<p><strong>ಬೆಂಗಳೂರು:</strong> ‘ಡೆಂಗಿ ಜ್ವರಕ್ಕೆ ಕಾರಣವಾದ ಸೊಳ್ಳೆಗಳ ಉತ್ಪತ್ತಿಯನ್ನು ತಡೆಯಲು ಸಹಕರಿಸದೇ ಇರುವವರಿಗೆ ದಂಡ ವಿಧಿಸುವಂತಹ ಕಠಿಣ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ’ ಎಂದು ಹೈಕೋರ್ಟ್, ರಾಜ್ಯ ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಸಲಹೆ ಮಾಡಿದೆ.</p>.<p>ಡೆಂಗಿ ಜ್ವರ ಹೆಚ್ಚಳದ ಬಗ್ಗೆ ಮಾಧ್ಯಮಗಳ ವರದಿ ಆಧರಿಸಿ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಸರ್ಕಾರ ಮತ್ತು ಬಿಬಿಎಂಪಿ ಸಲ್ಲಿಸಿದ್ದ ಪ್ರಮಾಣಪತ್ರಗಳನ್ನು ಪರಿಶೀಲಿಸಿದ ನ್ಯಾಯಪೀಠವು, ‘ಸರ್ಕಾರ ತನ್ನ ಜವಾಬ್ದಾರಿ ಪೂರೈಸುವ ಕ್ರಮಗಳನ್ನು ಮುಂದುವರಿಸಬೇಕು ಹಾಗೂ ಇನ್ನಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಹೇಳಿತು.</p>.<div><div class="bigfact-title"><strong>51 ಕೇಂದ್ರ ನಿರಾಕರಣೆ:</strong></div><div class="bigfact-description"> ‘ಬೆಂಗಳೂರು ಮಹಾನಗರದಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುವ 51 ಕೇಂದ್ರಗಳನ್ನು ಗುರುತಿಸಲಾಗಿದೆ’ ಎಂಬ ಪಾಲಿಕೆಯ ವಿವರಣೆಯನ್ನು ತಿರಸ್ಕರಿಸಿದ ನ್ಯಾಯಪೀಠ, ‘ಕೇವಲ ಇಷ್ಟು ಕೇಂದ್ರಗಳಿರಲು ಸಾಧ್ಯವಿಲ್ಲ. ನಗರದಲ್ಲಿ ಜನವಸತಿ, ವಾಣಿಜ್ಯ ಮತ್ತು ಕಟ್ಟಡ ನಿರ್ಮಾಣ ವಲಯ ಅತಿ ದೊಡ್ಡದಾಗಿದೆ’ ಎಂದು ಹೇಳಿತು.</div></div>.<p><strong>ಆಕ್ಷೇಪ:</strong> ಪ್ರಕರಣದ ಅಮಿಕಸ್ ಕ್ಯೂರಿ (ಕೋರ್ಟ್ಗೆ ಸಹಕರಿಸುವ ವಕೀಲ) ಹಿರಿಯ ವಕೀಲ ಕೆ.ಎನ್.ಫಣೀಂದ್ರ, ಬಿಬಿಎಂಪಿ ಸಲ್ಲಿಸಿದ ಪ್ರಮಾಣಪತ್ರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.</p>.<p>‘ಬಿಬಿಎಂಪಿ 10 ದಿನಗಳಲ್ಲಿ 24 ಲಕ್ಷಕ್ಕೂ ಹೆಚ್ಚಿನ ಮನೆಗಳ ಸಮೀಕ್ಷೆ ನಡೆಸಿರುವುದಾಗಿ ಹೇಳಿದೆ. ಈ ಅಂಕಿ ಅಂಶ ವಾಸ್ತವವಾಗಿಲ್ಲ. ಸಮೀಕ್ಷೆ ನಡೆಸಿರುವ ತಂಡವು ಹೈಕೋರ್ಟ್ ಸುತ್ತಮುತ್ತಲ ಪ್ರದೇಶದ ಮನೆಗಳಿಗೆ ಭೇಟಿಯನ್ನೇ ನೀಡಿಲ್ಲ ಮತ್ತು ನಗರದಲ್ಲಿ ಎಲ್ಲೂ ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್ ಮಾಡಿಲ್ಲ. ಸೊಳ್ಳೆಗಳ ಹಾಟ್ಸ್ಪಾಟ್ಗಳನ್ನು ಗುರುತಿಸಲು ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿಲ್ಲ’ ಎಂದು ದೂರಿದರು.</p>.<p>‘ಆರೋಗ್ಯ ಇಲಾಖೆ ನಿರ್ದೇಶಕರು ಸಲ್ಲಿಸಿರುವ ವರದಿಯಲ್ಲಿ ಆಗಸ್ಟ್ನಲ್ಲಿ ಡೆಂಗಿ ಪ್ರಕರಣ ತಕ್ಕಮಟ್ಟಿಗೆ ಇಳಿಕೆಯಾಗಿವೆ. ಮುಂಗಾರು ಮಳೆ ಮುಗಿಯುತ್ತಾ ಬಂದಿರುವುದು ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಾಗಬಹುದು’ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಎಸ್.ಶ್ರೀರಂಗ, ‘ನವದೆಹಲಿ ಮತ್ತು ಇತರೆಡೆ ಡೆಂಗಿ ಜ್ವರದ ಪ್ರಕರಣಗಳ ತಡೆಗೆ ವಿಶೇಷ ಕ್ರಮ ಕೈಗೊಳ್ಳಲಾಗಿದೆ. ಅಂತಹ ಕ್ರಮಗಳನ್ನೂ ರಾಜ್ಯದಲ್ಲೂ ಕೈಗೊಳ್ಳಬೇಕು. ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಈ ಬಗ್ಗೆ ನಿಗಾ ವಹಿಸಲು ವಿಶೇಷ ಅಧಿಕಾರಿ ನಿಯೋಜಿಸಬೇಕು’ ಎಂದರು.</p>.<p>ಅಂತಿಮವಾಗಿ ನ್ಯಾಯಪೀಠವು, ‘ಡೆಂಗಿ ಜ್ವರ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಪ್ರಮಾಣಪತ್ರ ಸಲ್ಲಿಸಿ’ ಎಂದು ಸರ್ಕಾರ ಮತ್ತು ಬಿಬಿಎಂಪಿಗೆ ಸೂಚಿಸಿ ವಿಚಾರಣೆಯನ್ನು ಇದೇ 28ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಡೆಂಗಿ ಜ್ವರಕ್ಕೆ ಕಾರಣವಾದ ಸೊಳ್ಳೆಗಳ ಉತ್ಪತ್ತಿಯನ್ನು ತಡೆಯಲು ಸಹಕರಿಸದೇ ಇರುವವರಿಗೆ ದಂಡ ವಿಧಿಸುವಂತಹ ಕಠಿಣ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ’ ಎಂದು ಹೈಕೋರ್ಟ್, ರಾಜ್ಯ ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಸಲಹೆ ಮಾಡಿದೆ.</p>.<p>ಡೆಂಗಿ ಜ್ವರ ಹೆಚ್ಚಳದ ಬಗ್ಗೆ ಮಾಧ್ಯಮಗಳ ವರದಿ ಆಧರಿಸಿ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಸರ್ಕಾರ ಮತ್ತು ಬಿಬಿಎಂಪಿ ಸಲ್ಲಿಸಿದ್ದ ಪ್ರಮಾಣಪತ್ರಗಳನ್ನು ಪರಿಶೀಲಿಸಿದ ನ್ಯಾಯಪೀಠವು, ‘ಸರ್ಕಾರ ತನ್ನ ಜವಾಬ್ದಾರಿ ಪೂರೈಸುವ ಕ್ರಮಗಳನ್ನು ಮುಂದುವರಿಸಬೇಕು ಹಾಗೂ ಇನ್ನಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಹೇಳಿತು.</p>.<div><div class="bigfact-title"><strong>51 ಕೇಂದ್ರ ನಿರಾಕರಣೆ:</strong></div><div class="bigfact-description"> ‘ಬೆಂಗಳೂರು ಮಹಾನಗರದಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುವ 51 ಕೇಂದ್ರಗಳನ್ನು ಗುರುತಿಸಲಾಗಿದೆ’ ಎಂಬ ಪಾಲಿಕೆಯ ವಿವರಣೆಯನ್ನು ತಿರಸ್ಕರಿಸಿದ ನ್ಯಾಯಪೀಠ, ‘ಕೇವಲ ಇಷ್ಟು ಕೇಂದ್ರಗಳಿರಲು ಸಾಧ್ಯವಿಲ್ಲ. ನಗರದಲ್ಲಿ ಜನವಸತಿ, ವಾಣಿಜ್ಯ ಮತ್ತು ಕಟ್ಟಡ ನಿರ್ಮಾಣ ವಲಯ ಅತಿ ದೊಡ್ಡದಾಗಿದೆ’ ಎಂದು ಹೇಳಿತು.</div></div>.<p><strong>ಆಕ್ಷೇಪ:</strong> ಪ್ರಕರಣದ ಅಮಿಕಸ್ ಕ್ಯೂರಿ (ಕೋರ್ಟ್ಗೆ ಸಹಕರಿಸುವ ವಕೀಲ) ಹಿರಿಯ ವಕೀಲ ಕೆ.ಎನ್.ಫಣೀಂದ್ರ, ಬಿಬಿಎಂಪಿ ಸಲ್ಲಿಸಿದ ಪ್ರಮಾಣಪತ್ರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.</p>.<p>‘ಬಿಬಿಎಂಪಿ 10 ದಿನಗಳಲ್ಲಿ 24 ಲಕ್ಷಕ್ಕೂ ಹೆಚ್ಚಿನ ಮನೆಗಳ ಸಮೀಕ್ಷೆ ನಡೆಸಿರುವುದಾಗಿ ಹೇಳಿದೆ. ಈ ಅಂಕಿ ಅಂಶ ವಾಸ್ತವವಾಗಿಲ್ಲ. ಸಮೀಕ್ಷೆ ನಡೆಸಿರುವ ತಂಡವು ಹೈಕೋರ್ಟ್ ಸುತ್ತಮುತ್ತಲ ಪ್ರದೇಶದ ಮನೆಗಳಿಗೆ ಭೇಟಿಯನ್ನೇ ನೀಡಿಲ್ಲ ಮತ್ತು ನಗರದಲ್ಲಿ ಎಲ್ಲೂ ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್ ಮಾಡಿಲ್ಲ. ಸೊಳ್ಳೆಗಳ ಹಾಟ್ಸ್ಪಾಟ್ಗಳನ್ನು ಗುರುತಿಸಲು ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿಲ್ಲ’ ಎಂದು ದೂರಿದರು.</p>.<p>‘ಆರೋಗ್ಯ ಇಲಾಖೆ ನಿರ್ದೇಶಕರು ಸಲ್ಲಿಸಿರುವ ವರದಿಯಲ್ಲಿ ಆಗಸ್ಟ್ನಲ್ಲಿ ಡೆಂಗಿ ಪ್ರಕರಣ ತಕ್ಕಮಟ್ಟಿಗೆ ಇಳಿಕೆಯಾಗಿವೆ. ಮುಂಗಾರು ಮಳೆ ಮುಗಿಯುತ್ತಾ ಬಂದಿರುವುದು ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಾಗಬಹುದು’ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಎಸ್.ಶ್ರೀರಂಗ, ‘ನವದೆಹಲಿ ಮತ್ತು ಇತರೆಡೆ ಡೆಂಗಿ ಜ್ವರದ ಪ್ರಕರಣಗಳ ತಡೆಗೆ ವಿಶೇಷ ಕ್ರಮ ಕೈಗೊಳ್ಳಲಾಗಿದೆ. ಅಂತಹ ಕ್ರಮಗಳನ್ನೂ ರಾಜ್ಯದಲ್ಲೂ ಕೈಗೊಳ್ಳಬೇಕು. ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಈ ಬಗ್ಗೆ ನಿಗಾ ವಹಿಸಲು ವಿಶೇಷ ಅಧಿಕಾರಿ ನಿಯೋಜಿಸಬೇಕು’ ಎಂದರು.</p>.<p>ಅಂತಿಮವಾಗಿ ನ್ಯಾಯಪೀಠವು, ‘ಡೆಂಗಿ ಜ್ವರ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಪ್ರಮಾಣಪತ್ರ ಸಲ್ಲಿಸಿ’ ಎಂದು ಸರ್ಕಾರ ಮತ್ತು ಬಿಬಿಎಂಪಿಗೆ ಸೂಚಿಸಿ ವಿಚಾರಣೆಯನ್ನು ಇದೇ 28ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>