ನವದೆಹಲಿ: ಕೇಂದ್ರದ ವಿರುದ್ಧ ಜಂತರ್ ಮಂತರ್ನಲ್ಲಿ ಹಮ್ಮಿಕೊಂಡಿರುವ ‘ಚಲೋ ದೆಹಲಿ’ ಪ್ರತಿಭಟನೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ಥರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬುಧವಾರ ಬೆಳಿಗ್ಗೆ ದೆಹಲಿ ತಲುಪಿದ್ದಾರೆ.
ಗುರುವಾರ ಇದೇ ಜಾಗದಲ್ಲಿ ಕೇರಳ ಸರ್ಕಾರ ಕೇಂದ್ರ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದು, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೂಡ ಇಂದು ದೆಹಲಿ ತಲುಪಿದ್ದಾರೆ.
ತೆರಿಗೆ ಪಾಲು ಹಂಚಿಕೆ, ಅನುದಾನ, ನೆರವು ನೀಡಿಕೆಯ ವಿಷಯದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅನ್ಯಾಯ ಎಸಗುತ್ತಿದೆ ಎಂದು ಆರೋಪಿಸಿರುವ ಕರ್ನಾಟಕ ಮತ್ತು ಕೇರಳ ಸರ್ಕಾರ, ಈ ವಿಷಯವನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ಯಲು ನಿರ್ಧರಿಸಿ ಪ್ರತಿಭಟನೆ ಆರಂಭಿಸಿವೆ. ಕೇರಳ ಸರ್ಕಾರದ ಪ್ರತಿಭಟನೆಗೆ ತಮಿಳುನಾಡು ಸರ್ಕಾರ ಕೂಡ ಬೆಂಬಲ ಸೂಚಿಸಿದೆ.