<p><strong>ಬೆಂಗಳೂರು</strong>: ಮೂರು ಎಕರೆವರೆಗಿನ ಒತ್ತುವರಿ ಪ್ರಕರಣಗಳನ್ನು ತೆರವು ಕಾರ್ಯಾಚರಣೆ ವ್ಯಾಪ್ತಿಯಿಂದ ಕೈಬಿಡಬೇಕು. ಅರಣ್ಯವಾಸಿಗಳ ಪರ ಸುಪ್ರೀಂ ಕೋರ್ಟ್ಗೆ ರಾಜ್ಯ ಸರ್ಕಾರವೇ ಪ್ರಮಾಣಪತ್ರ ಸಲ್ಲಿಸಬೇಕು ಎಂದು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಒತ್ತಾಯಿಸಿದರು.</p>.<p>ಕಾನೂನು ಸಚಿವ ಎಚ್.ಕೆ. ಪಾಟೀಲ ಅವರಿಗೆ ಬುಧವಾರ ಮನವಿ ಸಲ್ಲಿಸಿದ ನಂತರ ಮಾತನಾಡಿದ ಅವರು, ‘ಅರಣ್ಯವಾಸಿಗಳ ಪರ ರಾಜ್ಯ ಸರ್ಕಾರ ಈ ಹಿಂದೆ ಪ್ರಕಟಿಸಿದ ನಿಲುವಿನಂತೆ ನಡೆದುಕೊಳ್ಳಬೇಕು. ಒತ್ತುವರಿ ಭೂಮಿ, ಪಟ್ಟಾ ಭೂಮಿ ಸೇರಿ ಮೂರು ಎಕರೆಗಿಂತ ಕಡಿಮೆ ಇರುವ ಒತ್ತುವರಿ ತೆರವುಗೊಳಿಸದಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ಸ್ವಾಗತಾರ್ಹ. ಈ ಕುರಿತು ಸುಪ್ರೀಂಕೋರ್ಟ್ಗೂ ಮನವರಿಕೆ ಮಾಡಿಕೊಡಬೇಕು’ ಎಂದರು.</p>.<p>‘ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಗಳು ತಿರಸ್ಕೃತವಾಗಿದ್ದರೆ, ಅಂತಹ ಅರ್ಜಿದಾರರನ್ನು ಅರಣ್ಯ ಪ್ರದೇಶದಿಂದ ಒಕ್ಕಲೆಬ್ಬಿಸಬೇಕು. ಅತಿಕ್ರಮಣ ಪ್ರದೇಶದಲ್ಲಿ ಮತ್ತೆ ಅರಣ್ಯ ಬೆಳೆಸಬೇಕು ಎಂದು ಕೋರಿ ಪರಿಸರವಾದಿಗಳು ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಈ ವಿಷಯದಲ್ಲಿ ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮೂರು ಎಕರೆವರೆಗಿನ ಒತ್ತುವರಿ ಪ್ರಕರಣಗಳನ್ನು ತೆರವು ಕಾರ್ಯಾಚರಣೆ ವ್ಯಾಪ್ತಿಯಿಂದ ಕೈಬಿಡಬೇಕು. ಅರಣ್ಯವಾಸಿಗಳ ಪರ ಸುಪ್ರೀಂ ಕೋರ್ಟ್ಗೆ ರಾಜ್ಯ ಸರ್ಕಾರವೇ ಪ್ರಮಾಣಪತ್ರ ಸಲ್ಲಿಸಬೇಕು ಎಂದು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಒತ್ತಾಯಿಸಿದರು.</p>.<p>ಕಾನೂನು ಸಚಿವ ಎಚ್.ಕೆ. ಪಾಟೀಲ ಅವರಿಗೆ ಬುಧವಾರ ಮನವಿ ಸಲ್ಲಿಸಿದ ನಂತರ ಮಾತನಾಡಿದ ಅವರು, ‘ಅರಣ್ಯವಾಸಿಗಳ ಪರ ರಾಜ್ಯ ಸರ್ಕಾರ ಈ ಹಿಂದೆ ಪ್ರಕಟಿಸಿದ ನಿಲುವಿನಂತೆ ನಡೆದುಕೊಳ್ಳಬೇಕು. ಒತ್ತುವರಿ ಭೂಮಿ, ಪಟ್ಟಾ ಭೂಮಿ ಸೇರಿ ಮೂರು ಎಕರೆಗಿಂತ ಕಡಿಮೆ ಇರುವ ಒತ್ತುವರಿ ತೆರವುಗೊಳಿಸದಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ಸ್ವಾಗತಾರ್ಹ. ಈ ಕುರಿತು ಸುಪ್ರೀಂಕೋರ್ಟ್ಗೂ ಮನವರಿಕೆ ಮಾಡಿಕೊಡಬೇಕು’ ಎಂದರು.</p>.<p>‘ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಗಳು ತಿರಸ್ಕೃತವಾಗಿದ್ದರೆ, ಅಂತಹ ಅರ್ಜಿದಾರರನ್ನು ಅರಣ್ಯ ಪ್ರದೇಶದಿಂದ ಒಕ್ಕಲೆಬ್ಬಿಸಬೇಕು. ಅತಿಕ್ರಮಣ ಪ್ರದೇಶದಲ್ಲಿ ಮತ್ತೆ ಅರಣ್ಯ ಬೆಳೆಸಬೇಕು ಎಂದು ಕೋರಿ ಪರಿಸರವಾದಿಗಳು ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಈ ವಿಷಯದಲ್ಲಿ ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>