ಸಂಸದ ಡಾ. ಉಮೇಶ ಜಾಧವ, ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಬಸವರಾಜ ಮತ್ತಿಮೂಡ, ರಾಜಕುಮಾರ ಪಾಟೀಲ ತೇಲ್ಕೂರ ಸೇರಿ ಮತ್ತಿತರರ ಮನೆ ಎದುರು ಅವರು ಪ್ರತಿಭಟನೆ ನಡೆಸಿದರು. ಬೇಡಿಕೆಗಳನ್ನು ಈಡೇರಿಸಬೇಕೆಂದು ಪಟ್ಟು
ಹಿಡಿದರು. ಜಿಲ್ಲಾ ಉಸ್ತುವಾರಿ ಸಚಿವ ಮುರಗೇಶ ನಿರಾಣಿ ಅಧ್ಯಕ್ಷತೆಯಲ್ಲಿ ಸಭೆಯಿದ್ದ ಕಾರಣ, ಸಂಸದ ಹಾಗೂ ಶಾಸಕರು ಪ್ರತಿಭಟನಕಾರರನ್ನು ಭೇಟಿ ಆಗಲಿಲ್ಲ.