ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹದಾಯಿ: ಶೀಘ್ರ ಅಧಿಸೂಚನೆ ಹೊರಡಿಸುವಂತೆ ಮನವಿ ಸಲ್ಲಿಸಲು 26ರಂದು ದೆಹಲಿಗೆ

Last Updated 22 ಫೆಬ್ರುವರಿ 2020, 8:40 IST
ಅಕ್ಷರ ಗಾತ್ರ

ಬೆಳಗಾವಿ: ‘ಮಹದಾಯಿ ನದಿ ನೀರು ಹಂಚಿಕೆ ಕುರಿತಂತೆ ತಕ್ಷಣ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಜಲಸಂಪನ್ಮೂಲ ಸಚಿವರನ್ನು ಕೋರಲು ಇದೇ ತಿಂಗಳ 26ರಂದು ನವದೆಹಲಿಗೆ ಹೋಗುತ್ತಿರುವೆ. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನೂ ಕರೆದೊಯ್ಯಲು ಪ್ರಯತ್ನಿಸುವೆ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಹದಾಯಿ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ. ಯೋಜನೆಗೆ ತಗಾದೆ ತೆಗೆಯುತ್ತಿರುವ ನೆರೆಯ ಗೋವಾ ರಾಜ್ಯ ಬೇಕಿದ್ದರೆ ನ್ಯಾಯಾಲಯಕ್ಕೆ ಹೋಗಲಿ’ ಎಂದರು.

‘ಯೋಜನೆ ಅನುಷ್ಠಾನಕ್ಕೆ ಸುಮಾರು ₹200 ಕೋಟಿ ಕೊಡುತ್ತೇನೆಂದು ಮುಖ್ಯಮಂತ್ರಿಯವರು ಈಗಾಗಲೇ ಭರವಸೆ ನೀಡಿದ್ದಾರೆ. ಹಣ ಬಿಡುಗಡೆಯಾದ ತಕ್ಷಣ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು’ ಎಂದು ಹೇಳಿದರು.
‘ಮಹದಾಯಿ ಉಗಮಸ್ಥಳವಾಗಿರುವ ಖಾನಾಪುರದ ಕಣಕುಂಬಿಗೆ ಸದ್ಯದಲ್ಲಿಯೇ ಭೇಟಿ ನೀಡುತ್ತೇನೆ. ಕೃಷ್ಣಾ ಹಾಗೂ ಕಾವೇರಿ ನದಿ ನೀರು ಹಂಚಿಕೆ ಕುರಿತು ಮಾಹಿತಿ ಪಡೆದು ಪ್ರತಿಕ್ರಿಯಿಸುವೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT