<p><strong>ಬೆಂಗಳೂರು:</strong> ದೀಪಾವಳಿ ಹಬ್ಬ ಹತ್ತಿರದಲ್ಲಿದೆ. ಯಾರೂ ಭಾರ ಲೋಹಯುಕ್ತ ರಾಸಾಯನಿಕ ಪಟಾಕಿ ಮಾರಾಟ ಮಾಡುವುದು ಕಂಡು ಬಂದರೆ ಅಂಥವರ ಮಾರಾಟ ಪರವಾನಗಿಯನ್ನು ರದ್ದುಪಡಿಸಿ ಎಂದು ಅಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಸೂಚಿಸಿದರು.</p><p>‘ಪರಿಸರ ಸ್ನೇಹಿ ಹಸಿರು ಪಟಾಕಿ ಮಾತ್ರ ಮಾರಾಟ ಮಾಡುವಂತೆ ಪಟಾಕಿ ಮಾರಾಟಗಾರರಿಂದ ಮುಚ್ಚಳಿಕೆಯನ್ನು ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಬರೆಸಿಕೊಳ್ಳಬೇಕು’ ಎಂದರು.</p><p>‘15 ವರ್ಷ ಪೂರೈಸಿದ ಡಿಸೆಲ್ ವಾಹನಗಳನ್ನು ಬಳಕೆ ಮಾಡುವಂತಿಲ್ಲ. ಅದನ್ನು ಸ್ಕ್ರ್ಯಾಪ್ ನೀತಿಯಂತೆ ಬಳಕೆಯಿಂದ ದೂರವಿಡಬೇಕು. ಮಂಡಳಿಯಲ್ಲಿ ವಾಹನಗಳ ಕೊರತೆಯಿಂದ ಏಕ ಬಳಕೆ ಪ್ಲಾಸ್ಟಿಕ್, ವೈದ್ಯಕೀಯ ತ್ಯಾಜ್ಯ, ಇ-ತ್ಯಾಜ್ಯ ವಿಲೇವಾರಿ ಘಟಕಗಳ ಮೇಲೆ ನಿಗಾ ಇಡಲು ಮತ್ತು ಏಕ ಬಳಕೆ ಪ್ಲಾಸ್ಟಿಕ್ ತಯಾರಿಕಾ ಘಟಕ, ಮಳಿಗೆಗಳ ತಪಾಸಣೆ, ಪರಿಶೀಲನೆ ಮಾಡಲು, ಜಲ ಮೂಲಗಳ ಗುಣಮಟ್ಟ ಪರೀಕ್ಷೆ ಮಾಡಲು ಅಡ್ಡಿಯಾಗುತ್ತಿತ್ತು’ ಎಂದು ಹೇಳಿದರು.</p>.68 ಪರಿಸರ ಸ್ನೇಹಿ ವಾಹನಗಳಿಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ.ವೀರಶೈವ ಲಿಂಗಾಯತಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ಅಗತ್ಯ: ಸಚಿವ ಖಂಡ್ರೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ದೀಪಾವಳಿ ಹಬ್ಬ ಹತ್ತಿರದಲ್ಲಿದೆ. ಯಾರೂ ಭಾರ ಲೋಹಯುಕ್ತ ರಾಸಾಯನಿಕ ಪಟಾಕಿ ಮಾರಾಟ ಮಾಡುವುದು ಕಂಡು ಬಂದರೆ ಅಂಥವರ ಮಾರಾಟ ಪರವಾನಗಿಯನ್ನು ರದ್ದುಪಡಿಸಿ ಎಂದು ಅಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಸೂಚಿಸಿದರು.</p><p>‘ಪರಿಸರ ಸ್ನೇಹಿ ಹಸಿರು ಪಟಾಕಿ ಮಾತ್ರ ಮಾರಾಟ ಮಾಡುವಂತೆ ಪಟಾಕಿ ಮಾರಾಟಗಾರರಿಂದ ಮುಚ್ಚಳಿಕೆಯನ್ನು ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಬರೆಸಿಕೊಳ್ಳಬೇಕು’ ಎಂದರು.</p><p>‘15 ವರ್ಷ ಪೂರೈಸಿದ ಡಿಸೆಲ್ ವಾಹನಗಳನ್ನು ಬಳಕೆ ಮಾಡುವಂತಿಲ್ಲ. ಅದನ್ನು ಸ್ಕ್ರ್ಯಾಪ್ ನೀತಿಯಂತೆ ಬಳಕೆಯಿಂದ ದೂರವಿಡಬೇಕು. ಮಂಡಳಿಯಲ್ಲಿ ವಾಹನಗಳ ಕೊರತೆಯಿಂದ ಏಕ ಬಳಕೆ ಪ್ಲಾಸ್ಟಿಕ್, ವೈದ್ಯಕೀಯ ತ್ಯಾಜ್ಯ, ಇ-ತ್ಯಾಜ್ಯ ವಿಲೇವಾರಿ ಘಟಕಗಳ ಮೇಲೆ ನಿಗಾ ಇಡಲು ಮತ್ತು ಏಕ ಬಳಕೆ ಪ್ಲಾಸ್ಟಿಕ್ ತಯಾರಿಕಾ ಘಟಕ, ಮಳಿಗೆಗಳ ತಪಾಸಣೆ, ಪರಿಶೀಲನೆ ಮಾಡಲು, ಜಲ ಮೂಲಗಳ ಗುಣಮಟ್ಟ ಪರೀಕ್ಷೆ ಮಾಡಲು ಅಡ್ಡಿಯಾಗುತ್ತಿತ್ತು’ ಎಂದು ಹೇಳಿದರು.</p>.68 ಪರಿಸರ ಸ್ನೇಹಿ ವಾಹನಗಳಿಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ.ವೀರಶೈವ ಲಿಂಗಾಯತಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ಅಗತ್ಯ: ಸಚಿವ ಖಂಡ್ರೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>