ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹವಾಮಾನದಲ್ಲಿ ವೈಪರೀತ್ಯ, ಮಳೆಯಿಂದಾಗಿ ರಾಜ್ಯದಲ್ಲಿ ಡೆಂಗಿ ಉಲ್ಬಣ

Last Updated 16 ಅಕ್ಟೋಬರ್ 2022, 19:30 IST
ಅಕ್ಷರ ಗಾತ್ರ

ಬೆಂಗಳೂರು: ಹವಾಮಾನದಲ್ಲಿ ವೈಪರೀತ್ಯ ಹಾಗೂ ಮಳೆಯಿಂದಾಗಿ ರಾಜ್ಯದಲ್ಲಿಡೆಂಗಿಪೀಡಿತರ ಸಂಖ್ಯೆ ಉಲ್ಬಣಗೊಂಡಿದ್ದು, ಒಂದೇ ತಿಂಗಳಲ್ಲಿ 987 ಪ್ರಕರಣಗಳು ದೃಢಪಟ್ಟಿವೆ.

ಈ ವರ್ಷ 1.45 ಲಕ್ಷಕ್ಕೂ ಅಧಿಕಡೆಂಗಿಶಂಕಿತರನ್ನು ಗುರುತಿಸಿ, ತಪಾಸಣೆಗೆ ಒಳಪಡಿಸಲಾಗಿದೆ. 60 ಸಾವಿರಕ್ಕೂ ಅಧಿಕ ಮಂದಿಯ ರಕ್ತ ಪರೀಕ್ಷೆ ನಡೆಸಲಾಗಿದೆ.ಈವರೆಗೆ ವರದಿಯಾದ ಒಟ್ಟುಡೆಂಗಿಪ್ರಕರಣಗಳ ಸಂಖ್ಯೆ7,024 ಕ್ಕೆ ಏರಿಕೆಯಾಗಿದೆ. ಡೆಂಗಿ ಪೀಡಿತರಲ್ಲಿ ನಾಲ್ವರು ಮರಣ ಹೊಂದಿದ್ದಾರೆ. ಕಳೆದ ವರ್ಷ7,189ಡೆಂಗಿಪ್ರಕರಣಗಳು ದೃಢಪಟ್ಟಿದ್ದವು. ಜ್ವರ ಪೀಡಿತರಲ್ಲಿ ಐವರು ಮೃತಪಟ್ಟಿದ್ದರು.

ಈ ವರ್ಷ ಎಲ್ಲ ಜಿಲ್ಲೆಗಳಲ್ಲಿಡೆಂಗಿಪ್ರಕರಣಗಳು ವರದಿಯಾಗಿವೆ.ಬಿಬಿಎಂಪಿ ವ್ಯಾಪ್ತಿಯಲ್ಲಿಯೇ 48,038 ಮಂದಿಯಲ್ಲಿಡೆಂಗಿಶಂಕೆ ವ್ಯಕ್ತವಾಗಿದ್ದು, 1,227 ಮಂದಿಯಲ್ಲಿ ಈ ಜ್ವರ ದೃಢಪಟ್ಟಿದೆ.ಮೈಸೂರಿನಲ್ಲಿ 605, ಉಡುಪಿಯಲ್ಲಿ 471,ಚಿತ್ರದುರ್ಗದಲ್ಲಿ 328, ದಕ್ಷಿಣ ಕನ್ನಡದಲ್ಲಿ316, ಕಲಬುರಗಿಯಲ್ಲಿ 278, ಬೆಳಗಾವಿಯಲ್ಲಿ265, ಶಿವಮೊಗ್ಗದಲ್ಲಿ 263, ಮಂಡ್ಯದಲ್ಲಿ 249, ಚಿಕ್ಕಬಳ್ಳಾಪುರದಲ್ಲಿ 237, ಹಾಸನದಲ್ಲಿ 217 ಹಾಗೂ ಕೋಲಾರದಲ್ಲಿ200 ಡೆಂಗಿಪ್ರಕರಣಗಳು ದೃಢಪಟ್ಟಿವೆ. ಉಳಿದ ಜಿಲ್ಲೆಗಳಲ್ಲಿ ಈ ಸಂಖ್ಯೆ 200 ಕ್ಕಿಂತ ಕಡಿಮೆ ಇವೆ.

29 ಜಿಲ್ಲೆಗಳಲ್ಲಿ ಚಿಕೂನ್‌ಗುನ್ಯಾ ಪ್ರಕರಣಗಳು ಪತ್ತೆಯಾಗಿವೆ. 50 ಸಾವಿರಕ್ಕೂ ಅಧಿಕ ಮಂದಿ ಚಿಕೂನ್‌ಗುನ್ಯಾ ಶಂಕಿತರನ್ನು ಗುರುತಿಸಿ, ತಪಾಸಣೆಗೆ ಒಳಪಡಿಸಲಾಗಿದೆ. 27 ಸಾವಿರಕ್ಕೂ ಅಧಿಕ ಮಂದಿಯ ರಕ್ತ ಪರೀಕ್ಷೆ ನಡೆಸಲಾಗಿದೆ. ಅವರಲ್ಲಿ 1,700 ಮಂದಿ ಈ ಜ್ವರಕ್ಕೆ ಒಳಗಾಗಿರುವುದು ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT