<p><strong>ಬೆಂಗಳೂರು:</strong> ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ನಿಗಮ ಮತ್ತು ಮಂಡಳಿಗಳು ಹಣಕಾಸು ಇಲಾಖೆ ಮಾರ್ಗಸೂಚಿ ಉಲ್ಲಂಘಿಸಿ ಮಾರ್ಗಪಲ್ಲಟ ಮಾಡಿರಬಹುದಾದ ಸರ್ಕಾರದ ಹಣವನ್ನು ಮುಖ್ಯವಾಹಿನಿಗೆ ತರಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಸೂಚನೆ ನೀಡಿದ್ದಾರೆ.</p>.<p>ಬೇರೆ ಬೇರೆ ಖಾತೆಗಳಲ್ಲಿ ಹಣವನ್ನು ಮುಖ್ಯವಾಹಿನಿಗೆ 48 ಗಂಟೆಗಳಲ್ಲಿ ವರ್ಗಾಯಿಸಲು ಕ್ರಮ ತೆಗೆದುಕೊಳ್ಳಬೇಕು ಮತ್ತು ಈ ಕುರಿತು ವಿವರವಾದ ವರದಿಯನ್ನು 72 ಗಂಟೆಗಳಲ್ಲಿ ಇಲಾಖಾ ಕಾರ್ಯದರ್ಶಿಯವರಿಗೆ ಒದಗಿಸಬೇಕು ಎಂದು ಅವರು ಪ್ರವಾಸೋದ್ಯಮ ಇಲಾಖೆ ಪ್ರಧಾನಕಾರ್ಯದರ್ಶಿ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.</p>.<p>‘ರಾಜ್ಯ ಸರ್ಕಾರಿ ಸ್ವಾಮ್ಯದ ನಿಗಮ ಮತ್ತು ಮಂಡಳಿಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹಣಕಾಸು ಅಶಿಸ್ತಿನ ವರದಿಗಳ ಹಿನ್ನೆಲೆಯಲ್ಲಿ ನಮ್ಮ ಇಲಾಖೆ ವ್ಯಾಪ್ತಿಯಲ್ಲಿ ಬರುವ ನಿಗಮ–ಮಂಡಳಿಗಳು, ಅಂಗ–ಸಂಸ್ಥೆಗಳಲ್ಲಿ ಹಣಕಾಸು ಶಿಸ್ತನ್ನು ಕಟ್ಟುನಿಟ್ಟಾಗಿ ಪಾಲಿಸಲು ಮಹತ್ವದ ಕ್ರಮಗಳನ್ನು ಕೈಗೊಳ್ಳಬೇಕಾದ ಅಗತ್ಯವಿದೆ’ ಎಂದಿದ್ದಾರೆ.</p>.<h2>ಪತ್ರದ ಮುಖ್ಯಾಂಶಗಳು:</h2>.<ul><li><p>ಇಲಾಖೆಯ ಹಣವನ್ನು ಬ್ಯಾಂಕಿನಲ್ಲಿ ಠೇವಣಿ ಇರಿಸುವ ಸಂದರ್ಭದಲ್ಲಿ ಸರ್ಕಾರದ ಮಾನದಂಡಗಳನ್ನು (ಆರ್ಥಿಕ ಇಲಾಖೆ ಮಾನದಂಡಗಳು) ಮಾತ್ರ ಪಾಲಿಸುವುದು. ಠೇವಣಿ ಇರಿಸುವ ಸಂದರ್ಭದಲ್ಲಿ ಅಂತಹ ಉದ್ದೇಶಕ್ಕೆ ಲಭ್ಯವಿರುವ ಹಣಕಾಸಿನ ಪೂರ್ಣ ಮಾಹಿತಿಯನ್ನು ಮತ್ತು ಅದಕ್ಕೆ ಬೇಕಾದ ಅವಶ್ಯಕತೆಗಳನ್ನು ಕಡತದಲ್ಲಿ ದಾಖಲಿಸಬೇಕು.</p></li><li><p>ಅಗತ್ಯವಿಲ್ಲದ ಮತ್ತು ನಿಯಮಬಾಹಿರವಾದ ಯಾವುದೇ ಠೇವಣಿಯ ಮೇಲೆ ಓವರ್ ಡ್ರಾಫ್ಟ್ ಸೌಲಭ್ಯ ಪಡೆಯುವಂತಿಲ್ಲ. </p></li><li><p>ಹಣಕಾಸಿನ ವರ್ಗಾವಣೆ ಮತ್ತು ವ್ಯವಹಾರಗಳನ್ನು ಕಾಯಂ ಸಿಬ್ಬಂದಿ ಮಾತ್ರ ನಿರ್ವಹಿಸಬೇಕು.</p></li><li><p>ಎಲ್ಲ ಹಣಕಾಸಿನ ಸ್ವೀಕೃತಿಗಳನ್ನು ಕೇವಲ ಡಿಜಿಟಲ್ ಅಥವಾ ಆನ್ಲೈನ್ ಪಾವತಿ ಆಧಾರದ ತಂತ್ರಜ್ಞಾನ ಬಳಕೆ ಮಾಡುವುದು.</p></li><li><p>ಪ್ರತಿಯೊಂದು ಬ್ಯಾಂಕ್ ಖಾತೆಯಲ್ಲಿರುವ ಹಣವನ್ನು ಒಂದೇ ಖಾತೆಗೆ ವರ್ಗಾಯಿಸಿ ಕಾಯಂ ಸಿಬ್ಬಂದಿ ಮೂಲಕ ನಿರ್ವಹಣೆ ಮಾಡಿ ಸೂಕ್ತವಾದ ಹಣಕಾಸು ವರ್ಗಾವಣೆ ದಾಖಲೆಗಳಲ್ಲಿ ಕಾಯ್ದಿರಿಸಬೇಕು.</p></li><li><p>ಕಾಲ– ಕಾಲಕ್ಕೆ ನಿಯಮಾನುಸಾರ ಆಂತರಿಕ ಲೆಕ್ಕಪರಿಶೋಧನೆಯನ್ನು ಕಡ್ಡಾಯವಾಗಿ ಕೈಗೊಳ್ಳಬೇಕು. ಲೆಕ್ಕಪರಿಶೋಧನೆ ಸಂದರ್ಭದಲ್ಲಿ ಮಾಡಲಾಗುವ ಟಿಪ್ಪಣಿಗಳ ಕುರಿತು ಕೈಗೊಂಡ ಕ್ರಮಗಳನ್ನು ಕಾಲ ಕಾಲಕ್ಕೆ ಇಲಾಖೆ ಕಾರ್ಯದರ್ಶಿಯವರಿಗೆ ವರದಿ ಸಲ್ಲಿಸಬೇಕು.</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ನಿಗಮ ಮತ್ತು ಮಂಡಳಿಗಳು ಹಣಕಾಸು ಇಲಾಖೆ ಮಾರ್ಗಸೂಚಿ ಉಲ್ಲಂಘಿಸಿ ಮಾರ್ಗಪಲ್ಲಟ ಮಾಡಿರಬಹುದಾದ ಸರ್ಕಾರದ ಹಣವನ್ನು ಮುಖ್ಯವಾಹಿನಿಗೆ ತರಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಸೂಚನೆ ನೀಡಿದ್ದಾರೆ.</p>.<p>ಬೇರೆ ಬೇರೆ ಖಾತೆಗಳಲ್ಲಿ ಹಣವನ್ನು ಮುಖ್ಯವಾಹಿನಿಗೆ 48 ಗಂಟೆಗಳಲ್ಲಿ ವರ್ಗಾಯಿಸಲು ಕ್ರಮ ತೆಗೆದುಕೊಳ್ಳಬೇಕು ಮತ್ತು ಈ ಕುರಿತು ವಿವರವಾದ ವರದಿಯನ್ನು 72 ಗಂಟೆಗಳಲ್ಲಿ ಇಲಾಖಾ ಕಾರ್ಯದರ್ಶಿಯವರಿಗೆ ಒದಗಿಸಬೇಕು ಎಂದು ಅವರು ಪ್ರವಾಸೋದ್ಯಮ ಇಲಾಖೆ ಪ್ರಧಾನಕಾರ್ಯದರ್ಶಿ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.</p>.<p>‘ರಾಜ್ಯ ಸರ್ಕಾರಿ ಸ್ವಾಮ್ಯದ ನಿಗಮ ಮತ್ತು ಮಂಡಳಿಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹಣಕಾಸು ಅಶಿಸ್ತಿನ ವರದಿಗಳ ಹಿನ್ನೆಲೆಯಲ್ಲಿ ನಮ್ಮ ಇಲಾಖೆ ವ್ಯಾಪ್ತಿಯಲ್ಲಿ ಬರುವ ನಿಗಮ–ಮಂಡಳಿಗಳು, ಅಂಗ–ಸಂಸ್ಥೆಗಳಲ್ಲಿ ಹಣಕಾಸು ಶಿಸ್ತನ್ನು ಕಟ್ಟುನಿಟ್ಟಾಗಿ ಪಾಲಿಸಲು ಮಹತ್ವದ ಕ್ರಮಗಳನ್ನು ಕೈಗೊಳ್ಳಬೇಕಾದ ಅಗತ್ಯವಿದೆ’ ಎಂದಿದ್ದಾರೆ.</p>.<h2>ಪತ್ರದ ಮುಖ್ಯಾಂಶಗಳು:</h2>.<ul><li><p>ಇಲಾಖೆಯ ಹಣವನ್ನು ಬ್ಯಾಂಕಿನಲ್ಲಿ ಠೇವಣಿ ಇರಿಸುವ ಸಂದರ್ಭದಲ್ಲಿ ಸರ್ಕಾರದ ಮಾನದಂಡಗಳನ್ನು (ಆರ್ಥಿಕ ಇಲಾಖೆ ಮಾನದಂಡಗಳು) ಮಾತ್ರ ಪಾಲಿಸುವುದು. ಠೇವಣಿ ಇರಿಸುವ ಸಂದರ್ಭದಲ್ಲಿ ಅಂತಹ ಉದ್ದೇಶಕ್ಕೆ ಲಭ್ಯವಿರುವ ಹಣಕಾಸಿನ ಪೂರ್ಣ ಮಾಹಿತಿಯನ್ನು ಮತ್ತು ಅದಕ್ಕೆ ಬೇಕಾದ ಅವಶ್ಯಕತೆಗಳನ್ನು ಕಡತದಲ್ಲಿ ದಾಖಲಿಸಬೇಕು.</p></li><li><p>ಅಗತ್ಯವಿಲ್ಲದ ಮತ್ತು ನಿಯಮಬಾಹಿರವಾದ ಯಾವುದೇ ಠೇವಣಿಯ ಮೇಲೆ ಓವರ್ ಡ್ರಾಫ್ಟ್ ಸೌಲಭ್ಯ ಪಡೆಯುವಂತಿಲ್ಲ. </p></li><li><p>ಹಣಕಾಸಿನ ವರ್ಗಾವಣೆ ಮತ್ತು ವ್ಯವಹಾರಗಳನ್ನು ಕಾಯಂ ಸಿಬ್ಬಂದಿ ಮಾತ್ರ ನಿರ್ವಹಿಸಬೇಕು.</p></li><li><p>ಎಲ್ಲ ಹಣಕಾಸಿನ ಸ್ವೀಕೃತಿಗಳನ್ನು ಕೇವಲ ಡಿಜಿಟಲ್ ಅಥವಾ ಆನ್ಲೈನ್ ಪಾವತಿ ಆಧಾರದ ತಂತ್ರಜ್ಞಾನ ಬಳಕೆ ಮಾಡುವುದು.</p></li><li><p>ಪ್ರತಿಯೊಂದು ಬ್ಯಾಂಕ್ ಖಾತೆಯಲ್ಲಿರುವ ಹಣವನ್ನು ಒಂದೇ ಖಾತೆಗೆ ವರ್ಗಾಯಿಸಿ ಕಾಯಂ ಸಿಬ್ಬಂದಿ ಮೂಲಕ ನಿರ್ವಹಣೆ ಮಾಡಿ ಸೂಕ್ತವಾದ ಹಣಕಾಸು ವರ್ಗಾವಣೆ ದಾಖಲೆಗಳಲ್ಲಿ ಕಾಯ್ದಿರಿಸಬೇಕು.</p></li><li><p>ಕಾಲ– ಕಾಲಕ್ಕೆ ನಿಯಮಾನುಸಾರ ಆಂತರಿಕ ಲೆಕ್ಕಪರಿಶೋಧನೆಯನ್ನು ಕಡ್ಡಾಯವಾಗಿ ಕೈಗೊಳ್ಳಬೇಕು. ಲೆಕ್ಕಪರಿಶೋಧನೆ ಸಂದರ್ಭದಲ್ಲಿ ಮಾಡಲಾಗುವ ಟಿಪ್ಪಣಿಗಳ ಕುರಿತು ಕೈಗೊಂಡ ಕ್ರಮಗಳನ್ನು ಕಾಲ ಕಾಲಕ್ಕೆ ಇಲಾಖೆ ಕಾರ್ಯದರ್ಶಿಯವರಿಗೆ ವರದಿ ಸಲ್ಲಿಸಬೇಕು.</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>