<p><strong>ಬೆಂಗಳೂರು:</strong> ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ಹೆಚ್ಚಿನ ಅನುದಾನ ನೀಡಲು ಮುಖ್ಯಮಂತ್ರಿಯವರ ಜತೆ ಚರ್ಚಿಸುವುದಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ಭರವಸೆ ನೀಡಿದರು.</p>.<p>ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಬಿಲ್ಲವ–ಈಡಿಗ ಸಮುದಾಯಕ್ಕೆ ಸೇರಿದ ಶಾಸಕರು ಹೆಚ್ಚಿನ ಅನುದಾನಕ್ಕೆ ಪಟ್ಟು ಹಿಡಿದರು. ಬಿಜೆಪಿಯ ರಾಜೇಶ್ ನಾಯಕ್ ಅವರು ವಿಷಯ ಪ್ರಸ್ತಾಪಿಸಿದರು.</p>.<p>ವಿಷಯ ಪ್ರಸ್ತಾಪಿಸಿದ ರಾಜೇಶ ನಾಯಕ್ ಅವರು, ‘ನಿಗಮಕ್ಕೆ ಅಧ್ಯಕ್ಷರನ್ನು ನೇಮಿಸಿದ್ದು ಬಿಟ್ಟರೆ ಬೇರೆ ಏನೂ ಆಗಿಲ್ಲ. ನಿಗಮಕ್ಕೆ ಹೆಚ್ಚಿನ ಅನುದಾನ ನೀಡಿ ಚಟುವಟಿಕೆಗಳನ್ನು ಆರಂಭಿಸಬೇಕು’ ಎಂದು ಒತ್ತಾಯಿಸಿದರು.</p>.<p>ಬಿಜೆಪಿಯ ವಿ.ಸುನಿಲ್ಕುಮಾರ್, ‘ನಿಗಮಕ್ಕೆ ಎಂಟು ತಿಂಗಳ ಹಿಂದೆಯೇ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಆದರೆ, ನಿಗಮ ನೋಂದಣಿ ಆಗಿದ್ದು ಜನವರಿಯಲ್ಲಿ. ಬಿಜೆಪಿ ಸರ್ಕಾರ ಇದ್ದಾಗ, ಕೋಶ ಸ್ಥಾಪಿಸಿ ಮೂಲ ಧನ ₹10 ಕೋಟಿ ಇಡಲಾಗಿತ್ತು. ಅದನ್ನೇ ವರ್ಗಾವಣೆ ಮಾಡಿಕೊಂಡಿದ್ದೀರಿ. ಕನಿಷ್ಠ ₹100 ಕೋಟಿ ಅನುದಾನ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>ಕಾಂಗ್ರೆಸ್ನ ಬೇಳೂರು ಗೋಪಾಲಕೃಷ್ಣ, ಈ ನಿಗಮಕ್ಕೆ ₹500 ಕೋಟಿ ನಿಗದಿ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಗುರ್ಮೆ ಸುರೇಶ್ ಶೆಟ್ಟಿ , ಸೇಂದಿ ಇಳಿಸುವುದನ್ನು ನಿಷೇಧಿಸಿರುವ ಕಾರಣ 1.25 ಲಕ್ಷ ಜನ ವಲಸೆ ಹೋಗಿದ್ದಾರೆ. ಮಲೆನಾಡು–ಕರಾವಳಿ ಭಾಗದಲ್ಲಿ ಸೇಂದಿ ಇಳಿಸಲು ಅವಕಾಶ ಇದ್ದು, ಉಳಿದ ಕಡೆ ಇರುವ ನಿರ್ಬಂಧವನ್ನು ತೆಗೆದು ಹಾಕಬೇಕು ಎಂದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಶಿವರಾಜ್ ತಂಗಡಗಿ, ‘ಬಿಜೆಪಿ ಅವಧಿಯಲ್ಲಿ ಕೋಶ ಸ್ಥಾಪಿಸಿ ₹10 ಕೋಟಿ ಇಟ್ಟಿದ್ದು ಬಿಟ್ಟರೆ ಬೇರೆ ಏನೂ ಮಾಡಿಲ್ಲ. ನಾವು ರೂಪು ರೇಷೆ ಸಿದ್ಧ ಮಾಡಿ ಅಭಿವೃದ್ಧಿ ನಿಗಮ ಮಾಡಿದ್ದೇವೆ. ₹10 ಕೋಟಿಯನ್ನು ನಿಗಮಕ್ಕೆ ವರ್ಗಾವಣೆ ಮಾಡಿದ್ದೇವೆ. ಹೆಚ್ಚಿನ ಅನುದಾನಕ್ಕೆ ಮುಖ್ಯಮಂತ್ರಿಯವರ ಜತೆ ಚರ್ಚಿಸುತ್ತೇನೆ’ ಎಂಬ ಭರವಸೆ ನೀಡಿದರು.</p>.<p>‘ನಿಗಮಕ್ಕೆ ₹50 ಕೋಟಿಯಿಂದ ₹100 ಕೋಟಿ ಅನುದಾನ ಇಡಬೇಕು ಎಂಬ ಅಪೇಕ್ಷೆ ಇದೆ’ ಎಂದೂ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ಹೆಚ್ಚಿನ ಅನುದಾನ ನೀಡಲು ಮುಖ್ಯಮಂತ್ರಿಯವರ ಜತೆ ಚರ್ಚಿಸುವುದಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ಭರವಸೆ ನೀಡಿದರು.</p>.<p>ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಬಿಲ್ಲವ–ಈಡಿಗ ಸಮುದಾಯಕ್ಕೆ ಸೇರಿದ ಶಾಸಕರು ಹೆಚ್ಚಿನ ಅನುದಾನಕ್ಕೆ ಪಟ್ಟು ಹಿಡಿದರು. ಬಿಜೆಪಿಯ ರಾಜೇಶ್ ನಾಯಕ್ ಅವರು ವಿಷಯ ಪ್ರಸ್ತಾಪಿಸಿದರು.</p>.<p>ವಿಷಯ ಪ್ರಸ್ತಾಪಿಸಿದ ರಾಜೇಶ ನಾಯಕ್ ಅವರು, ‘ನಿಗಮಕ್ಕೆ ಅಧ್ಯಕ್ಷರನ್ನು ನೇಮಿಸಿದ್ದು ಬಿಟ್ಟರೆ ಬೇರೆ ಏನೂ ಆಗಿಲ್ಲ. ನಿಗಮಕ್ಕೆ ಹೆಚ್ಚಿನ ಅನುದಾನ ನೀಡಿ ಚಟುವಟಿಕೆಗಳನ್ನು ಆರಂಭಿಸಬೇಕು’ ಎಂದು ಒತ್ತಾಯಿಸಿದರು.</p>.<p>ಬಿಜೆಪಿಯ ವಿ.ಸುನಿಲ್ಕುಮಾರ್, ‘ನಿಗಮಕ್ಕೆ ಎಂಟು ತಿಂಗಳ ಹಿಂದೆಯೇ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಆದರೆ, ನಿಗಮ ನೋಂದಣಿ ಆಗಿದ್ದು ಜನವರಿಯಲ್ಲಿ. ಬಿಜೆಪಿ ಸರ್ಕಾರ ಇದ್ದಾಗ, ಕೋಶ ಸ್ಥಾಪಿಸಿ ಮೂಲ ಧನ ₹10 ಕೋಟಿ ಇಡಲಾಗಿತ್ತು. ಅದನ್ನೇ ವರ್ಗಾವಣೆ ಮಾಡಿಕೊಂಡಿದ್ದೀರಿ. ಕನಿಷ್ಠ ₹100 ಕೋಟಿ ಅನುದಾನ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>ಕಾಂಗ್ರೆಸ್ನ ಬೇಳೂರು ಗೋಪಾಲಕೃಷ್ಣ, ಈ ನಿಗಮಕ್ಕೆ ₹500 ಕೋಟಿ ನಿಗದಿ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಗುರ್ಮೆ ಸುರೇಶ್ ಶೆಟ್ಟಿ , ಸೇಂದಿ ಇಳಿಸುವುದನ್ನು ನಿಷೇಧಿಸಿರುವ ಕಾರಣ 1.25 ಲಕ್ಷ ಜನ ವಲಸೆ ಹೋಗಿದ್ದಾರೆ. ಮಲೆನಾಡು–ಕರಾವಳಿ ಭಾಗದಲ್ಲಿ ಸೇಂದಿ ಇಳಿಸಲು ಅವಕಾಶ ಇದ್ದು, ಉಳಿದ ಕಡೆ ಇರುವ ನಿರ್ಬಂಧವನ್ನು ತೆಗೆದು ಹಾಕಬೇಕು ಎಂದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಶಿವರಾಜ್ ತಂಗಡಗಿ, ‘ಬಿಜೆಪಿ ಅವಧಿಯಲ್ಲಿ ಕೋಶ ಸ್ಥಾಪಿಸಿ ₹10 ಕೋಟಿ ಇಟ್ಟಿದ್ದು ಬಿಟ್ಟರೆ ಬೇರೆ ಏನೂ ಮಾಡಿಲ್ಲ. ನಾವು ರೂಪು ರೇಷೆ ಸಿದ್ಧ ಮಾಡಿ ಅಭಿವೃದ್ಧಿ ನಿಗಮ ಮಾಡಿದ್ದೇವೆ. ₹10 ಕೋಟಿಯನ್ನು ನಿಗಮಕ್ಕೆ ವರ್ಗಾವಣೆ ಮಾಡಿದ್ದೇವೆ. ಹೆಚ್ಚಿನ ಅನುದಾನಕ್ಕೆ ಮುಖ್ಯಮಂತ್ರಿಯವರ ಜತೆ ಚರ್ಚಿಸುತ್ತೇನೆ’ ಎಂಬ ಭರವಸೆ ನೀಡಿದರು.</p>.<p>‘ನಿಗಮಕ್ಕೆ ₹50 ಕೋಟಿಯಿಂದ ₹100 ಕೋಟಿ ಅನುದಾನ ಇಡಬೇಕು ಎಂಬ ಅಪೇಕ್ಷೆ ಇದೆ’ ಎಂದೂ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>