‘ಖಾಸಗಿ ಅನುದಾನಿತ ಶಾಲಾ-ಕಾಲೇಜುಗಳ ಅತಿಥಿ ಶಿಕ್ಷಕರು ಬೀದಿ ಬದಿ ತರಕಾರಿ, ಹೂ, ಹಣ್ಣು ಮಾರಾಟ ಮಾಡುತ್ತಿರುವುದು, ನರೇಗಾ ಕೂಲಿ ಕೆಲಸಕ್ಕೆ ಹೋಗಿರುವ ಅಸಂಖ್ಯಾತ ಪ್ರಕರಣಗಳನ್ನು ಹಾಗೂ ಸಂಕಷ್ಟ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳನ್ನು ಮಾಧ್ಯಮಗಳು ವರದಿ ಮಾಡಿವೆ. ಸಾಮಾಜಿಕ ತಾಣಗಳಲ್ಲಿ ಇವರು ತಮ್ಮ ಕಷ್ಟಗಳನ್ನು ಹೇಳಿಕೊಂಡಿದ್ದಾರೆ. ಇಷ್ಟಾದರೂ ಸರ್ಕಾರ ಅವರ ಕಡೆಗೆ ಗಮನ ಹರಿಸದಿರುವುದು ಅಕ್ಷಮ್ಯ ಸಂಗತಿ’