ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡೆಂಗಿ: ರಾಜ್ಯದಲ್ಲಿ ಮತ್ತೆ ಐವರ ಸಾವು

Last Updated 16 ಡಿಸೆಂಬರ್ 2022, 15:40 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕಳೆದೊಂದು ವಾರದಲ್ಲಿ 478 ಮಂದಿ ಡೆಂಗಿ ಪೀಡಿತರಾಗಿರುವುದು ದೃಢಪಟ್ಟಿದೆ. ಈ ಮಾದರಿಯ ಜ್ವರ ಎದುರಿಸಿದವರಲ್ಲಿ ಮತ್ತೆ ಐವರು ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಈ ವರ್ಷ 1.88 ಲಕ್ಷಕ್ಕೂ ಅಧಿಕಡೆಂಗಿಶಂಕಿತರನ್ನು ಗುರುತಿಸಿ, ತಪಾಸಣೆಗೆ ಒಳಪಡಿಸಲಾಗಿದೆ. 78 ಸಾವಿರಕ್ಕೂ ಅಧಿಕ ಮಂದಿಯ ರಕ್ತ ಪರೀಕ್ಷೆ ನಡೆಸಲಾಗಿದೆ.ಈವರೆಗೆ ವರದಿಯಾದ ಒಟ್ಟುಡೆಂಗಿಪ್ರಕರಣಗಳ ಸಂಖ್ಯೆ8,972ಕ್ಕೆ ಏರಿಕೆಯಾಗಿದೆ.ಡೆಂಗಿಪೀಡಿತರಲ್ಲಿ ಒಟ್ಟು ಒಂಬತ್ತು ಮಂದಿ ಮರಣ ಹೊಂದಿದ್ದಾರೆ. ಕಳೆದ ವರ್ಷ7,189ಡೆಂಗಿಪ್ರಕರಣಗಳು ದೃಢಪಟ್ಟಿದ್ದವು. ಜ್ವರ ಪೀಡಿತರಲ್ಲಿ ಐವರು ಮೃತಪಟ್ಟಿದ್ದರು.

ಈ ವರ್ಷ ಎಲ್ಲ ಜಿಲ್ಲೆಗಳಲ್ಲಿಡೆಂಗಿಪ್ರಕರಣಗಳು ವರದಿಯಾಗಿವೆ.ಬಿಬಿಎಂಪಿ ವ್ಯಾಪ್ತಿಯಲ್ಲಿಯೇ 67,256 ಮಂದಿಯಲ್ಲಿಡೆಂಗಿಶಂಕೆ ವ್ಯಕ್ತವಾಗಿದ್ದು, 1,914 ಮಂದಿಯಲ್ಲಿ ಈ ಜ್ವರ ದೃಢಪಟ್ಟಿದೆ. ವಾರದಿಂದ ಬೆಂಗಳೂರಿನಲ್ಲಿ ಡೆಂಗಿ ಉಲ್ಬಣಗೊಂಡಿದ್ದು, ಮೂರು ದಿನಗಳಲ್ಲಿ 216 ಮಂದಿ ಡೆಂಗಿ ಪೀಡಿತರಾಗಿದ್ದಾರೆ.ಮೈಸೂರಿನಲ್ಲಿ 736, ಉಡುಪಿಯಲ್ಲಿ 498, ವಿಜಯಪುರದಲ್ಲಿ 447,ಚಿತ್ರದುರ್ಗದಲ್ಲಿ 416,ದಕ್ಷಿಣ ಕನ್ನಡದಲ್ಲಿ378, ಕಲಬುರಗಿಯಲ್ಲಿ 367, ಬೆಳಗಾವಿಯಲ್ಲಿ 322 ಹಾಗೂ ಶಿವಮೊಗ್ಗದಲ್ಲಿ 316 ಡೆಂಗಿಪ್ರಕರಣಗಳು ದೃಢಪಟ್ಟಿವೆ. ಉಳಿದ ಜಿಲ್ಲೆಗಳಲ್ಲಿ ಈ ಸಂಖ್ಯೆ 300 ಕ್ಕಿಂತ ಕಡಿಮೆ ಇವೆ.

ಡೆಂಗಿ ಪೀಡಿತರಲ್ಲಿ ಚಿಕ್ಕಬಳ್ಳಾಪುರ, ವಿಜಯಪುರ ಹಾಗೂ ಉಡುಪಿಯಲ್ಲಿ ತಲಾ ಇಬ್ಬರು, ತುಮಕೂರು, ಧಾರವಾಡ ಮತ್ತು ಹಾಸನದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

29 ಜಿಲ್ಲೆಗಳಲ್ಲಿ ಚಿಕೂನ್‌ಗುನ್ಯಾ ಪ್ರಕರಣಗಳು ಪತ್ತೆಯಾಗಿವೆ. 61 ಸಾವಿರಕ್ಕೂ ಅಧಿಕ ಮಂದಿ ಚಿಕೂನ್‌ಗುನ್ಯಾ ಶಂಕಿತರನ್ನು ಗುರುತಿಸಿ, ತಪಾಸಣೆಗೆ ಒಳಪಡಿಸಲಾಗಿದೆ. 32 ಸಾವಿರಕ್ಕೂ ಅಧಿಕ ಮಂದಿಯ ರಕ್ತ ಪರೀಕ್ಷೆ ನಡೆಸಲಾಗಿದೆ. ಅವರಲ್ಲಿ 2,108 ಮಂದಿ ಈ ಜ್ವರಕ್ಕೆ ಒಳಗಾಗಿರುವುದು ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT