ಪ್ರತಿಮೆ ಅನಾವರಣಗೊಳಿಸಿದ ಶೃಂಗೇರಿ ಶಾರದಾ ಪೀಠದ ಮುಖ್ಯ ಸಲಹೆಗಾರ ವಿ.ಆರ್. ಗೌರಿಶಂಕರ್, ‘ಭಾರತೀಯ ಜ್ಞಾನ ಪರಂಪರೆಯುಳ್ಳ ಸನಾತನ, ಧಾರ್ಮಿಕ ಆಧಾರಿತ ಶಿಕ್ಷಣ ಮತ್ತು ಸಂಶೋಧನೆ ನಡೆಸುವ ಉದ್ದೇಶದಿಂದ ಈ ಸಂಸ್ಥೆಗೆ ವಿದ್ಯಾರಣ್ಯರ ಹೆಸರಿಡಲಾಗಿದೆ. ಇದೀಗ ಶೃಂಗೇರಿ ಶಾರದಾ ಪೀಠದ ನೆರವಿನೊಂದಿಗೆ ಪ್ರತಿಮೆ ಪ್ರತಿಷ್ಠಾಪನೆಗೊಂಡಿದೆ. ಶೃಂಗೇರಿ ಪೀಠದ ಸಹಯೋಗದಲ್ಲಿ ವಿದ್ಯಾರಣ್ಯರ ಕೊಡುಗೆಯ ಕುರಿತು ಇಲ್ಲಿ ಹೆಚ್ಚಿನ ಅಧ್ಯಯನ ನಡೆಸಲಾಗುತ್ತದೆ. ಅವರ ಪೀಠ ಸ್ಥಾಪಿಸುವ ಸಂಬಂಧ ಒಪ್ಪಂದ ಮಾಡಿಕೊಳ್ಳಲಾಗುವುದು’ ಎಂದರು. ‘ಈ ಹಿಂದೆ ಜೆಎನ್ಯು ಒಳಕ್ಕೆ ಬರುವುದಕ್ಕೂ ಭಯದ ವಾತಾವರಣ ಇತ್ತು. ಈಗ ಅಂತಹ ಪರಿಸ್ಥಿತಿ ಇಲ್ಲ’ ಎಂದರು.