುಖರ ಸಭೆ ಕರೆಯಲಾಗಿದೆ’ ಎಂದು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಲಕ್ಷ್ಮಣ್ ತಿಳಿಸಿದರು.</p>.<p>**</p>.<p><strong>ಸಮಿತಿಯ ಜವಾಬ್ದಾರಿ</strong></p>.<p>*ಕಲುಷಿತಗೊಂಡಿರುವ ನದಿಗಳ ಹಾನಿಕಾರಕ ಅಂಶಗಳನ್ನು ಹೊರತೆಗೆದು, ಅವುಗಳನ್ನು ಸ್ನಾನಕ್ಕೆ ಬಳಕೆಯಾಗುವ ಸ್ಥಿತಿಗೆ ಪರಿವರ್ತಿಸಬೇಕು.</p>.<p>* ಮಾಲಿನ್ಯ ಉಂಟುಮಾಡುವ ಪ್ರದೇಶಗಳನ್ನು ಗುರುತಿಸುವುದು, ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ ಸ್ಥಿತಿಗತಿ, ಘನತ್ಯಾಜ್ಯ ನಿರ್ವಹಣಾ ವ್ಯವಸ್ಥೆಯ ಪರಿಶೀಲನೆ.</p>.<p>* ಅಂತರ್ಜಲ ಮರುಪೂರಣ, ಉತ್ತಮ ನೀರಾವರಿ ವ್ಯವಸ್ಥೆ, ಪ್ರವಾಹಪೀಡಿತ ಪ್ರದೇಶಗಳ ನಿರ್ವಹಣೆ ಹಾಗೂ ಸಂರಕ್ಷಣೆ, ಮಳೆ ನೀರು ಸಂಗ್ರಹ ವ್ಯವಸ್ಥೆ, ನದಿಯ ಇಕ್ಕೆಲಗಳಲ್ಲಿ ಗಿಡಗಳನ್ನು ನೆಡಲು ಯೋಜನೆ ರೂಪಿಸುವುದು.</p>.<p>**</p>.<p>ನದಿಗಳ ಪುನರುಜ್ಜೀವನದ ವರದಿಯನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ ಡಿಸೆಂಬರ್ 15ಕ್ಕೆ ಸಲ್ಲಿಸುತ್ತೇವೆ.</p>.<p><em><strong>–ಲಕ್ಷ್ಮಣ್, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೋಟಿಗಟ್ಟಲೆ ಲೀಟರ್ ತ್ಯಾಜ್ಯ ನೀರು ಒಡಲು ಸೇರುತ್ತಿರುವುದರಿಂದ ಕಲುಷಿತಗೊಂಡಿರುವ ಹಾಗೂ ಬತ್ತಿ ಹೋಗುತ್ತಿರುವ ರಾಜ್ಯದ 17 ನದಿಗಳ ಶುದ್ಧೀಕರಣಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದೆ.</p>.<p>ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ನಾಲ್ವರು ಅಧಿಕಾರಿಗಳ ಸಮಿತಿಯನ್ನು ರಚಿಸಿದೆ. ಎರಡು ತಿಂಗಳಲ್ಲಿ ಕ್ರಿಯಾಯೋಜನೆ ಸಿದ್ಧಪಡಿಸಬೇಕು ಹಾಗೂ ಆರು ತಿಂಗಳಲ್ಲಿ ಪ್ರಗತಿ ತೋರಿಸಬೇಕು ಎಂದು ಸಮಿತಿಗೆ ಸೂಚಿಸಿದೆ.</p>.<p>ದೇಶದ 351 ನದಿಗಳು ಕಲುಷಿತಗೊಂಡಿವೆ. ಅದರಲ್ಲಿ ರಾಜ್ಯದ 17 ನದಿಗಳು ಸೇರಿವೆ. ಈ ಜಲಮೂಲಗಳಲ್ಲಿ ಜೀವರಾಸಾಯನಿಕ ಆಮ್ಲಜನಕ ಬೇಡಿಕೆ (ಬಿಒಡಿ) ಪ್ರಮಾಣ ಲೀಟರ್ಗೆ 3 ಎಂ.ಜಿ.ಗಿಂತ ಜಾಸ್ತಿ ಇದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಬಹಿರಂಗಪಡಿಸಿತ್ತು. ಈ ವಿಚಾರ ಹಸಿರು ನ್ಯಾಯಮಂಡಳಿಯ (ಎನ್ಜಿಟಿ) ಮೆಟ್ಟಿಲೇರಿತ್ತು. ನದಿಗಳ ಪುನರುಜ್ಜೀವನಕ್ಕೆ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಎನ್ಜಿಟಿ ರಾಜ್ಯ ಸರ್ಕಾರಗಳಿಗೆ ತಾಕೀತು ಮಾಡಿತ್ತು.</p>.<p><strong>ಡಿಸೆಂಬರ್ 3ಕ್ಕೆ ಸಭೆ:</strong> ‘ವರ್ಷದೊಳಗೆ ನದಿಗಳ ಮಾಲಿನ್ಯ ಪ್ರಮಾಣ ಕನಿಷ್ಠ ಮಟ್ಟಕ್ಕೆ ಇಳಿಸಬೇಕು ಎಂದು ಯೋಜಿಸಿದ್ದೇವೆ. ಅದಕ್ಕೆ ದೊಡ್ಡ ಮೊತ್ತದ ಅನುದಾನವೂ ಬೇಕು.</p>.<p>ಈ ದಿಸೆಯಲ್ಲಿ ಚರ್ಚಿಸಲು ಡಿ. 3ರಂದು ಜಲಸಂಪನ್ಮೂಲ, ಅರಣ್ಯ, ಕೃಷಿ ಹಾಗೂ ನೀರಾವರಿ ಮಂಡಳಿಗಳ ಪ್ರಮುಖರ ಸಭೆ ಕರೆಯಲಾಗಿದೆ’ ಎಂದು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಲಕ್ಷ್ಮಣ್ ತಿಳಿಸಿದರು.</p>.<p>**</p>.<p><strong>ಸಮಿತಿಯ ಜವಾಬ್ದಾರಿ</strong></p>.<p>*ಕಲುಷಿತಗೊಂಡಿರುವ ನದಿಗಳ ಹಾನಿಕಾರಕ ಅಂಶಗಳನ್ನು ಹೊರತೆಗೆದು, ಅವುಗಳನ್ನು ಸ್ನಾನಕ್ಕೆ ಬಳಕೆಯಾಗುವ ಸ್ಥಿತಿಗೆ ಪರಿವರ್ತಿಸಬೇಕು.</p>.<p>* ಮಾಲಿನ್ಯ ಉಂಟುಮಾಡುವ ಪ್ರದೇಶಗಳನ್ನು ಗುರುತಿಸುವುದು, ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ ಸ್ಥಿತಿಗತಿ, ಘನತ್ಯಾಜ್ಯ ನಿರ್ವಹಣಾ ವ್ಯವಸ್ಥೆಯ ಪರಿಶೀಲನೆ.</p>.<p>* ಅಂತರ್ಜಲ ಮರುಪೂರಣ, ಉತ್ತಮ ನೀರಾವರಿ ವ್ಯವಸ್ಥೆ, ಪ್ರವಾಹಪೀಡಿತ ಪ್ರದೇಶಗಳ ನಿರ್ವಹಣೆ ಹಾಗೂ ಸಂರಕ್ಷಣೆ, ಮಳೆ ನೀರು ಸಂಗ್ರಹ ವ್ಯವಸ್ಥೆ, ನದಿಯ ಇಕ್ಕೆಲಗಳಲ್ಲಿ ಗಿಡಗಳನ್ನು ನೆಡಲು ಯೋಜನೆ ರೂಪಿಸುವುದು.</p>.<p>**</p>.<p>ನದಿಗಳ ಪುನರುಜ್ಜೀವನದ ವರದಿಯನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ ಡಿಸೆಂಬರ್ 15ಕ್ಕೆ ಸಲ್ಲಿಸುತ್ತೇವೆ.</p>.<p><em><strong>–ಲಕ್ಷ್ಮಣ್, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>