<p><strong>ಬೆಂಗಳೂರು:</strong> ಮಾನನಷ್ಟ ಆರೋಪ ಪ್ರಕರಣದಲ್ಲಿ ಶಾಸಕ ವಿ.ಸುನಿಲ್ ಕುಮಾರ್ ಅವರನ್ನು ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಅಪರಾಧ ಮುಕ್ತಗೊಳಿಸಿ ಆದೇಶಿಸಿದೆ.</p>.<p>ಸುನಿಲ್ ಕುಮಾರ್ ವಿರುದ್ಧ ‘ಶ್ರೀರಾಮ ಸೇನೆ’ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ವಿಚಾರಣೆ ನಡೆಸಿದ, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಈ ಕುರಿತಂತೆ ಆದೇಶಿಸಿದೆ. ಸುನಿಲ್ ಕುಮಾರ್ ಪರ ಹೈಕೋರ್ಟ್ ವಕೀಲ ಬಿ.ವಿನೋದ್ ಕುಮಾರ್ ವಾದ ಮಂಡಿಸಿದ್ದರು.</p>.<p>ಪ್ರಕರಣವೇನು?: ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ 2023ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ವಿ.ಸುನಿಲ್ ಕುಮಾರ್ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.</p>.<p>ಅಂದು ತಮ್ಮ ಗೆಲುವಿನ ವಿಜಯೋತ್ಸವ ಆಚರಿಸುವಾಗ ಸುನಿಲ್ ಕುಮಾರ್ ಭಾಷಣ ಮಾಡಿದ್ದರು. ಈ ಭಾಷಣದಲ್ಲಿ ‘ನನ್ನ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿದ್ದ ಪ್ರಮೋದ್ ಮುತಾಲಿಕ್ ಒಬ್ಬ ಡೀಲ್ ಮಾಸ್ಟರ್. ಹಣ ಪಡೆದು ಸ್ಪರ್ಧೆ ಮಾಡುತ್ತಾರೆ ಎಂಬ ಹೇಳಿಕೆ ನೀಡಿದ್ದಾರೆ’ ಎಂದು ಆರೋಪಿಸಿ ಪ್ರಮೋದ್ ಮುತಾಲಿಕ್ ಖಾಸಗಿ ದೂರು ಸಲ್ಲಿಸಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಾನನಷ್ಟ ಆರೋಪ ಪ್ರಕರಣದಲ್ಲಿ ಶಾಸಕ ವಿ.ಸುನಿಲ್ ಕುಮಾರ್ ಅವರನ್ನು ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಅಪರಾಧ ಮುಕ್ತಗೊಳಿಸಿ ಆದೇಶಿಸಿದೆ.</p>.<p>ಸುನಿಲ್ ಕುಮಾರ್ ವಿರುದ್ಧ ‘ಶ್ರೀರಾಮ ಸೇನೆ’ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ವಿಚಾರಣೆ ನಡೆಸಿದ, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಈ ಕುರಿತಂತೆ ಆದೇಶಿಸಿದೆ. ಸುನಿಲ್ ಕುಮಾರ್ ಪರ ಹೈಕೋರ್ಟ್ ವಕೀಲ ಬಿ.ವಿನೋದ್ ಕುಮಾರ್ ವಾದ ಮಂಡಿಸಿದ್ದರು.</p>.<p>ಪ್ರಕರಣವೇನು?: ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ 2023ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ವಿ.ಸುನಿಲ್ ಕುಮಾರ್ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.</p>.<p>ಅಂದು ತಮ್ಮ ಗೆಲುವಿನ ವಿಜಯೋತ್ಸವ ಆಚರಿಸುವಾಗ ಸುನಿಲ್ ಕುಮಾರ್ ಭಾಷಣ ಮಾಡಿದ್ದರು. ಈ ಭಾಷಣದಲ್ಲಿ ‘ನನ್ನ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿದ್ದ ಪ್ರಮೋದ್ ಮುತಾಲಿಕ್ ಒಬ್ಬ ಡೀಲ್ ಮಾಸ್ಟರ್. ಹಣ ಪಡೆದು ಸ್ಪರ್ಧೆ ಮಾಡುತ್ತಾರೆ ಎಂಬ ಹೇಳಿಕೆ ನೀಡಿದ್ದಾರೆ’ ಎಂದು ಆರೋಪಿಸಿ ಪ್ರಮೋದ್ ಮುತಾಲಿಕ್ ಖಾಸಗಿ ದೂರು ಸಲ್ಲಿಸಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>