<p><strong>ಬೆಂಗಳೂರು</strong>: ‘ಧರ್ಮಸ್ಥಳದ ಸುತ್ತಮುತ್ತ ನಡೆದಿವೆ ಎನ್ನಲಾದ ಅಸಹಜ ಸಾವುಗಳ ಕುರಿತಂತೆ ನಡೆಯುತ್ತಿರುವ ತನಿಖೆ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ನಡೆಯಬೇಕು’ ಎಂದು ಕೋರಿ ಹೈಕೋರ್ಟ್ ವಕೀಲರಾದ ಟಿ.ಶ್ರೀರಾಮ್ ಟಿ.ನಾಯಕ್, ಬಿ.ಎಸ್.ಗಣೇಶ್ ಪ್ರಸಾದ್, ವಿ.ಗಣೇಶ ಮತ್ತು ಕೆ.ಎ.ಪೊನ್ನಣ್ಣ ಮನವಿ ಮಾಡಿದ್ದಾರೆ.</p>.<p>ಈ ಸಂಬಂಧ ಸೋಮವಾರ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ಐದು ಪುಟಗಳ ಪತ್ರ ಸಲ್ಲಿಸಿರುವ ಅವರು, ‘ಪ್ರಕರಣದ ತನಿಖೆ ನಿಧಾನಗತಿಯಲ್ಲಿ ಸಾಗುತ್ತಿದೆ. ಹಾಗಾಗಿ, ಹೈಕೋರ್ಟ್ ತಕ್ಷಣವೇ ಮಧ್ಯಪ್ರವೇಶಿಸಬೇಕಾದ ಅವಶ್ಯಕತೆ ಇದೆ’ ಎಂದು ಕೋರಿದ್ದಾರೆ.</p>.<p>‘ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜೂನ್ 3ರಂದೇ ದೂರು ದಾಖಲಾಗಿದೆ. ಇಂದಿಗೆ 17 ದಿನಗಳೇ ಕಳೆದಿದ್ದರೂ ಈತನಕ ಆರೋಪಿಗಳ ಬಂಧನಕ್ಕೆ ಕ್ರಮ ಜರುಗಿಲ್ಲ. ಇದು ಆಘಾತಕಾರಿ ಸಂಗತಿ’ ಎಂದು ಪತ್ರದಲ್ಲಿ ವಿವರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಧರ್ಮಸ್ಥಳದ ಸುತ್ತಮುತ್ತ ನಡೆದಿವೆ ಎನ್ನಲಾದ ಅಸಹಜ ಸಾವುಗಳ ಕುರಿತಂತೆ ನಡೆಯುತ್ತಿರುವ ತನಿಖೆ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ನಡೆಯಬೇಕು’ ಎಂದು ಕೋರಿ ಹೈಕೋರ್ಟ್ ವಕೀಲರಾದ ಟಿ.ಶ್ರೀರಾಮ್ ಟಿ.ನಾಯಕ್, ಬಿ.ಎಸ್.ಗಣೇಶ್ ಪ್ರಸಾದ್, ವಿ.ಗಣೇಶ ಮತ್ತು ಕೆ.ಎ.ಪೊನ್ನಣ್ಣ ಮನವಿ ಮಾಡಿದ್ದಾರೆ.</p>.<p>ಈ ಸಂಬಂಧ ಸೋಮವಾರ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ಐದು ಪುಟಗಳ ಪತ್ರ ಸಲ್ಲಿಸಿರುವ ಅವರು, ‘ಪ್ರಕರಣದ ತನಿಖೆ ನಿಧಾನಗತಿಯಲ್ಲಿ ಸಾಗುತ್ತಿದೆ. ಹಾಗಾಗಿ, ಹೈಕೋರ್ಟ್ ತಕ್ಷಣವೇ ಮಧ್ಯಪ್ರವೇಶಿಸಬೇಕಾದ ಅವಶ್ಯಕತೆ ಇದೆ’ ಎಂದು ಕೋರಿದ್ದಾರೆ.</p>.<p>‘ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜೂನ್ 3ರಂದೇ ದೂರು ದಾಖಲಾಗಿದೆ. ಇಂದಿಗೆ 17 ದಿನಗಳೇ ಕಳೆದಿದ್ದರೂ ಈತನಕ ಆರೋಪಿಗಳ ಬಂಧನಕ್ಕೆ ಕ್ರಮ ಜರುಗಿಲ್ಲ. ಇದು ಆಘಾತಕಾರಿ ಸಂಗತಿ’ ಎಂದು ಪತ್ರದಲ್ಲಿ ವಿವರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>