<p><strong>ಮೈಸೂರು:</strong> ‘ದೆಹಲಿಯ ಕೆಂಪುಕೋಟೆ ಬಳಿ ನಡೆದ ಸ್ಫೋಟದ ಬಗ್ಗೆ ಕೇಂದ್ರ ಸರ್ಕಾರವೇ ಸಮಗ್ರ ತನಿಖೆ ನಡೆಸಿ ಉತ್ತರಿಸಲಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. </p><p>ಮಂಗಳವಾರ ಇಲ್ಲಿನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ ‘ ದೇಶದಲ್ಲಿ ಚುನಾವಣೆ ವೇಳೆಯಲ್ಲೇ ಏಕೆ ಸ್ಫೋಟಗಳು ಆಗುತ್ತಿವೆ ? ದೆಹಲಿ ಸ್ಫೋಟ ಮಂಗಳವಾರದ ಬಿಹಾರ ಚುನಾವಣೆ ವೇಳೆ ಪ್ರಭಾವ ಬೀರುತ್ತದೆಯೇ’ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿ ‘ಸ್ಫೋಟಗಳು ಆಗಬಾರದು. ಅದರಿಂದ ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಾರೆ. ಚುನಾವಣೆ ವೇಳೆಯಲ್ಲೇ ಏಕೆ ಸ್ಫೋಟಗಳು ಹೆಚ್ಚು ಎಂಬ ಬಗ್ಗೆ ಕೇಂದ್ರವೇ ಉತ್ತರಿಸಬೇಕು. ಈ ಸ್ಫೋಟವು ಬಿಹಾರ ಚುನಾವಣೆಯಲ್ಲಿ ಬಿಜೆಪಿ ಮೇಲೆ ಋಣಾತ್ಮಕ ಪ್ರಭಾವ ಬೀರುವ ಸಾಧ್ಯತೆಯೇ ಹೆಚ್ಚು’ ಎಂದರು. </p><p><strong>15ರಂದು ದೆಹಲಿಗೆ:</strong> </p><p>‘ಪಕ್ಷದ ಹಿರಿಯ ನಾಯಕ ಕಪಿಲ್ ಸಿಬಲ್ ಅವರ ಕಾರ್ಯಕ್ರಮದಲ್ಲಿ ಭಾಗವಹಿಸಲು ನ. 15 ರಂದು ದೆಹಲಿಗೆ ಹೋಗುತ್ತಿದ್ದೇನೆ. ಅವತ್ತೇ ವಾಪಾಸ್ ಬರುವ ಅಂದಾಜಿದೆ. ರಾಹುಲ್ ಗಾಂಧಿ ಭೇಟಿಗೆ ಸಮಯ ಕೋರಿದ್ದು, ಅವಕಾಶ ಸಿಕ್ಕರೆ ಹೈಕಮಾಂಡ್ ಭೇಟಿಯಾಗುತ್ತೇನೆ’ ಎಂದರು.</p><p>ಭಾರತ ಹಿಂದೂ ರಾಷ್ಟ್ರ ಎಂಬ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಪ್ರತಿಕ್ರಿಯಿಸಿ ‘ಭಾರತ ಬಹುತ್ವದ ಸಂಸ್ಕೃತಿಯುಳ್ಳ ದೇಶ. ಎಲ್ಲ ಧರ್ಮೀಯರು ನಮ್ಮಲ್ಲಿ ಇದ್ದಾರೆ’ ಎಂದರು. ‘ ಆರ್ಎಸ್ಎಸ್ನವರು ಮೊದಲು ದೇಶದಲ್ಲಿನ ಅಸಮಾನತೆ, ಅಸ್ಪೃಶ್ಯತೆ ಬಗ್ಗೆ ಮಾತನಾಡಲಿ’ ಎಂದು ಸಲಹೆ ನೀಡಿದರು. </p><p>ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಕಾಂಗ್ರೆಸ್ನತ್ತ ವಾಲಿರುವ ಕುರಿತು ಪ್ರತಿಕ್ರಿಯಿಸಿದ ಅವರು ‘ಜಿ.ಟಿ. ದೇವೇಗೌಡ ಸೇರಿದಂತೆ ಯಾರನ್ನೂ ಪಕ್ಷಕ್ಕೆ ಆಹ್ವಾನಿಸುವುದಿಲ್ಲ. ಆದರೆ ಪಕ್ಷದ ಸಿದ್ದಾಂತ ಒಪ್ಪಿ ಬರುವವರಿಗೆ ಬೇಡ ಎನ್ನುವುದಿಲ್ಲ’ ಎಂದರು. </p><p>‘ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರ ಯಾವುದೇ ತಡೆ ನೀಡಿಲ್ಲ. ನೀಡುವುದೂ ಇಲ್ಲ’ ಎಂದರು.</p>.Delhi Red Fort blast: ಮೃತರ ಸಂಖ್ಯೆ 12ಕ್ಕೆ ಏರಿಕೆ.Delhi Blast | ಕೃತ್ಯದ ಆಳಕ್ಕಿಳಿದು ಶೋಧಿಸಲಿವೆ ತನಿಖಾ ಸಂಸ್ಥೆಗಳು: PM ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ದೆಹಲಿಯ ಕೆಂಪುಕೋಟೆ ಬಳಿ ನಡೆದ ಸ್ಫೋಟದ ಬಗ್ಗೆ ಕೇಂದ್ರ ಸರ್ಕಾರವೇ ಸಮಗ್ರ ತನಿಖೆ ನಡೆಸಿ ಉತ್ತರಿಸಲಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. </p><p>ಮಂಗಳವಾರ ಇಲ್ಲಿನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ ‘ ದೇಶದಲ್ಲಿ ಚುನಾವಣೆ ವೇಳೆಯಲ್ಲೇ ಏಕೆ ಸ್ಫೋಟಗಳು ಆಗುತ್ತಿವೆ ? ದೆಹಲಿ ಸ್ಫೋಟ ಮಂಗಳವಾರದ ಬಿಹಾರ ಚುನಾವಣೆ ವೇಳೆ ಪ್ರಭಾವ ಬೀರುತ್ತದೆಯೇ’ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿ ‘ಸ್ಫೋಟಗಳು ಆಗಬಾರದು. ಅದರಿಂದ ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಾರೆ. ಚುನಾವಣೆ ವೇಳೆಯಲ್ಲೇ ಏಕೆ ಸ್ಫೋಟಗಳು ಹೆಚ್ಚು ಎಂಬ ಬಗ್ಗೆ ಕೇಂದ್ರವೇ ಉತ್ತರಿಸಬೇಕು. ಈ ಸ್ಫೋಟವು ಬಿಹಾರ ಚುನಾವಣೆಯಲ್ಲಿ ಬಿಜೆಪಿ ಮೇಲೆ ಋಣಾತ್ಮಕ ಪ್ರಭಾವ ಬೀರುವ ಸಾಧ್ಯತೆಯೇ ಹೆಚ್ಚು’ ಎಂದರು. </p><p><strong>15ರಂದು ದೆಹಲಿಗೆ:</strong> </p><p>‘ಪಕ್ಷದ ಹಿರಿಯ ನಾಯಕ ಕಪಿಲ್ ಸಿಬಲ್ ಅವರ ಕಾರ್ಯಕ್ರಮದಲ್ಲಿ ಭಾಗವಹಿಸಲು ನ. 15 ರಂದು ದೆಹಲಿಗೆ ಹೋಗುತ್ತಿದ್ದೇನೆ. ಅವತ್ತೇ ವಾಪಾಸ್ ಬರುವ ಅಂದಾಜಿದೆ. ರಾಹುಲ್ ಗಾಂಧಿ ಭೇಟಿಗೆ ಸಮಯ ಕೋರಿದ್ದು, ಅವಕಾಶ ಸಿಕ್ಕರೆ ಹೈಕಮಾಂಡ್ ಭೇಟಿಯಾಗುತ್ತೇನೆ’ ಎಂದರು.</p><p>ಭಾರತ ಹಿಂದೂ ರಾಷ್ಟ್ರ ಎಂಬ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಪ್ರತಿಕ್ರಿಯಿಸಿ ‘ಭಾರತ ಬಹುತ್ವದ ಸಂಸ್ಕೃತಿಯುಳ್ಳ ದೇಶ. ಎಲ್ಲ ಧರ್ಮೀಯರು ನಮ್ಮಲ್ಲಿ ಇದ್ದಾರೆ’ ಎಂದರು. ‘ ಆರ್ಎಸ್ಎಸ್ನವರು ಮೊದಲು ದೇಶದಲ್ಲಿನ ಅಸಮಾನತೆ, ಅಸ್ಪೃಶ್ಯತೆ ಬಗ್ಗೆ ಮಾತನಾಡಲಿ’ ಎಂದು ಸಲಹೆ ನೀಡಿದರು. </p><p>ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಕಾಂಗ್ರೆಸ್ನತ್ತ ವಾಲಿರುವ ಕುರಿತು ಪ್ರತಿಕ್ರಿಯಿಸಿದ ಅವರು ‘ಜಿ.ಟಿ. ದೇವೇಗೌಡ ಸೇರಿದಂತೆ ಯಾರನ್ನೂ ಪಕ್ಷಕ್ಕೆ ಆಹ್ವಾನಿಸುವುದಿಲ್ಲ. ಆದರೆ ಪಕ್ಷದ ಸಿದ್ದಾಂತ ಒಪ್ಪಿ ಬರುವವರಿಗೆ ಬೇಡ ಎನ್ನುವುದಿಲ್ಲ’ ಎಂದರು. </p><p>‘ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರ ಯಾವುದೇ ತಡೆ ನೀಡಿಲ್ಲ. ನೀಡುವುದೂ ಇಲ್ಲ’ ಎಂದರು.</p>.Delhi Red Fort blast: ಮೃತರ ಸಂಖ್ಯೆ 12ಕ್ಕೆ ಏರಿಕೆ.Delhi Blast | ಕೃತ್ಯದ ಆಳಕ್ಕಿಳಿದು ಶೋಧಿಸಲಿವೆ ತನಿಖಾ ಸಂಸ್ಥೆಗಳು: PM ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>