ಬೆಂಗಳೂರು: ಬಾದಾಮಿ ತಾಲೂಕಿನ ಐಹೊಳೆಯ 8 ದೇವಸ್ಥಾನಗಳ ದುರಸ್ತಿ ಮತ್ತು ಸಂರಕ್ಷಣೆ ಜವಾಬ್ದಾರಿಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ಗೆ ವಹಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವರೂ ಆಗಿರುವ ಎಚ್.ಕೆ.ಪಾಟೀಲ ತಿಳಿಸಿದರು.
ಚಾಲುಕ್ಯರ ಕಾಲದ ಈ ದೇವಸ್ಥಾನಗಳನ್ನು ಸ್ಥಳೀಯರು ಹಸು, ಎಮ್ಮೆಗಳನ್ನು ಕಟ್ಟಿಕೊಳ್ಳಲು ಬಳಸುತ್ತಿದ್ದರು. ಇನ್ನೂ ಕೆಲವು ದೇವಸ್ಥಾನಗಳಲ್ಲಿ ಕುಟುಂಬಗಳು ವಾಸವಿದ್ದವರು. ಅವರಿಗೆ ಪರ್ಯಾಯ ವಸತಿ ವ್ಯವಸ್ಥೆ ಮಾಡಲಾಗುತ್ತಿದೆ. ವಸತಿ ನಿರ್ಮಾಣಕ್ಕಾಗಿ ಭೂಮಿ ಖರೀದಿಸಲು ₹3.30 ಕೋಟಿ ನೀಡಲಾಗುವುದು ಎಂದು ಅವರು ತಿಳಿಸಿದರು.
ಐಹೊಳೆಯಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲು ಕೆಎಸ್ಟಿಡಿಸಿ ವತಿಯಿಂದ ತ್ರೀಸ್ಟಾರ್ ಹೊಟೇಲ್ ನಿರ್ಮಿಸಲಾಗುವುದು. ಇದಕ್ಕಾಗಿ ಭೂಮಿ ನೀಡಲಾಗಿದೆ ಎಂದು ಪಾಟೀಲ ವಿವರಿಸಿದರು.