<p><strong>ಮಂಗಳೂರು:</strong> ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹೂತು ಹಾಕಲಾಗಿದೆ ಎನ್ನಲಾದ ಮೃತದೇಹ ಪತ್ತೆಗೆ ಜಾಗ ಅಗೆಯುವ ಕಾರ್ಯಕ್ಕೆ ನೀರಿನ ಒರತೆ ಅಡ್ಡಿಯಾಗಿದೆ.</p><p>ಸಾಕ್ಷಿ ದೂರುದಾರ ತೋರಿಸಿದ ಮೊದಲ ಜಾಗ, ನೇತ್ರಾವತಿ ನದಿಯ ಪಕ್ಕದಲ್ಲೇ ಇದೆ. ನದಿಗೂ ಈ ಜಾಗಕ್ಕೂ 10 ಮೀಟರ್ ಅಂತರವೂ ಇಲ್ಲ. ಇಲ್ಲಿ ಅಗೆದಂತೆ ನೀರು ಒಸರುತ್ತಿದೆ. ಹಾಗಾಗಿ ಜೆಸಿಬಿಯನ್ನು ಸ್ಥಳಕ್ಕೆ ತರಿಸಿ ಅಗೆಯುವ ಕಾರ್ಯ ಮುಂದುವರಿಸಲು ಎಸ್ಐಟಿ ಅಧಿಕಾರಿಗಳು ನಿರ್ಧರಿಸಿದ್ದಾರೆ.</p><p>ಸಾಕ್ಷಿ ದೂರುದಾರ ಮೊದಲು ತೋರಿಸಿದ ಜಾಗದಲ್ಲಿ ಅಗೆಯುವ ಕಾರ್ಯವನ್ನು ಮಧ್ಯಾಹ್ನ 12 ಗಂಟೆ ಸುಮಾರಿಗೆ ಆರಂಭಿಸಲಾಗಿತ್ತು.</p><p>'ಸುಮಾರು 3 ಅಡಿ ಆಳದವರೆಗೆ ಅಗೆಯಲಾಗಿದೆ. ಮೃತದೇಹದ ಕುರುಹುಗಳು ಇದುವರೆಗೂ ಸಿಕ್ಕಿಲ್ಲ. ಮಣ್ಣು ಅಗೆದಂತೆ ನೀರು ಒಸರುತ್ತಿದೆ. ಹಾಗಾಗಿ ಜೆಸಿಬಿ ತರಿಸಿ ಅಗೆಯುವ ಕಾರ್ಯ ಮುಂದುವರಿಸಲಾಗುತ್ತದೆ' ಎಂದು ಎಸ್ಐಟಿ ಮೂಲಗಳು ತಿಳಿಸಿವೆ.</p><p>'ಸಾಕ್ಷಿ ದೂರುದಾರನಿಗೆ ತೃಪ್ತಿಯಾಗುವವರೆಗೆ ಹಾಗೂ ನಮಗೂ ಇನ್ನು ಅಗೆಯುವ ಅಗತ್ಯವಿಲ್ಲ ಎಂದು ನಮಗೂ ಮನವರಿಕೆ ಆಗುವವರೆಗೆ ಅಗೆಯುವ ಕಾರ್ಯ ಮುಂದುವರಿಸಲಿದ್ದೇವೆ. ಸದ್ಯಕ್ಕೆ ಒಂದೇ ಜಾಗವನ್ನು ಅಗೆದಿದ್ದೇವೆ. ಇದು ಪೂರ್ಣಗೊಂಡ ಬಳಿಕವೇ ಬೇರೆ ಜಾಗದಲ್ಲಿ ಅಗೆಯುವ ಕಾರ್ಯ ಆರಂಭಿಸಲಿದ್ದೇವೆ' ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಎಸ್ಐಟಿಯ ಡಿಐಜಿ ಎಂ.ಎನ್.ಅನುಚೇತ್ ಹಾಗೂ ಪುತ್ತೂರಿನ ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಸ್ಥಳದಲ್ಲಿದ್ದು ಮಾರ್ಗದರ್ಶನ ಮಾಡುತ್ತಿದ್ದಾರೆ.</p>.Video | ಧರ್ಮಸ್ಥಳ ಪ್ರಕರಣ: ಭದ್ರತೆ ನಡುವೆ ಅಗೆಯುವ ಕಾರ್ಯ ಶುರು .VIDEO | ಧರ್ಮಸ್ಥಳ: ಮೃತದೇಹಗಳ ಹೂತಿಟ್ಟ ಜಾಗವನ್ನು ತೋರಿಸಿದ ಸಾಕ್ಷಿ ದೂರುದಾರ.ಧರ್ಮಸ್ಥಳ: ಮೃತದೇಹಗಳ ಹೂತಿಟ್ಟ 13 ಜಾಗ ತೋರಿಸಿದ ದೂರುದಾರ.ಧರ್ಮಸ್ಥಳ ಪ್ರಕರಣ: ಮೃತದೇಹಗಳಿಗೆ ಉತ್ಖನನ ಆರಂಭ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹೂತು ಹಾಕಲಾಗಿದೆ ಎನ್ನಲಾದ ಮೃತದೇಹ ಪತ್ತೆಗೆ ಜಾಗ ಅಗೆಯುವ ಕಾರ್ಯಕ್ಕೆ ನೀರಿನ ಒರತೆ ಅಡ್ಡಿಯಾಗಿದೆ.</p><p>ಸಾಕ್ಷಿ ದೂರುದಾರ ತೋರಿಸಿದ ಮೊದಲ ಜಾಗ, ನೇತ್ರಾವತಿ ನದಿಯ ಪಕ್ಕದಲ್ಲೇ ಇದೆ. ನದಿಗೂ ಈ ಜಾಗಕ್ಕೂ 10 ಮೀಟರ್ ಅಂತರವೂ ಇಲ್ಲ. ಇಲ್ಲಿ ಅಗೆದಂತೆ ನೀರು ಒಸರುತ್ತಿದೆ. ಹಾಗಾಗಿ ಜೆಸಿಬಿಯನ್ನು ಸ್ಥಳಕ್ಕೆ ತರಿಸಿ ಅಗೆಯುವ ಕಾರ್ಯ ಮುಂದುವರಿಸಲು ಎಸ್ಐಟಿ ಅಧಿಕಾರಿಗಳು ನಿರ್ಧರಿಸಿದ್ದಾರೆ.</p><p>ಸಾಕ್ಷಿ ದೂರುದಾರ ಮೊದಲು ತೋರಿಸಿದ ಜಾಗದಲ್ಲಿ ಅಗೆಯುವ ಕಾರ್ಯವನ್ನು ಮಧ್ಯಾಹ್ನ 12 ಗಂಟೆ ಸುಮಾರಿಗೆ ಆರಂಭಿಸಲಾಗಿತ್ತು.</p><p>'ಸುಮಾರು 3 ಅಡಿ ಆಳದವರೆಗೆ ಅಗೆಯಲಾಗಿದೆ. ಮೃತದೇಹದ ಕುರುಹುಗಳು ಇದುವರೆಗೂ ಸಿಕ್ಕಿಲ್ಲ. ಮಣ್ಣು ಅಗೆದಂತೆ ನೀರು ಒಸರುತ್ತಿದೆ. ಹಾಗಾಗಿ ಜೆಸಿಬಿ ತರಿಸಿ ಅಗೆಯುವ ಕಾರ್ಯ ಮುಂದುವರಿಸಲಾಗುತ್ತದೆ' ಎಂದು ಎಸ್ಐಟಿ ಮೂಲಗಳು ತಿಳಿಸಿವೆ.</p><p>'ಸಾಕ್ಷಿ ದೂರುದಾರನಿಗೆ ತೃಪ್ತಿಯಾಗುವವರೆಗೆ ಹಾಗೂ ನಮಗೂ ಇನ್ನು ಅಗೆಯುವ ಅಗತ್ಯವಿಲ್ಲ ಎಂದು ನಮಗೂ ಮನವರಿಕೆ ಆಗುವವರೆಗೆ ಅಗೆಯುವ ಕಾರ್ಯ ಮುಂದುವರಿಸಲಿದ್ದೇವೆ. ಸದ್ಯಕ್ಕೆ ಒಂದೇ ಜಾಗವನ್ನು ಅಗೆದಿದ್ದೇವೆ. ಇದು ಪೂರ್ಣಗೊಂಡ ಬಳಿಕವೇ ಬೇರೆ ಜಾಗದಲ್ಲಿ ಅಗೆಯುವ ಕಾರ್ಯ ಆರಂಭಿಸಲಿದ್ದೇವೆ' ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಎಸ್ಐಟಿಯ ಡಿಐಜಿ ಎಂ.ಎನ್.ಅನುಚೇತ್ ಹಾಗೂ ಪುತ್ತೂರಿನ ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಸ್ಥಳದಲ್ಲಿದ್ದು ಮಾರ್ಗದರ್ಶನ ಮಾಡುತ್ತಿದ್ದಾರೆ.</p>.Video | ಧರ್ಮಸ್ಥಳ ಪ್ರಕರಣ: ಭದ್ರತೆ ನಡುವೆ ಅಗೆಯುವ ಕಾರ್ಯ ಶುರು .VIDEO | ಧರ್ಮಸ್ಥಳ: ಮೃತದೇಹಗಳ ಹೂತಿಟ್ಟ ಜಾಗವನ್ನು ತೋರಿಸಿದ ಸಾಕ್ಷಿ ದೂರುದಾರ.ಧರ್ಮಸ್ಥಳ: ಮೃತದೇಹಗಳ ಹೂತಿಟ್ಟ 13 ಜಾಗ ತೋರಿಸಿದ ದೂರುದಾರ.ಧರ್ಮಸ್ಥಳ ಪ್ರಕರಣ: ಮೃತದೇಹಗಳಿಗೆ ಉತ್ಖನನ ಆರಂಭ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>