ಸಿದ್ದರಾಮಯ್ಯ ಅವರು ಈಚೆಗೆ ಆರ್ಎಸ್ಎಸ್ ಅನ್ನು ತಾಲಿಬಾನ್ಗೆ ಹೋಲಿಸಿ ಟೀಕಿಸಿದ್ದರು. ಅದಕ್ಕೆ ಕೆ.ಜಿ.ಬೋಪಯ್ಯ ತಿರುಗೇಟು ನೀಡಿದ್ದು ‘ಟೀಕೆಗಳು ಗಂಭೀರತೆಯಿಂದ ಕೂಡಿರಬೇಕು. ಆದರೆ, ಮಾಜಿ ಮುಖ್ಯಮಂತ್ರಿಯಾಗಿ ಬಾಲಿಶ ಹೇಳಿಕೆ ನೀಡುತ್ತಿದ್ದಾರೆ. ಆರ್ಎಸ್ಎಸ್ ಬಗ್ಗೆ ಹಗುರವಾಗಿ ಟೀಕಿಸಿರುವುದು ಖಂಡನೀಯ’ ಎಂದು ಹೇಳಿದರು.