<p><strong>ಚಿತ್ರದುರ್ಗ:</strong> ಚನ್ನಗಿರಿ ತಾಲ್ಲೂಕಿನ ಸೂಳೆಕೆರೆಯ (ಶಾಂತಿಸಾಗರ) ಹೂಳೆತ್ತುವ ಹಾಗೂ ಒತ್ತುವರಿ ತೆರವುಗೊಳಿಸುವ ಅಭಿಯಾನಕ್ಕೆ ಚಿತ್ರನಟ ಕಿಶೋರ್ ಹಾಗೂ ನಟಿ ರೂಪಾ ಅಯ್ಯರ್ ಕೈಜೋಡಿಸಿದ್ದಾರೆ.</p>.<p>ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆ ತರಳಬಾಳು ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮಿಜಿ ನಡೆಸುವ ಸದ್ಧರ್ಮ ನ್ಯಾಯಪೀಠಕ್ಕೆ ಸೋಮವಾರ ಧಾವಿಸಿ ಅಭಿಯಾನದ ಸ್ವರೂಪದ ಕುರಿತು ಸ್ವಾಮೀಜಿಯ ಗಮನ ಸೆಳೆದರು.</p>.<p>'ಏಷ್ಯಾದ ಎರಡನೇ ಅತಿದೊಡ್ಡ ಕೆರೆಯಲ್ಲಿ ಹೂಳು ತುಂಬಿದೆ. ಕೆರೆಯನ್ನು ಒತ್ತುವರಿ ಮಾಡಿಕೊಂಡು ಮೂಲ ಸ್ವರೂಪಕ್ಕೆ ಧಕ್ಕೆಯುಂಟು ಮಾಡಲಾಗಿದೆ. ಕೆರೆ ಸಂರಕ್ಷಣೆ ಮಾಡುವ ತುರ್ತು ಅಗತ್ಯವಿದೆ' ಎಂದು ನಟ ಕಿಶೋರ್ ಸುದ್ದಿಗಾರರಿಗೆ ತಿಳಿಸಿದರು.</p>.<p>'ಇದೊಂದು ಒಳ್ಳೆ ಕಾರ್ಯ. ನೀರು ತೀರಾ ಅತ್ಯಗತ್ಯ. ಕೆರೆ ಸಂರಕ್ಷಣೆಗೆ ಖಡ್ಗ ಎಂಬ ಸಂಸ್ಥೆ ಮುಂದಾಗಿದೆ. ಯುವಕರ ತಂಡದೊಂದಿಗೆ ನಾವೂ ಇದ್ದೇವೆ' ಎಂದು ನಟಿ ರೂಪ ಅಯ್ಯರ್ ತಿಳಿಸಿದರು.</p>.<p>'ಕೆರೆ ಹೂಳು ತೆಗೆಯುವ ಹಾಗೂ ಒತ್ತುವರಿ ತೆರವುಗೊಳಿಸುವ ಕಾರ್ಯಕ್ಕೆ ಸಹಕಾರ ನೀಡುತ್ತೇವೆ. ಇದರಲ್ಲಿ ರಾಜಕೀಯ ಹಸ್ತಕ್ಷೇಪ ಆಗಬಾರದು. ಪಕ್ಷಾತೀತವಾಗಿ ಕೆಲಸ ಮಾಡಿ' ಎಂದು ಸ್ವಾಮೀಜಿ ಹರಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ಚನ್ನಗಿರಿ ತಾಲ್ಲೂಕಿನ ಸೂಳೆಕೆರೆಯ (ಶಾಂತಿಸಾಗರ) ಹೂಳೆತ್ತುವ ಹಾಗೂ ಒತ್ತುವರಿ ತೆರವುಗೊಳಿಸುವ ಅಭಿಯಾನಕ್ಕೆ ಚಿತ್ರನಟ ಕಿಶೋರ್ ಹಾಗೂ ನಟಿ ರೂಪಾ ಅಯ್ಯರ್ ಕೈಜೋಡಿಸಿದ್ದಾರೆ.</p>.<p>ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆ ತರಳಬಾಳು ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮಿಜಿ ನಡೆಸುವ ಸದ್ಧರ್ಮ ನ್ಯಾಯಪೀಠಕ್ಕೆ ಸೋಮವಾರ ಧಾವಿಸಿ ಅಭಿಯಾನದ ಸ್ವರೂಪದ ಕುರಿತು ಸ್ವಾಮೀಜಿಯ ಗಮನ ಸೆಳೆದರು.</p>.<p>'ಏಷ್ಯಾದ ಎರಡನೇ ಅತಿದೊಡ್ಡ ಕೆರೆಯಲ್ಲಿ ಹೂಳು ತುಂಬಿದೆ. ಕೆರೆಯನ್ನು ಒತ್ತುವರಿ ಮಾಡಿಕೊಂಡು ಮೂಲ ಸ್ವರೂಪಕ್ಕೆ ಧಕ್ಕೆಯುಂಟು ಮಾಡಲಾಗಿದೆ. ಕೆರೆ ಸಂರಕ್ಷಣೆ ಮಾಡುವ ತುರ್ತು ಅಗತ್ಯವಿದೆ' ಎಂದು ನಟ ಕಿಶೋರ್ ಸುದ್ದಿಗಾರರಿಗೆ ತಿಳಿಸಿದರು.</p>.<p>'ಇದೊಂದು ಒಳ್ಳೆ ಕಾರ್ಯ. ನೀರು ತೀರಾ ಅತ್ಯಗತ್ಯ. ಕೆರೆ ಸಂರಕ್ಷಣೆಗೆ ಖಡ್ಗ ಎಂಬ ಸಂಸ್ಥೆ ಮುಂದಾಗಿದೆ. ಯುವಕರ ತಂಡದೊಂದಿಗೆ ನಾವೂ ಇದ್ದೇವೆ' ಎಂದು ನಟಿ ರೂಪ ಅಯ್ಯರ್ ತಿಳಿಸಿದರು.</p>.<p>'ಕೆರೆ ಹೂಳು ತೆಗೆಯುವ ಹಾಗೂ ಒತ್ತುವರಿ ತೆರವುಗೊಳಿಸುವ ಕಾರ್ಯಕ್ಕೆ ಸಹಕಾರ ನೀಡುತ್ತೇವೆ. ಇದರಲ್ಲಿ ರಾಜಕೀಯ ಹಸ್ತಕ್ಷೇಪ ಆಗಬಾರದು. ಪಕ್ಷಾತೀತವಾಗಿ ಕೆಲಸ ಮಾಡಿ' ಎಂದು ಸ್ವಾಮೀಜಿ ಹರಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>