<p><strong>ಬೆಂಗಳೂರು</strong>: ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ನಡೆಸಬೇಕು ಎಂಬ ಒತ್ತಾಯ ಸೇರಿದಂತೆ ಎಂಟು ನಿರ್ಣಯಗಳನ್ನು ಇಲ್ಲಿ ನಡೆದ ಎಂಟನೇ ಅಖಿಲ ಕರ್ನಾಟಕ ಲೇಖಕಿಯರ ಸಮ್ಮೇಳನದಲ್ಲಿ ಕೈಗೊಳ್ಳಲಾಯಿತು. </p><p>ಕರ್ನಾಟಕ ಲೇಖಕಿಯರ ಸಂಘ ಹಮ್ಮಿಕೊಂಡಿದ್ದ ಸಮ್ಮೇಳನದ ಕಡೆಯ ದಿನವಾದ ಭಾನುವಾರ ಸಂಘದ ಜಿಲ್ಲಾ ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಮ್ಮುಖದಲ್ಲಿ ನಿರ್ಣಯಗಳನ್ನು ಅಂಗೀಕರಿಸಲಾಯಿತು. ಸಂಘದ ಮಂಡ್ಯ ಜಿಲ್ಲಾ ಘಟಕದ ಅಧ್ಯಕ್ಷೆ ಮೀರಾ ಶಿವಲಿಂಗಯ್ಯ ಅವರು ನಿರ್ಣಯ<br>ಗಳನ್ನು ವಾಚಿಸಿದರು.</p><p>‘ಹೆಣ್ಣು ಮಕ್ಕಳ ಅಸಹಜ ಸಾವು ಪ್ರಕರಣಗಳನ್ನು ಮರು ತನಿಖೆ ಮಾಡಬೇಕು. ಸೌಜನ್ಯ ಪ್ರಕರಣ<br>ದಲ್ಲಿ ಸಿಬಿಐ ಪ್ರಕರಣಗಳ ವಿಶೇಷ ನ್ಯಾಯಾಲಯದ ಆದೇಶವನ್ನು ಪಾಲಿಸಬೇಕು. ಅಮಾಯಕ ಹುಡುಗಿಯರ ಸಾವಿಗೆ ಕಾರಣರಾದವರಿಗೆ ಶಿಕ್ಷೆಯಾಗಬೇಕು’ ಎಂದು ಆಗ್ರಹಿಸಿದರು.</p><p>‘ಹನಿಟ್ರ್ಯಾಪ್ ಪ್ರಕರಣಗಳಲ್ಲಿ ಹೆಣ್ಣನ್ನು ಆಟಿಕೆಯಂತೆ ಬಳಸಿಕೊಳ್ಳುವ ಕ್ರಮ ಖಂಡನೀಯ. ಸಾರ್ವಜನಿಕ ಜೀವನದಲ್ಲಿ ಹೆಣ್ಣನ್ನು ಇಲಿ ಹಿಡಿಯುವ ಬೋನಿನಂತೆ ಬಳಸಿಕೊಳ್ಳಲಾಗುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p><p>‘ಸಾರ್ವಜನಿಕವಾಗಿ ಮಾಧ್ಯಮಗಳಲ್ಲಿ ಹಾಗೂ ಸದನದಲ್ಲಿ ಮಹಿಳೆಯರ ಕುರಿತು ಬಳಸುವ ಭಾಷೆ ಮತ್ತು ಧೋರಣೆಯನ್ನು ತೀವ್ರವಾಗಿ ಖಂಡಿಸುತ್ತೇವೆ. ಇದು ಅಸಾಂವಿಧಾನಿಕ ಮತ್ತು ಅನಾಗರಿಕ. ಈ ಬಗ್ಗೆ ಮಾಧ್ಯಮಗಳು ಹಾಗೂ ಜನಪ್ರತಿನಿಧಿಗಳ ಧೋರಣೆ ಬದಲಾಗಬೇಕು’ ಎಂದು ಒತ್ತಾಯಿಸಿದರು.</p><p>‘ಹೆಣ್ಣು ಕುಲದ ನಾಶಕ್ಕೆ ಕಾರಣವಾಗಿರುವ ಭ್ರೂಣಹತ್ಯೆ ನಿಯಂತ್ರಿಸಲು ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ತಡೆ ಕಾಯ್ದೆಯಡಿ (ಪಿಸಿಪಿಎನ್ಡಿಟಿ) ಕಾನೂನು ಬಲಗೊಳಿಸಬೇಕು. ಈ ಪ್ರಕರಣಗಳ ಇತ್ಯರ್ಥಕ್ಕಾಗಿ ತ್ವರಿತ ಕೋರ್ಟ್ ಸ್ಥಾಪನೆಯಾಗಬೇಕು’ ಎಂದು ಒತ್ತಾಯಿಸುವ ನಿರ್ಣಯವನ್ನು ಕೈಗೊಳ್ಳಲಾಯಿತು. </p><p>‘ಮರ್ಯಾದೆಗೇಡು ಹತ್ಯೆ ಹೆಸರಿನಲ್ಲಿ ಯುವಕ–ಯುವತಿಯರು ದಮನಕ್ಕೆ ಒಳಗಾಗುತ್ತಿರುವುದು ವಿಷಾದನೀಯ. ವಿವಾಹದ ಮೂಲಕ ಜಾತಿ, ಮತಗಳ ಭೇದವಿಲ್ಲದ ನವ ಸಮಾಜದ ಕನಸು ಕಾಣುವವರ ಮೇಲಿನ ದೌರ್ಜನ್ಯ ಖಂಡನೀಯ. ಈ ಬಗ್ಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಹಿಂಸೆ, ದೌರ್ಜನ್ಯಗಳ ತಡೆಗೆ ವಿ.ಎಸ್.ಉಗ್ರಪ್ಪ ನೇತೃತ್ವದ ಸಮಿತಿ ವರದಿಯನ್ನು ಅಂಗೀಕರಿಸಿ, ಶಿಫಾರಸುಗಳನ್ನು ಜಾರಿಮಾಡಬೇಕು’ ಎಂದು ಆಗ್ರಹಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ನಡೆಸಬೇಕು ಎಂಬ ಒತ್ತಾಯ ಸೇರಿದಂತೆ ಎಂಟು ನಿರ್ಣಯಗಳನ್ನು ಇಲ್ಲಿ ನಡೆದ ಎಂಟನೇ ಅಖಿಲ ಕರ್ನಾಟಕ ಲೇಖಕಿಯರ ಸಮ್ಮೇಳನದಲ್ಲಿ ಕೈಗೊಳ್ಳಲಾಯಿತು. </p><p>ಕರ್ನಾಟಕ ಲೇಖಕಿಯರ ಸಂಘ ಹಮ್ಮಿಕೊಂಡಿದ್ದ ಸಮ್ಮೇಳನದ ಕಡೆಯ ದಿನವಾದ ಭಾನುವಾರ ಸಂಘದ ಜಿಲ್ಲಾ ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಮ್ಮುಖದಲ್ಲಿ ನಿರ್ಣಯಗಳನ್ನು ಅಂಗೀಕರಿಸಲಾಯಿತು. ಸಂಘದ ಮಂಡ್ಯ ಜಿಲ್ಲಾ ಘಟಕದ ಅಧ್ಯಕ್ಷೆ ಮೀರಾ ಶಿವಲಿಂಗಯ್ಯ ಅವರು ನಿರ್ಣಯ<br>ಗಳನ್ನು ವಾಚಿಸಿದರು.</p><p>‘ಹೆಣ್ಣು ಮಕ್ಕಳ ಅಸಹಜ ಸಾವು ಪ್ರಕರಣಗಳನ್ನು ಮರು ತನಿಖೆ ಮಾಡಬೇಕು. ಸೌಜನ್ಯ ಪ್ರಕರಣ<br>ದಲ್ಲಿ ಸಿಬಿಐ ಪ್ರಕರಣಗಳ ವಿಶೇಷ ನ್ಯಾಯಾಲಯದ ಆದೇಶವನ್ನು ಪಾಲಿಸಬೇಕು. ಅಮಾಯಕ ಹುಡುಗಿಯರ ಸಾವಿಗೆ ಕಾರಣರಾದವರಿಗೆ ಶಿಕ್ಷೆಯಾಗಬೇಕು’ ಎಂದು ಆಗ್ರಹಿಸಿದರು.</p><p>‘ಹನಿಟ್ರ್ಯಾಪ್ ಪ್ರಕರಣಗಳಲ್ಲಿ ಹೆಣ್ಣನ್ನು ಆಟಿಕೆಯಂತೆ ಬಳಸಿಕೊಳ್ಳುವ ಕ್ರಮ ಖಂಡನೀಯ. ಸಾರ್ವಜನಿಕ ಜೀವನದಲ್ಲಿ ಹೆಣ್ಣನ್ನು ಇಲಿ ಹಿಡಿಯುವ ಬೋನಿನಂತೆ ಬಳಸಿಕೊಳ್ಳಲಾಗುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p><p>‘ಸಾರ್ವಜನಿಕವಾಗಿ ಮಾಧ್ಯಮಗಳಲ್ಲಿ ಹಾಗೂ ಸದನದಲ್ಲಿ ಮಹಿಳೆಯರ ಕುರಿತು ಬಳಸುವ ಭಾಷೆ ಮತ್ತು ಧೋರಣೆಯನ್ನು ತೀವ್ರವಾಗಿ ಖಂಡಿಸುತ್ತೇವೆ. ಇದು ಅಸಾಂವಿಧಾನಿಕ ಮತ್ತು ಅನಾಗರಿಕ. ಈ ಬಗ್ಗೆ ಮಾಧ್ಯಮಗಳು ಹಾಗೂ ಜನಪ್ರತಿನಿಧಿಗಳ ಧೋರಣೆ ಬದಲಾಗಬೇಕು’ ಎಂದು ಒತ್ತಾಯಿಸಿದರು.</p><p>‘ಹೆಣ್ಣು ಕುಲದ ನಾಶಕ್ಕೆ ಕಾರಣವಾಗಿರುವ ಭ್ರೂಣಹತ್ಯೆ ನಿಯಂತ್ರಿಸಲು ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ತಡೆ ಕಾಯ್ದೆಯಡಿ (ಪಿಸಿಪಿಎನ್ಡಿಟಿ) ಕಾನೂನು ಬಲಗೊಳಿಸಬೇಕು. ಈ ಪ್ರಕರಣಗಳ ಇತ್ಯರ್ಥಕ್ಕಾಗಿ ತ್ವರಿತ ಕೋರ್ಟ್ ಸ್ಥಾಪನೆಯಾಗಬೇಕು’ ಎಂದು ಒತ್ತಾಯಿಸುವ ನಿರ್ಣಯವನ್ನು ಕೈಗೊಳ್ಳಲಾಯಿತು. </p><p>‘ಮರ್ಯಾದೆಗೇಡು ಹತ್ಯೆ ಹೆಸರಿನಲ್ಲಿ ಯುವಕ–ಯುವತಿಯರು ದಮನಕ್ಕೆ ಒಳಗಾಗುತ್ತಿರುವುದು ವಿಷಾದನೀಯ. ವಿವಾಹದ ಮೂಲಕ ಜಾತಿ, ಮತಗಳ ಭೇದವಿಲ್ಲದ ನವ ಸಮಾಜದ ಕನಸು ಕಾಣುವವರ ಮೇಲಿನ ದೌರ್ಜನ್ಯ ಖಂಡನೀಯ. ಈ ಬಗ್ಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಹಿಂಸೆ, ದೌರ್ಜನ್ಯಗಳ ತಡೆಗೆ ವಿ.ಎಸ್.ಉಗ್ರಪ್ಪ ನೇತೃತ್ವದ ಸಮಿತಿ ವರದಿಯನ್ನು ಅಂಗೀಕರಿಸಿ, ಶಿಫಾರಸುಗಳನ್ನು ಜಾರಿಮಾಡಬೇಕು’ ಎಂದು ಆಗ್ರಹಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>