ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣ ಬಿಡುಗಡೆ ಮಾಡದಿದ್ದರೆ ಧರಣಿ: ಕೋಟ ಶ್ರೀನಿವಾಸ ಪೂಜಾರಿ

Published 6 ನವೆಂಬರ್ 2023, 16:17 IST
Last Updated 6 ನವೆಂಬರ್ 2023, 16:17 IST
ಅಕ್ಷರ ಗಾತ್ರ

ಬೆಂಗಳೂರು: ಹಿಂದುಳಿದ ವರ್ಗಗಳ ಸಮುದಾಯ ಭವನ ಮತ್ತು ವಿದ್ಯಾರ್ಥಿ ನೆಲೆಗಳ ಅಭಿವೃದ್ಧಿಗೆ ಒಂದು ವಾರದಲ್ಲಿ ಹಣ ಬಿಡುಗಡೆ ಮಾಡದಿದ್ದರೆ ಇಲಾಖೆ ವಿರುದ್ಧ ಧರಣಿ ನಡೆಸುವುದಾಗಿ ಬಿಜೆಪಿಯ ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದ್ದಾರೆ.

ಆರ್ಥಿಕ ಇಲಾಖೆ ಮೂರು ತಿಂಗಳ ಹಿಂದೆಯೇ ಕಡತ ಸಂಖ್ಯೆ 660ರ ಮೂಲಕ ಅನುಮೋದನೆ ನೀಡಿದ್ದರೂ ಹಿಂದುಳಿ ವರ್ಗಗಳ ಇಲಾಖೆ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡದೇ ಸತಾಯಿಸುತ್ತಿದೆ. ಕೂಡಲೇ ಹಣ ಬಿಡುಗಡೆ ಮಾಡದಿದ್ದರೆ ಇಲಾಖೆ ಮುಂದೆ ಧರಣಿ ನಡೆಸುವುದೊಂದೇ ದಾರಿ ಎಂದು ‘ಎಕ್ಸ್‌’ ಮೂಲಕ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT