<p><strong>ಬಾಗಲಕೋಟೆ</strong>: ‘ವಿಧಾನ ಪರಿಷತ್ಗೆ ನಾಲ್ವರು ಸದಸ್ಯರ ನಾಮಕರಣ ಸೇರಿದಂತೆ ಪಕ್ಷದ ವಿವಿಧ ವಿಚಾರಗಳನ್ನು ಪಕ್ಷದ ಮುಖಂಡರೊಂದಿಗೆ ಚರ್ಚೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.</p><p>ಜಿಲ್ಲೆಯ ಜಮಖಂಡಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ನಡೆಯಲಿರುವ ಕರ್ನಾಟಕ ಭವನ ಉದ್ಘಾಟನೆಯಲ್ಲೂ ಭಾಗವಹಿಸಲಿದ್ದೇನೆ. ಆ ನಂತರ ಕೇಂದ್ರ ಸಚಿವ ರಾಜನಾಥ ಸಿಂಗ್ ಸೇರಿದಂತೆ ಬೇರೆ, ಬೇರೆ ಸಚಿವರನ್ನೂ ಭೇಟಿ ಮಾಡಲಿದ್ದೇನೆ ಎಂದರು.</p><p>ಸಂಪುಟ ಪುನರ್ ರಚನೆ ಮುಖ್ಯಮಂತ್ರಿಗೆ ಬಿಟ್ಟ ವಿಚಾರ. ಆ ವಿಷಯದಲ್ಲಿ ಅವರ ನಿರ್ಧಾರವೇ ಅಂತಿಮ ಎಂದು ಹೇಳಿದರು.</p><p>ಹಾಲಿನ ದರ ಏರಿಕೆ ಕುರಿತ ಪ್ರಶ್ನೆಗೆ, ರೈತರು ಬದುಕಬೇಕೋ, ಬೇಡವೋ. ರೈತರ ಹಿತದೃಷ್ಟಿಯಿಂದ ಬೆಲೆ ಏರಿಕೆ ಮಾಡಲಾಗಿದೆ. ಐದು ಗ್ಯಾರಂಟಿಗಳನ್ನು ನೀಡಲಾಗಿದೆ. ಬೆಲೆ ಏರಿಕೆಯಿಂದ ತೊಂದರೆಯಾಗಬಾರದು ಎಂದೇ ಐದು ಗ್ಯಾರಂಟಿಗಳನ್ನು ನೀಡಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ‘ವಿಧಾನ ಪರಿಷತ್ಗೆ ನಾಲ್ವರು ಸದಸ್ಯರ ನಾಮಕರಣ ಸೇರಿದಂತೆ ಪಕ್ಷದ ವಿವಿಧ ವಿಚಾರಗಳನ್ನು ಪಕ್ಷದ ಮುಖಂಡರೊಂದಿಗೆ ಚರ್ಚೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.</p><p>ಜಿಲ್ಲೆಯ ಜಮಖಂಡಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ನಡೆಯಲಿರುವ ಕರ್ನಾಟಕ ಭವನ ಉದ್ಘಾಟನೆಯಲ್ಲೂ ಭಾಗವಹಿಸಲಿದ್ದೇನೆ. ಆ ನಂತರ ಕೇಂದ್ರ ಸಚಿವ ರಾಜನಾಥ ಸಿಂಗ್ ಸೇರಿದಂತೆ ಬೇರೆ, ಬೇರೆ ಸಚಿವರನ್ನೂ ಭೇಟಿ ಮಾಡಲಿದ್ದೇನೆ ಎಂದರು.</p><p>ಸಂಪುಟ ಪುನರ್ ರಚನೆ ಮುಖ್ಯಮಂತ್ರಿಗೆ ಬಿಟ್ಟ ವಿಚಾರ. ಆ ವಿಷಯದಲ್ಲಿ ಅವರ ನಿರ್ಧಾರವೇ ಅಂತಿಮ ಎಂದು ಹೇಳಿದರು.</p><p>ಹಾಲಿನ ದರ ಏರಿಕೆ ಕುರಿತ ಪ್ರಶ್ನೆಗೆ, ರೈತರು ಬದುಕಬೇಕೋ, ಬೇಡವೋ. ರೈತರ ಹಿತದೃಷ್ಟಿಯಿಂದ ಬೆಲೆ ಏರಿಕೆ ಮಾಡಲಾಗಿದೆ. ಐದು ಗ್ಯಾರಂಟಿಗಳನ್ನು ನೀಡಲಾಗಿದೆ. ಬೆಲೆ ಏರಿಕೆಯಿಂದ ತೊಂದರೆಯಾಗಬಾರದು ಎಂದೇ ಐದು ಗ್ಯಾರಂಟಿಗಳನ್ನು ನೀಡಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>