ಎಐಡಿಎಸ್ಓ ಅಖಿಲ ಭಾರತ ಉಪಾಧ್ಯಕ್ಷ ಹಾಗೂ ಎಸ್ಯುಸಿಐಸಿ ಬಳ್ಳಾರಿ ಜಿಲ್ಲಾ ಸಮಿತಿ ಸದಸ್ಯರಾಗಿರುವ ಡಾ.ಪ್ರಮೋದ್, ರೈತರಿಗೆ ಬೆಂಬಲವಾಗಿ ನಿಂತಿರುವ ಮೆಡಿಕಲ್ ಸರ್ವಿಸ್ ಸೆಂಟರ್ನಿಂದ ಫೆ.27ರಂದು ಕರೆ ಬಂದ ಮಾರನೇ ದಿನವೇ ದೆಹಲಿಯಲ್ಲಿದ್ದರು. ಅವರು ವೈದ್ಯ ವೃತ್ತಿಯನ್ನು ಅವಲಂಬಿಸದೆ, ಪಕ್ಷ ಮತ್ತು ವಿದ್ಯಾರ್ಥಿ ಸಂಘಟನೆಗೇ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ.