ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡೆಂಗಿ: 20 ದಿನಗಳಲ್ಲಿ 304 ಮಂದಿಗೆ ದೃಢ

Last Updated 27 ಮೇ 2022, 15:52 IST
ಅಕ್ಷರ ಗಾತ್ರ

ಬೆಂಗಳೂರು: ಅಕಾಲಿಕ ಮಳೆಯಿಂದಾಗಿ ರಾಜ್ಯದಲ್ಲಿ 20 ದಿನಗಳಲ್ಲಿ 304 ಮಂದಿ ಡೆಂಗಿ ಪೀಡಿತರಾಗಿರುವುದು ದೃಢಪಟ್ಟಿದೆ. ಈವರೆಗೆ ವರದಿಯಾದ ಡೆಂಗಿ ಪ್ರಕರಣಗಳ ಒಟ್ಟು ಸಂಖ್ಯೆ 1,542ಕ್ಕೆ ಏರಿಕೆಯಾಗಿದೆ.

29 ಸಾವಿರಕ್ಕೂ ಅಧಿಕ ಡೆಂಗಿ ಶಂಕಿತರನ್ನು ಗುರುತಿಸಿ, ತಪಾಸಣೆಗೆ ಒಳಪಡಿಸಲಾಗಿದೆ. 12,527 ಮಂದಿಯ ರಕ್ತ ಪರೀಕ್ಷೆ ನಡೆಸಲಾಗಿದೆ.ಬಿಬಿಎಂಪಿ ವ್ಯಾಪ್ತಿಯಲ್ಲಿಯೇ 12,627 ಮಂದಿಯಲ್ಲಿ ಡೆಂಗಿ ಶಂಕೆ ವ್ಯಕ್ತವಾಗಿದ್ದು, 302 ಮಂದಿಯಲ್ಲಿ ಈ ಜ್ವರ ದೃಢಪಟ್ಟಿದೆ.ಈ ವರ್ಷ ಯಾವುದೇ ಮರಣ ಪ್ರಕರಣ ವರದಿಯಾಗಿಲ್ಲ. 2021ರಲ್ಲಿ 7,189 ಮಂದಿಡೆಂಗಿಪೀಡಿತರಾಗಿದ್ದರು. ಅವರಲ್ಲಿ ಐವರುಮೃತಪಟ್ಟಿದ್ದರು.

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಡೆಂಗಿಪ್ರಕರಣಗಳು ಪತ್ತೆಯಾಗಿವೆ.ಪ್ರಕರಣಗಳ ಸಂಖ್ಯೆ ಮೂರು ಜಿಲ್ಲೆಗಳಲ್ಲಿ ಮೂರಂಕಿ, 24 ಜಿಲ್ಲೆಗಳಲ್ಲಿ ಎರಡಂಕಿಯಲ್ಲಿದೆ.ಉಡುಪಿಯಲ್ಲಿ 183, ಮೈಸೂರಿನಲ್ಲಿ 147,ಕೊಪ್ಪಳದಲ್ಲಿ 93, ಬಳ್ಳಾರಿಯಲ್ಲಿ 89, ಚಿತ್ರದುರ್ಗದಲ್ಲಿ 87, ವಿಜಯಪುರ ಹಾಗೂ ದಕ್ಷಿಣ ಕನ್ನಡದಲ್ಲಿ ತಲಾ 64,ದಾವಣಗೆರೆ ಹಾಗೂ ಶಿವಮೊಗ್ಗದಲ್ಲಿ ತಲಾ 54, ಕೋಲಾರದಲ್ಲಿ 44,ತುಮಕೂರಿನಲ್ಲಿ 34,ರಾಯಚೂರಿನಲ್ಲಿ 30, ಯಾದಗಿರಿ ಹಾಗೂ ಬಾಗಲಕೋಟೆಯಲ್ಲಿ ತಲಾ 28,ಹಾವೇರಿ, ಗದಗ ಹಾಗೂ ಬೆಳಗಾವಿಯಲ್ಲಿ ತಲಾ 25, ಕಲಬುರ್ಗಿಯಲ್ಲಿ 22 ಹಾಗೂ ಚಿಕ್ಕಬಳ್ಳಾಪುರದಲ್ಲಿ 20 ಪ್ರಕರಣಗಳು ದೃಢಪಟ್ಟಿವೆ. ಉಳಿದ ಜಿಲ್ಲೆಗಳಲ್ಲಿ ಈ ಸಂಖ್ಯೆ 20ಕ್ಕಿಂತ ಕಡಿಮೆ ಇವೆ.

26 ಜಿಲ್ಲೆಗಳಲ್ಲಿಚಿಕೂನ್‌ಗುನ್ಯಾ ಪ್ರಕರಣಗಳು ಪತ್ತೆಯಾಗಿವೆ.8 ಸಾವಿರಕ್ಕೂ ಅಧಿಕ ಮಂದಿಚಿಕೂನ್‌ಗುನ್ಯಾ ಶಂಕಿತರನ್ನು ಗುರುತಿಸಿ, ತಪಾಸಣೆಗೆ ಒಳಪಡಿಸಲಾಗಿದೆ. 5 ಸಾವಿರಕ್ಕೂ ಅಧಿಕ ಮಂದಿಯ ರಕ್ತ ಪರೀಕ್ಷೆ ನಡೆಸಲಾಗಿದೆ. ಅವರಲ್ಲಿ385 ಮಂದಿ ಈ ಜ್ವರಕ್ಕೆ ಒಳಗಾಗಿರುವುದು ದೃಢಪಟ್ಟಿದೆ. ವಿಜಯಪುರದಲ್ಲಿ 76, ಕೋಲಾರದಲ್ಲಿ 63,ಬೆಂಗಳೂರು ಗ್ರಾಮಾಂತರದಲ್ಲಿ 38,ತುಮಕೂರಿನಲ್ಲಿ 34, ಚಿತ್ರದುರ್ಗದಲ್ಲಿ 24, ದಾವಣಗೆರೆಯಲ್ಲಿ 17, ಹಾಸನದಲ್ಲಿ 15 ಹಾಗೂ ರಾಮನಗರದಲ್ಲಿ 13 ಪ್ರಕರಣಗಳು ವರದಿಯಾಗಿವೆ. ಉಳಿದ ಜಿಲ್ಲೆಗಳಲ್ಲಿ ಈ ಸಂಖ್ಯೆ 10ಕ್ಕಿಂತ ಕಡಿಮೆ ಇವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT