<p><strong>ಬಾಗಲಕೋಟೆ: </strong>ರಾಜ್ಯದಲ್ಲಿ ಜುಲೈ 1ರಿಂದ ಶಾಲೆಗಳ ಆರಂಭ ಎಂಬುದು ಈಗಾಗಲೇ ಸರ್ಕಾರದಿಂದ ನಿರ್ಧರಿತವಾದ ದಿನಾಂಕವಲ್ಲ. ಬದಲಿಗೆ ಯೋಚಿಸಿರುವ ದಿನಾಂಕ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದರು.</p>.<p>ನಗರದಲ್ಲಿ ಬುಧವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಶಾಲೆಗಳ ಆರಂಭಕ್ಕೆ ಮುನ್ನ ಪಾಲಕರ ಅಭಿಪ್ರಾಯ ಕ್ರೋಢೀಕರಣಕ್ಕೆ ನಿರ್ಧರಿಸಲಾಗಿದೆ.</p>.<p>ಅದಕ್ಕಾಗಿ ಜೂನ್ 11ರಿಂದ 13ರವರೆಗೆ ಆಯಾ ಶಾಲೆಗಳಲ್ಲಿ ಪಾಲಕರು ಮತ್ತು ಶಾಲಾಭಿವೃದ್ಧಿ ಸಮಿತಿಯ ಸಭೆ ಕರೆದು ಅವರ ಅಭಿಪ್ರಾಯ ಸಂಗ್ರಹಿಸಲಾಗುವುದು.</p>.<p>ಅದನ್ನು ಕ್ರೋಢೀಕರಿಸಿ ಜೂನ್ 15ಕ್ಕೆ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. ಅದನ್ನು ಆಧರಿಸಿ ಕೇಂದ್ರ ಸರ್ಕಾರ ನೀಡುವ ನಿರ್ದೇಶನದ ಅನ್ವಯ ಶಾಲೆಗಳನ್ನು ಆರಂಭಿಸುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸುರೇಶಕುಮಾರ್ ತಿಳಿಸಿದರು.</p>.<p>ಎಸ್ಎಸ್ಎಲ್ ಸಿ ಪರೀಕ್ಷೆಯ ವೇಳೆ ಮಕ್ಕಳ ಸುರಕ್ಷತೆಗೆ ಕೈಗೊಂಡಿರುವ ಕ್ರಮಗಳನ್ನೆ ಶಾಲೆಗಳು ಪುನರಾರಂಭವಾದಾಗಲೂ ಮುಂದುವರೆಸಲಾಗುವುದು ಎಂದರು.</p>.<p>ಈ ಬಾರಿ ಶಾಲೆಗಳು ವಿಳಂಬವಾಗಿ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಸಿಗುವ ಶೈಕ್ಷಣಿಕ ದಿನಗಳಿಗೆ ಅನುಗುಣವಾಗಿ ಪಠ್ಯಕ್ರಮ ಕಡಿತಗೊಳಿಸಲು ಚಿಂತಿಸಲಾಗಿದೆ. ಆ ಬಗ್ಗೆ ರಾಜ್ಯ ಶಿಕ್ಷಣ ಸಂಶೋಧನೆ ಹಾಗೂ ತರಬೇತಿ ನಿರ್ದೇಶನಾಲಯದೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ: </strong>ರಾಜ್ಯದಲ್ಲಿ ಜುಲೈ 1ರಿಂದ ಶಾಲೆಗಳ ಆರಂಭ ಎಂಬುದು ಈಗಾಗಲೇ ಸರ್ಕಾರದಿಂದ ನಿರ್ಧರಿತವಾದ ದಿನಾಂಕವಲ್ಲ. ಬದಲಿಗೆ ಯೋಚಿಸಿರುವ ದಿನಾಂಕ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದರು.</p>.<p>ನಗರದಲ್ಲಿ ಬುಧವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಶಾಲೆಗಳ ಆರಂಭಕ್ಕೆ ಮುನ್ನ ಪಾಲಕರ ಅಭಿಪ್ರಾಯ ಕ್ರೋಢೀಕರಣಕ್ಕೆ ನಿರ್ಧರಿಸಲಾಗಿದೆ.</p>.<p>ಅದಕ್ಕಾಗಿ ಜೂನ್ 11ರಿಂದ 13ರವರೆಗೆ ಆಯಾ ಶಾಲೆಗಳಲ್ಲಿ ಪಾಲಕರು ಮತ್ತು ಶಾಲಾಭಿವೃದ್ಧಿ ಸಮಿತಿಯ ಸಭೆ ಕರೆದು ಅವರ ಅಭಿಪ್ರಾಯ ಸಂಗ್ರಹಿಸಲಾಗುವುದು.</p>.<p>ಅದನ್ನು ಕ್ರೋಢೀಕರಿಸಿ ಜೂನ್ 15ಕ್ಕೆ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. ಅದನ್ನು ಆಧರಿಸಿ ಕೇಂದ್ರ ಸರ್ಕಾರ ನೀಡುವ ನಿರ್ದೇಶನದ ಅನ್ವಯ ಶಾಲೆಗಳನ್ನು ಆರಂಭಿಸುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸುರೇಶಕುಮಾರ್ ತಿಳಿಸಿದರು.</p>.<p>ಎಸ್ಎಸ್ಎಲ್ ಸಿ ಪರೀಕ್ಷೆಯ ವೇಳೆ ಮಕ್ಕಳ ಸುರಕ್ಷತೆಗೆ ಕೈಗೊಂಡಿರುವ ಕ್ರಮಗಳನ್ನೆ ಶಾಲೆಗಳು ಪುನರಾರಂಭವಾದಾಗಲೂ ಮುಂದುವರೆಸಲಾಗುವುದು ಎಂದರು.</p>.<p>ಈ ಬಾರಿ ಶಾಲೆಗಳು ವಿಳಂಬವಾಗಿ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಸಿಗುವ ಶೈಕ್ಷಣಿಕ ದಿನಗಳಿಗೆ ಅನುಗುಣವಾಗಿ ಪಠ್ಯಕ್ರಮ ಕಡಿತಗೊಳಿಸಲು ಚಿಂತಿಸಲಾಗಿದೆ. ಆ ಬಗ್ಗೆ ರಾಜ್ಯ ಶಿಕ್ಷಣ ಸಂಶೋಧನೆ ಹಾಗೂ ತರಬೇತಿ ನಿರ್ದೇಶನಾಲಯದೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>