<p>ಧಾರವಾಡ: ‘ರಾಜ್ಯ ಸರ್ಕಾರವು ಧಾರವಾಡ ಪ್ರತ್ಯೇಕ ಪಾಲಿಕೆ ವಿಚಾರದಲ್ಲಿ ರಾಜ್ಯಪಾಲರಿಗೆ ಪ್ರಸ್ತಾವ ಕಳಿಸಿ 11 ತಿಂಗಳಿನಿಂದ ನಿಷ್ಕ್ರಿಯವಾಗಿದೆ, ಕೀಳು ರಾಜಕಾರಣದಲ್ಲಿ ತೊಡಗಿದೆ’ ಎಂದು ಆರೋಪಿಸಿ ಬಿಜೆಪಿಯವರು ನಗರದಲ್ಲಿ ಪ್ರತಿಭಟನೆ ನಡೆಸಿದರು.</p>.<p>ಸುಭಾಸ ರಸ್ತೆಯ ಪಕ್ಷದ ಕಚೇರಿಯಿಂದ ಜುಬಿಲಿ ವೃತ್ತದವರೆಗೆ ಪ್ರತಿಭಟನಾ ಮರವಣಿಗೆ ಸಾಗಿದರು. ರಾಜ್ಯ ಸರ್ಕಾರದ ವಿರೋದ್ದ ಘೋಷಣೆ ಕೂಗಿದರು. ಜುಬಿಲಿ ವೃತ್ತದಲ್ಲಿ ಧರಣಿ ಕುಳಿತರು. ಸ್ವಲ್ಪ ಹೊತ್ತು ವಾಹನ ಸಂಚಾರಕ್ಕೆ ಅಡಚಣೆಯಾಯಿತು.</p>.<p>ಪ್ರತಿಭಟನಾಕಾರರು ಜುಬಿಲಿ ವೃತ್ತದಲ್ಲಿ ಮುಖ್ಯಮಂತ್ರಿ ಪ್ರಕೃತಿ ದಹಿಸಲು ಮುಂದಾದಾಗ ಪೊಲೀಸರು ತಡೆದರು. ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆಯಿತು.</p>.<p>ತಿಪ್ಪಣ ಮಜ್ಜಗಿ, ಶಿವು ಹೀರೆಮಠ, ಸಂಜಯ ಕಪಟಕರ, ಜೋತಿ ಪಾಟೀಲ, ಮೋಹನ ರಾಮದುರ್ಗ ಇತರರು ಪ್ರತಿಭಟನೆಯಲ್ಲಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-24-1132914668</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ‘ರಾಜ್ಯ ಸರ್ಕಾರವು ಧಾರವಾಡ ಪ್ರತ್ಯೇಕ ಪಾಲಿಕೆ ವಿಚಾರದಲ್ಲಿ ರಾಜ್ಯಪಾಲರಿಗೆ ಪ್ರಸ್ತಾವ ಕಳಿಸಿ 11 ತಿಂಗಳಿನಿಂದ ನಿಷ್ಕ್ರಿಯವಾಗಿದೆ, ಕೀಳು ರಾಜಕಾರಣದಲ್ಲಿ ತೊಡಗಿದೆ’ ಎಂದು ಆರೋಪಿಸಿ ಬಿಜೆಪಿಯವರು ನಗರದಲ್ಲಿ ಪ್ರತಿಭಟನೆ ನಡೆಸಿದರು.</p>.<p>ಸುಭಾಸ ರಸ್ತೆಯ ಪಕ್ಷದ ಕಚೇರಿಯಿಂದ ಜುಬಿಲಿ ವೃತ್ತದವರೆಗೆ ಪ್ರತಿಭಟನಾ ಮರವಣಿಗೆ ಸಾಗಿದರು. ರಾಜ್ಯ ಸರ್ಕಾರದ ವಿರೋದ್ದ ಘೋಷಣೆ ಕೂಗಿದರು. ಜುಬಿಲಿ ವೃತ್ತದಲ್ಲಿ ಧರಣಿ ಕುಳಿತರು. ಸ್ವಲ್ಪ ಹೊತ್ತು ವಾಹನ ಸಂಚಾರಕ್ಕೆ ಅಡಚಣೆಯಾಯಿತು.</p>.<p>ಪ್ರತಿಭಟನಾಕಾರರು ಜುಬಿಲಿ ವೃತ್ತದಲ್ಲಿ ಮುಖ್ಯಮಂತ್ರಿ ಪ್ರಕೃತಿ ದಹಿಸಲು ಮುಂದಾದಾಗ ಪೊಲೀಸರು ತಡೆದರು. ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆಯಿತು.</p>.<p>ತಿಪ್ಪಣ ಮಜ್ಜಗಿ, ಶಿವು ಹೀರೆಮಠ, ಸಂಜಯ ಕಪಟಕರ, ಜೋತಿ ಪಾಟೀಲ, ಮೋಹನ ರಾಮದುರ್ಗ ಇತರರು ಪ್ರತಿಭಟನೆಯಲ್ಲಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-24-1132914668</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>