ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಮಾರಸ್ವಾಮಿಗೆ ಜೆಡಿಎಸ್‌ ಪಕ್ಷದ ಹೊಣೆ: ಎಚ್‌.ಡಿ.ದೇವೇಗೌಡ

Published 19 ಅಕ್ಟೋಬರ್ 2023, 10:10 IST
Last Updated 19 ಅಕ್ಟೋಬರ್ 2023, 10:19 IST
ಅಕ್ಷರ ಗಾತ್ರ

ಬೆಂಗಳೂರು: ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಒಳಗೊಂಡ ಸಮಿತಿ ಸಂಪೂರ್ಣವಾಗಿ ವಿಸರ್ಜಿಸಲಾಗಿದೆ. ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಹಂಗಾಮಿ ಜವಾಬ್ದಾರಿ ನೀಡಲಾಗಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಹೇಳಿದರು.

ಜೆಪಿ ಭವನದಲ್ಲಿ ಗುರುವಾರ ನಡೆದ ಉನ್ನತ ನಾಯಕರ ಸಭೆಯ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಪಕ್ಷದ ಉನ್ನತ ನಾಯಕರ ಸಭೆಯಲ್ಲಿ ಜೆಡಿಎಸ್‌ ರಾಜ್ಯ ಘಟಕ ವಿಸರ್ಜಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಕುಮಾರಸ್ವಾಮಿ ಅವರ ರಾಜಕೀಯ ನಡೆಯನ್ನು ರಾಷ್ಟ್ರೀಯ ನಾಯಕರು ಗಮನಿಸಿದ್ದಾರೆ. ಪಕ್ಷದ ಜವಾಬ್ದಾರಿ ಅವರಿಗೆ ನೀಡಿದರೆ ಅನುಕೂಲವಾಗುತ್ತದೆ ಎಂಬ ನಿರ್ಧಾರಕ್ಕೆ ಬಂದಿದ್ದೇವೆ. ಅವರ ನಾಯಕತ್ವಕ್ಕೆ ರಾಷ್ಟ್ರಮಟ್ಟದಲ್ಲಿ ಮಾನ್ಯತೆ ಸಿಕ್ಕಿದೆ ಎಂದರು.

ಬಿಜೆಪಿ ಜತೆಗಿನ ಮೈತ್ರಿಯನ್ನು ಇಬ್ರಾಹಿಂ ಸೇರಿದಂತೆ ಪಕ್ಷದ ನಾಯಕರು, ಶಾಸಕರಿಗೆ ಮನವರಿಕೆ ಮಾಡಿಕೊಡಲಾಗಿತ್ತು. ಅಸಮಾಧಾನವನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸಲು ಅವಕಾಶವಿತ್ತು. ಆದರೆ, ಕೆಲವರು ಪಕ್ಷಕ್ಕೆ ಮುಜುಗರವಾಗುವ ನಡೆ ಅನುಸರಿಸಿದರು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT