<p><strong>ನವದೆಹಲಿ:</strong> ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದ ಬಿಜೆಪಿ ನಿಯೋಗವು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸೋಮವಾರ ರಾತ್ರಿ ಇಲ್ಲಿ ಭೇಟಿ ಮಾಡಿ ಧರ್ಮಸ್ಥಳ ಪ್ರಕರಣದ ಬಗ್ಗೆ ವರದಿ ಸಲ್ಲಿಸಿತು. </p>.<p>ಶಾ ಅವರೊಂದಿಗೆ ಸುಮಾರು 30 ನಿಮಿಷ ಚರ್ಚೆ ನಡೆಸಿದ ನಿಯೋಗವು, ‘ಧರ್ಮಸ್ಥಳದ ವಿರುದ್ಧದ ಪಿತೂರಿಯಲ್ಲಿ ಹೊರ ರಾಜ್ಯದ ಕೆಲವರ ಕೈವಾಡ ಇದೆ. ಈ ಬಗ್ಗೆ ಉನ್ನತ ತನಿಖೆ ನಡೆಸುವ ಅಗತ್ಯ ಇದೆ’ ಎಂದು ಹೇಳಿತು. </p>.<p>‘ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆದಿದೆ. ಆದರೆ, ಅದರ ಹಿಂದಿರುವ ರೂವಾರಿಗಳನ್ನು ಹುಡುಕುವ ಕೆಲಸವನ್ನು ಕಾಂಗ್ರೆಸ್ ಮಾಡಿಲ್ಲ. ಈ ಘಟನೆ ಬಗ್ಗೆ ವಿವರವಾದ ಮಾಹಿತಿಯನ್ನು ಶಾ ಅವರಿಗೆ ನೀಡಿದ್ದೇವೆ. ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿಯನ್ನು ಸಚಿವರ ಗಮನಕ್ಕೆ ತಂದಿದ್ದೇವೆ‘ ಎಂದು ವಿಜಯೇಂದ್ರ ತಿಳಿಸಿದರು. </p>.<p>ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ, ಕೊಪ್ಪಳದಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ, ಮದ್ದೂರು ಘಟನೆ ಸೇರಿದಂತೆ ಹಲವು ಘಟನೆಗಳು ನಡೆದಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ದಿನೇ ದಿನೇ ಕುಸಿಯುತ್ತಿದೆ. ಈ ಬಗ್ಗೆ ಸವಿಸ್ತಾರವಾಗಿ ಚರ್ಚೆ ಮಾಡಿದ್ದೇವೆ ಎಂದು ಅವರು ತಿಳಿಸಿದರು. </p>.<p>ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ವಿಪಕ್ಷ ನಾಯಕರಾದ ಆರ್. ಅಶೋಕ, ಛಲವಾದಿ ನಾರಾಯಣಸ್ವಾಮಿ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಬ್ರಿಜೇಶ್ ಚೌಟ, ಶಾಸಕರಾದ ಎಸ್.ಆರ್.ವಿಶ್ವನಾಥ್, ಹರೀಶ್ ಪೂಂಜ, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ನಿಯೋಗದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದ ಬಿಜೆಪಿ ನಿಯೋಗವು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸೋಮವಾರ ರಾತ್ರಿ ಇಲ್ಲಿ ಭೇಟಿ ಮಾಡಿ ಧರ್ಮಸ್ಥಳ ಪ್ರಕರಣದ ಬಗ್ಗೆ ವರದಿ ಸಲ್ಲಿಸಿತು. </p>.<p>ಶಾ ಅವರೊಂದಿಗೆ ಸುಮಾರು 30 ನಿಮಿಷ ಚರ್ಚೆ ನಡೆಸಿದ ನಿಯೋಗವು, ‘ಧರ್ಮಸ್ಥಳದ ವಿರುದ್ಧದ ಪಿತೂರಿಯಲ್ಲಿ ಹೊರ ರಾಜ್ಯದ ಕೆಲವರ ಕೈವಾಡ ಇದೆ. ಈ ಬಗ್ಗೆ ಉನ್ನತ ತನಿಖೆ ನಡೆಸುವ ಅಗತ್ಯ ಇದೆ’ ಎಂದು ಹೇಳಿತು. </p>.<p>‘ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆದಿದೆ. ಆದರೆ, ಅದರ ಹಿಂದಿರುವ ರೂವಾರಿಗಳನ್ನು ಹುಡುಕುವ ಕೆಲಸವನ್ನು ಕಾಂಗ್ರೆಸ್ ಮಾಡಿಲ್ಲ. ಈ ಘಟನೆ ಬಗ್ಗೆ ವಿವರವಾದ ಮಾಹಿತಿಯನ್ನು ಶಾ ಅವರಿಗೆ ನೀಡಿದ್ದೇವೆ. ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿಯನ್ನು ಸಚಿವರ ಗಮನಕ್ಕೆ ತಂದಿದ್ದೇವೆ‘ ಎಂದು ವಿಜಯೇಂದ್ರ ತಿಳಿಸಿದರು. </p>.<p>ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ, ಕೊಪ್ಪಳದಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ, ಮದ್ದೂರು ಘಟನೆ ಸೇರಿದಂತೆ ಹಲವು ಘಟನೆಗಳು ನಡೆದಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ದಿನೇ ದಿನೇ ಕುಸಿಯುತ್ತಿದೆ. ಈ ಬಗ್ಗೆ ಸವಿಸ್ತಾರವಾಗಿ ಚರ್ಚೆ ಮಾಡಿದ್ದೇವೆ ಎಂದು ಅವರು ತಿಳಿಸಿದರು. </p>.<p>ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ವಿಪಕ್ಷ ನಾಯಕರಾದ ಆರ್. ಅಶೋಕ, ಛಲವಾದಿ ನಾರಾಯಣಸ್ವಾಮಿ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಬ್ರಿಜೇಶ್ ಚೌಟ, ಶಾಸಕರಾದ ಎಸ್.ಆರ್.ವಿಶ್ವನಾಥ್, ಹರೀಶ್ ಪೂಂಜ, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ನಿಯೋಗದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>