<p><strong>ಮೈಸೂರು</strong>: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್ಇಪಿ) ತಿರಸ್ಕರಿಸುವ ನಿರ್ಣಯವನ್ನು ಗಾಂಧಿ ವಿಚಾರ ಪರಿಷತ್ ವತಿಯಿಂದ ಭಾನುವಾರ ಇಲ್ಲಿ ಆಯೋಜಿಸಿದ್ದ ವಿಚಾರ ಸಂಕಿರಣದಲ್ಲಿ ತೆಗೆದುಕೊಳ್ಳಲಾಯಿತು.</p>.<p>‘ಎನ್ಇಪಿ, ಜನಸಾಮಾನ್ಯರ ಬದಲು ಕಾರ್ಪೊರೇಟ್ ವಲಯದ ಒಳಿತು ಬಯಸುತ್ತಿದೆ. ಶಿಕ್ಷಣ ಮಾಧ್ಯಮ ಮತ್ತು ಭಾಷಾ ಕಲಿಕೆಯ ಬಗ್ಗೆ ಸ್ಪಷ್ಟತೆ ಹಾಗೂ ಅಗತ್ಯ ಮುನ್ನೋಟಗಳನ್ನು ಇದು ಒಳಗೊಂಡಿಲ್ಲ. ಹಲವು ವೈರುಧ್ಯಗಳಿರುವ ಈ ಶಿಕ್ಷಣ ನೀತಿಯನ್ನು ತಿರಸ್ಕರಿಸಬೇಕೆಂದು ಸಭೆ ಒತ್ತಾಯಿಸುತ್ತದೆ’ ಎಂದು ಗಾಂಧಿ ವಿಚಾರ ಪರಿಷತ್ ಅಧ್ಯಕ್ಷ ಪ.ಮಲ್ಲೇಶ್ ನಿರ್ಣಯ ಪ್ರಕಟಿಸಿದರು.</p>.<p>‘ಹೊಸ ನೀತಿ ಸಮಾನತೆಯನ್ನು ತರುವ ಯಾವುದೇ ಧ್ಯೇಯ ಹೊಂದಿಲ್ಲ. ರಾಜ್ಯ ಸರ್ಕಾರ ಮತ್ತು ಕೇಂದ್ರದ ಸಹಭಾಗಿತ್ವದಲ್ಲಿ ನಡೆಯಬೇಕಾದ ಶಿಕ್ಷಣವನ್ನು ಸಂಪೂರ್ಣವಾಗಿ ಖಾಸಗಿಯವರಿಗೆ ವಹಿಸುವ ಹುನ್ನಾರ ಇದೆ. ಈ ನೀತಿಯಲ್ಲಿ ಸಮಾಜವಾದಿ, ಜಾತ್ಯತೀತ ಧ್ಯೇಯದ ಸಂವಿಧಾನದ ಪ್ರಧಾನ ಆಶಯಗಳಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್ಇಪಿ) ತಿರಸ್ಕರಿಸುವ ನಿರ್ಣಯವನ್ನು ಗಾಂಧಿ ವಿಚಾರ ಪರಿಷತ್ ವತಿಯಿಂದ ಭಾನುವಾರ ಇಲ್ಲಿ ಆಯೋಜಿಸಿದ್ದ ವಿಚಾರ ಸಂಕಿರಣದಲ್ಲಿ ತೆಗೆದುಕೊಳ್ಳಲಾಯಿತು.</p>.<p>‘ಎನ್ಇಪಿ, ಜನಸಾಮಾನ್ಯರ ಬದಲು ಕಾರ್ಪೊರೇಟ್ ವಲಯದ ಒಳಿತು ಬಯಸುತ್ತಿದೆ. ಶಿಕ್ಷಣ ಮಾಧ್ಯಮ ಮತ್ತು ಭಾಷಾ ಕಲಿಕೆಯ ಬಗ್ಗೆ ಸ್ಪಷ್ಟತೆ ಹಾಗೂ ಅಗತ್ಯ ಮುನ್ನೋಟಗಳನ್ನು ಇದು ಒಳಗೊಂಡಿಲ್ಲ. ಹಲವು ವೈರುಧ್ಯಗಳಿರುವ ಈ ಶಿಕ್ಷಣ ನೀತಿಯನ್ನು ತಿರಸ್ಕರಿಸಬೇಕೆಂದು ಸಭೆ ಒತ್ತಾಯಿಸುತ್ತದೆ’ ಎಂದು ಗಾಂಧಿ ವಿಚಾರ ಪರಿಷತ್ ಅಧ್ಯಕ್ಷ ಪ.ಮಲ್ಲೇಶ್ ನಿರ್ಣಯ ಪ್ರಕಟಿಸಿದರು.</p>.<p>‘ಹೊಸ ನೀತಿ ಸಮಾನತೆಯನ್ನು ತರುವ ಯಾವುದೇ ಧ್ಯೇಯ ಹೊಂದಿಲ್ಲ. ರಾಜ್ಯ ಸರ್ಕಾರ ಮತ್ತು ಕೇಂದ್ರದ ಸಹಭಾಗಿತ್ವದಲ್ಲಿ ನಡೆಯಬೇಕಾದ ಶಿಕ್ಷಣವನ್ನು ಸಂಪೂರ್ಣವಾಗಿ ಖಾಸಗಿಯವರಿಗೆ ವಹಿಸುವ ಹುನ್ನಾರ ಇದೆ. ಈ ನೀತಿಯಲ್ಲಿ ಸಮಾಜವಾದಿ, ಜಾತ್ಯತೀತ ಧ್ಯೇಯದ ಸಂವಿಧಾನದ ಪ್ರಧಾನ ಆಶಯಗಳಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>