ಲೋಕಸಭೆಯಲ್ಲಿ ಸೋಮವಾರ ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ‘ಬೆಂಗಳೂರು ನಗರ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಅದಕ್ಕೆ ತಕ್ಕಂತೆ ಮೂಲಸೌಕರ್ಯ ಒದಗಿಸುವ ಕೆಲಸ ಆಗಬೇಕಿದೆ. ಕರ್ನಾಟಕ ಸರ್ಕಾರ ಹಾಗೂ ಬಿಬಿಎಂಪಿ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿವೆ. ಮೂಲಸೌಕರ್ಯ ಯೋಜನೆಗಳ ಅನುಷ್ಠಾನಗೊಳಿಸಲು ರಕ್ಷಣಾ ಇಲಾಖೆಯ ಭೂಮಿ ಬೇಕಾಗಿದೆ. ಕೆಲವು ಅಧಿಕಾರಿಗಳ ಅಸಹಕಾರದಿಂದ ಈ ಭೂಮಿ ಹಸ್ತಾಂತರ ಆಗಿಲ್ಲ’ ಎಂದು ದೂರಿದರು.