<p><strong>ಬೆಂಗಳೂರು:</strong> ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಮಹಿಳೆಯರ ಮೇಲಿನ ಎಲ್ಲ ದೌರ್ಜನ್ಯ ಪ್ರಕರಣಗಳನ್ನೂ ವಿಶೇಷ ತನಿಖಾ ತಂಡದ(ಎಸ್ಐಟಿ) ವ್ಯಾಪ್ತಿಗೆ ತರಬೇಕು. ತಾರ್ಕಿಕ ಅಂತ್ಯದವರೆಗೂ ಎಸ್ಐಟಿ ತನಿಖೆ ಮುಂದುವರೆಸಬೇಕು ಎಂದು ಮಹಿಳಾ ಹೋರಾಟಗಾರರು, ಲೇಖಕಿಯರು ಒತ್ತಾಯಿಸಿದರು.</p>.<p>‘ಕೊಂದವರು ಯಾರು ಆಂದೋಲನ’ದ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಮಹಿಳಾ ನಿಯೋಗ, ಧರ್ಮಸ್ಥಳ ಪ್ರಕರಣಗಳಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಸಿಬಿಐ ಕೋರ್ಟ್ ಹೇಳಿದೆ. ಈ ಕುರಿತು ಕ್ರಮ ಕೈಗೊಳ್ಳಬೇಕು. ಎಸ್ಐಟಿ ತನಿಖೆಯನ್ನು ಸಮಗ್ರವಾಗಿ ನಡೆಸಬೇಕು. ತಾರ್ಕಿಕ ಅಂತ್ಯದವರೆಗೂ ಸ್ಥಗಿತಗೊಳಿಸಬಾರದು’ ಎಂದು ಮನವಿ ಮಾಡಿತು.</p>.<p>‘ಮಹಿಳೆಯರು ಹಾಗೂ ಸಮಾನಮನಸ್ಕರು ಸೇರಿ ‘ಕೊಂದವರು ಯಾರು ಆಂದೋಲನ’ ರಚಿಸಿದ್ದೇವೆ. ಧರ್ಮಸ್ಥಳದ ದೌರ್ಜನ್ಯ ಪ್ರಕರಣಗಳಲ್ಲಿ ನೊಂದ ಮಹಿಳೆಯರ ಪರವಾಗಿ ಆಂದೋಲನ ಧ್ವನಿ ಎತ್ತುತ್ತಿದೆ. ಸರ್ಕಾರ ನೊಂದವರಿಗೆ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು’ ಎಂದು ಕೋರಿದರು.</p>.<p>ಆಂದೋಲನದ ಪ್ರಮುಖರಾದ ಚಂಪಾವತಿ, ಮಧು ಭೂಷಣ್, ಶಕುನ್, ಮಾಯಾರಾವ್, ಗೌರಮ್ಮ, ಜ್ಯೋತಿ ಅನಂತಸುಬ್ಬರಾವ್, ಮಮತಾ ಯಜಮಾನ್, ಮಲ್ಲಿಗೆ ಸಿರಿಮನೆ, ಗೀತಾ, ಸುಜಾತಾ ನಿಯೋಗದಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಮಹಿಳೆಯರ ಮೇಲಿನ ಎಲ್ಲ ದೌರ್ಜನ್ಯ ಪ್ರಕರಣಗಳನ್ನೂ ವಿಶೇಷ ತನಿಖಾ ತಂಡದ(ಎಸ್ಐಟಿ) ವ್ಯಾಪ್ತಿಗೆ ತರಬೇಕು. ತಾರ್ಕಿಕ ಅಂತ್ಯದವರೆಗೂ ಎಸ್ಐಟಿ ತನಿಖೆ ಮುಂದುವರೆಸಬೇಕು ಎಂದು ಮಹಿಳಾ ಹೋರಾಟಗಾರರು, ಲೇಖಕಿಯರು ಒತ್ತಾಯಿಸಿದರು.</p>.<p>‘ಕೊಂದವರು ಯಾರು ಆಂದೋಲನ’ದ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಮಹಿಳಾ ನಿಯೋಗ, ಧರ್ಮಸ್ಥಳ ಪ್ರಕರಣಗಳಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಸಿಬಿಐ ಕೋರ್ಟ್ ಹೇಳಿದೆ. ಈ ಕುರಿತು ಕ್ರಮ ಕೈಗೊಳ್ಳಬೇಕು. ಎಸ್ಐಟಿ ತನಿಖೆಯನ್ನು ಸಮಗ್ರವಾಗಿ ನಡೆಸಬೇಕು. ತಾರ್ಕಿಕ ಅಂತ್ಯದವರೆಗೂ ಸ್ಥಗಿತಗೊಳಿಸಬಾರದು’ ಎಂದು ಮನವಿ ಮಾಡಿತು.</p>.<p>‘ಮಹಿಳೆಯರು ಹಾಗೂ ಸಮಾನಮನಸ್ಕರು ಸೇರಿ ‘ಕೊಂದವರು ಯಾರು ಆಂದೋಲನ’ ರಚಿಸಿದ್ದೇವೆ. ಧರ್ಮಸ್ಥಳದ ದೌರ್ಜನ್ಯ ಪ್ರಕರಣಗಳಲ್ಲಿ ನೊಂದ ಮಹಿಳೆಯರ ಪರವಾಗಿ ಆಂದೋಲನ ಧ್ವನಿ ಎತ್ತುತ್ತಿದೆ. ಸರ್ಕಾರ ನೊಂದವರಿಗೆ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು’ ಎಂದು ಕೋರಿದರು.</p>.<p>ಆಂದೋಲನದ ಪ್ರಮುಖರಾದ ಚಂಪಾವತಿ, ಮಧು ಭೂಷಣ್, ಶಕುನ್, ಮಾಯಾರಾವ್, ಗೌರಮ್ಮ, ಜ್ಯೋತಿ ಅನಂತಸುಬ್ಬರಾವ್, ಮಮತಾ ಯಜಮಾನ್, ಮಲ್ಲಿಗೆ ಸಿರಿಮನೆ, ಗೀತಾ, ಸುಜಾತಾ ನಿಯೋಗದಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>