<p><strong>ಬೆಂಗಳೂರು</strong>: ‘ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರರಾವ್ ಅವರ ಘನಕಾರ್ಯದ ದೃಶ್ಯಾವಳಿಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇಡೀ ಪೊಲೀಸ್ ಇಲಾಖೆಗೆ ಕಳಂಕ ಮೆತ್ತುವ ಕೆಲಸ ಮಾಡಿದ್ದು ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು’ ಎಂದು ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಒತ್ತಾಯಿಸಿದ್ದಾರೆ.</p><p>‘ರಾಮಚಂದ್ರರಾವ್ ಕಚೇರಿಯಲ್ಲಿ ಈ ಕೃತ್ಯ ನಡೆದಾಗ ಅವರ ಹಿಂದೆ ರಾಷ್ಟ್ರಧ್ವಜವೂ ಕಾಣುತ್ತಿದೆ. ಅಧಿಕಾರಿಯ ಈ ಕೃತ್ಯ ರಾಷ್ಟ್ರಧ್ವಜಕ್ಕೂ ಸಂದಿರುವ ಅಗೌರವ ಮತ್ತು ಅಪಚಾರ’ ಎಂದು ಅವರು ತಿಳಿಸಿದ್ದಾರೆ.</p><p>‘ಈ ಹಿಂದೆ ಅಪಾರ ಪ್ರಮಾಣದ ಚಿನ್ನದ ಕಳ್ಳಸಾಗಣೆ ನಡೆದಿದ್ದಾಗ ಈ ಅಧಿಕಾರಿಯನ್ನು ಕಡ್ಡಾಯ ರಜೆಯ ಮೇಲೆ ಕಳಿಸಿ ಸರ್ಕಾರ ಕೈತೊಳೆದುಕೊಂಡಿತ್ತು. ಈಗಲೂ ಅದೇ ರೀತಿ ಕಡ್ಡಾಯ ರಜೆ ಮೇಲೆ ಕಳಿಸಿ ಕೈತೊಳೆದುಕೊಳ್ಳುವುದು ಸರ್ಕಾರಕ್ಕೆ ಭೂಷಣವಲ್ಲ. ಸಮವಸ್ತ್ರದಲ್ಲಿಯೇ ತನ್ನ ಕಚೇರಿಯಲ್ಲಿಯೇ ಈ ಹಿರಿಯ ಅಧಿಕಾರಿ ಮಾಡಿರುವ ಕೃತ್ಯ ಪೊಲೀಸ್ ಇಲಾಖೆಯನ್ನೇ ಸಂಶಯದಿಂದ ಮತ್ತು ಅನುಮಾನದಿಂದ ನೋಡುವಂತೆ ಮಾಡಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರರಾವ್ ಅವರ ಘನಕಾರ್ಯದ ದೃಶ್ಯಾವಳಿಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇಡೀ ಪೊಲೀಸ್ ಇಲಾಖೆಗೆ ಕಳಂಕ ಮೆತ್ತುವ ಕೆಲಸ ಮಾಡಿದ್ದು ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು’ ಎಂದು ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಒತ್ತಾಯಿಸಿದ್ದಾರೆ.</p><p>‘ರಾಮಚಂದ್ರರಾವ್ ಕಚೇರಿಯಲ್ಲಿ ಈ ಕೃತ್ಯ ನಡೆದಾಗ ಅವರ ಹಿಂದೆ ರಾಷ್ಟ್ರಧ್ವಜವೂ ಕಾಣುತ್ತಿದೆ. ಅಧಿಕಾರಿಯ ಈ ಕೃತ್ಯ ರಾಷ್ಟ್ರಧ್ವಜಕ್ಕೂ ಸಂದಿರುವ ಅಗೌರವ ಮತ್ತು ಅಪಚಾರ’ ಎಂದು ಅವರು ತಿಳಿಸಿದ್ದಾರೆ.</p><p>‘ಈ ಹಿಂದೆ ಅಪಾರ ಪ್ರಮಾಣದ ಚಿನ್ನದ ಕಳ್ಳಸಾಗಣೆ ನಡೆದಿದ್ದಾಗ ಈ ಅಧಿಕಾರಿಯನ್ನು ಕಡ್ಡಾಯ ರಜೆಯ ಮೇಲೆ ಕಳಿಸಿ ಸರ್ಕಾರ ಕೈತೊಳೆದುಕೊಂಡಿತ್ತು. ಈಗಲೂ ಅದೇ ರೀತಿ ಕಡ್ಡಾಯ ರಜೆ ಮೇಲೆ ಕಳಿಸಿ ಕೈತೊಳೆದುಕೊಳ್ಳುವುದು ಸರ್ಕಾರಕ್ಕೆ ಭೂಷಣವಲ್ಲ. ಸಮವಸ್ತ್ರದಲ್ಲಿಯೇ ತನ್ನ ಕಚೇರಿಯಲ್ಲಿಯೇ ಈ ಹಿರಿಯ ಅಧಿಕಾರಿ ಮಾಡಿರುವ ಕೃತ್ಯ ಪೊಲೀಸ್ ಇಲಾಖೆಯನ್ನೇ ಸಂಶಯದಿಂದ ಮತ್ತು ಅನುಮಾನದಿಂದ ನೋಡುವಂತೆ ಮಾಡಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>