ಸರ್ಕಾರದ ಆದೇಶವನ್ನು ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಖಂಡಿಸಿದೆ. ಇಲಾಖೆ ರಾಜ್ಯದಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಸರಾಗಿದೆ. ಬೇರೆ ಬೇರೆ ಕಾಲಘಟ್ಟದಲ್ಲಿ ಐದು ಸಮಿತಿಗಳು ನೀಡಿರುವ ವರದಿ ಆಧಾರದಲ್ಲಿ ಸ್ವತಂತ್ರ ಅಸ್ತಿತ್ವ ಪಡೆದುಕೊಂಡಿದೆ. ಈಗ ಇರುವ ವ್ಯವಸ್ಥೆಯಂತೆ ಜಿಲ್ಲಾಧಿಕಾರಿಗಳು ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದು, ಸಮರ್ಪಕವಾಗಿ ಕಾರ್ಯಗಳು ನಡೆಯುತ್ತಿವೆ. ಇಂತಹ ಆದೇಶಗಳಿಂದ ಭವಿಷ್ಯದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಪ್ರತ್ಯೇಕ ಅಸ್ತಿತ್ವಕ್ಕೆ ಧಕ್ಕೆ ಬರಬಹುದು. ತಕ್ಷಣ ಆದೇಶ ಹಿಂಪಡೆಯಬೇಕು ಎಂದು ಸಂಘದ ಅಧ್ಯಕ್ಷ ಎ.ಎಚ್.ನಿಂಗೇಗೌಡ, ಕಾರ್ಯಾಧ್ಯಕ್ಷ ಎಸ್.ಆರ್.ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಶಿವರಾಮ್ ಬಿ. ಮಾಲೀಪಾಟೀಲ, ಖಂಜಾಂಚಿ ಜಯಣ್ಣ ವಿನಂತಿಸಿದ್ದಾರೆ.