<p><strong>ಬೆಂಗಳೂರು:</strong>ಪರೀಕ್ಷೆ ಮುಂದೂಡಿಕೆಯಾಗಲಿ ಎಂಬ ಉದ್ದೇಶದಿಂದ ಪ್ರಶ್ನೆಪತ್ರಿಕೆಯೇ ಸೋರಿಕೆಯಾಗಿದೆ ಎಂದು ಕಥೆ ಕಟ್ಟಿದ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ.</p>.<p>ನಿನ್ನೆ ರಾತ್ರಿ ವಿದ್ಯಾರ್ಥಿಯೊಬ್ಬನ ಕಿಡಿಗೇಡಿತನದಿಂದ ಕೊಂಚ ಗಲಿಬಿಲಿ ಉಂಟಾಯಿತು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ.</p>.<p>ಈ ಕುರಿತು ಫೇಸ್ಬುಕ್ನಲ್ಲಿ ಬರೆದುಕೊಂಡಿರುವ ಅವರು, ರಾತ್ರಿ ಪಿಯುಸಿ ಅಧಿಕಾರಿಯೊಬ್ಬರಿಗೆ ವ್ಯಕ್ತಿಯೊಬ್ಬ ವಾಟ್ಸಪ್ ಸಂದೇಶ ಕಳುಹಿಸಿ ಇಂದು (ಶನಿವಾರ) ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆಯ ಕಂಪ್ಯೂಟರ್ ಸೈನ್ಸ್ ಪ್ರಶ್ನೆಪತ್ರಿಕೆ ಬಹಿರಂಗವಾಗಿದೆ. ಆದ್ದರಿಂದ ಬದಲಿ ಪ್ರಶ್ನೆ ಪತ್ರಿಕೆ ನೀಡಬೇಕು ಎಂದು ತಿಳಿಸಿದ್ದಾನೆ.</p>.<p>ಈ ವಾಟ್ಸಪ್ ಸಂದೇಶದ ಆಧಾರದ ಮೇಲೆ ದೂರು ಸಲ್ಲಿಸಲಾಯಿತು. ದೂರಿನ ಆಧಾರದ ಮೇಲೆ ಬೆಂಗಳೂರು ಉತ್ತರ ಪೊಲೀಸರು ಪತ್ತೆ ಹಚ್ಚಿದಾಗ ಅದು ವಿದ್ಯಾರ್ಥಿಯೊಬ್ಬನ ನಂಬರ್ ಎಂದು ತಿಳಿದಿದೆ. ವಿದ್ಯಾರ್ಥಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದಾಗ ಇದರ ಹಿಂದಿನ ಅಸಲಿಯತ್ತು ಹೊರಬಂದಿದೆ.</p>.<p>'ನಾನು ಕಂಪ್ಯೂಟರ್ ಸೈನ್ಸ್ ವಿಷಯವನ್ನು ಸರಿಯಾಗಿ ಓದಿಲ್ಲವೆಂದು ಪರೀಕ್ಷೆಗಳನ್ನು ಮುಂದೂಡಿಸಲು ಹೀಗೆಮಾಡಿದೆ'ಎಂದು ವಿದ್ಯಾರ್ಥಿ ತಿಳಿಸಿದ್ದಾನೆ.</p>.<p>ಆ ವಿದ್ಯಾರ್ಥಿಯ ಮೇಲೆ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಅಲ್ಲದೆ ಆತನನ್ನು ಡಿಬಾರ್ ಮಾಡಲಾಗಿದೆ. ಅಕಸ್ಮಾತ್ ಈ ವಿದ್ಯಾರ್ಥಿಯ ವಾಟ್ಸಪ್ ಸಂದೇಶ ವೈರಲ್ ಆಗಿದ್ದರೆ ಆಗುತ್ತಿದ್ದ ಅನಾಹುತವನ್ನು ಊಹಿಸಲೂ ಸಾಧ್ಯವಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.</p>.<p>ನಿರ್ದೇಶಕಿ ಕನಗವಲ್ಲಿ ನೇತೃತ್ವದ ಪಿಯುಸಿ ಮಂಡಳಿಯ ಅಧಿಕಾರಿಗಳು ಮತ್ತು ಡಿಸಿಪಿ ಶಶಿಕುಮಾರ್ ನೇತೃತ್ವದ ಬೆಂಗಳೂರು ಉತ್ತರ ಪೋಲಿಸರ ಜಂಟಿ ಕಾರ್ಯಚರಣೆಯಿಂದ ಈ ಅನಾಹುತ ತಪ್ಪಿದೆ. ಆ ಅಧಿಕಾರಿಗಳಿಗೆ ಅಭಿನಂದನೆಗಳು. #ತಪ್ಪಿದ_ಅನಾಹುತ ಎಂದು ಹ್ಯಾಷ್ಟ್ಯಾಗ್ ಹಾಕಿದ್ದಾರೆ.</p>.<p><strong>ಪ್ರಶ್ನೆ ಪತ್ರಿಕೆ ಸೋರಿಕೆ: ಪೋಷಕರ ಸಮೇತ ಬಾಲಕ ವಶಕ್ಕೆ</strong></p>.<p>ಪಿಯುಸಿ ಪರೀಕ್ಷೆಯ ಕಂಪ್ಯೂಟರ್ ಸೈನ್ಸ್ ವಿಷಯದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಸಂದೇಶ ಕಳುಹಿಸಿದ್ದ ವಿದ್ಯಾರ್ಥಿಯನ್ನು ಉತ್ತರ ವಿಭಾಗದ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಜಯನಗರದ ಕಾಲೇಜೊಂದರ ವಿದ್ಯಾರ್ಥಿಯಾಗಿರುವ ಬಾಲಕ, ಪ್ರಶ್ನೆಪ್ರತ್ರಿಕೆ ಸೋರಿಕೆ ಬಗ್ಗೆ ಸುದ್ದಿ ಹಬ್ಬಿಸಿದ್ದ ಎನ್ನಲಾಗಿದೆ. ಈ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೋಷಕರ ಸಮೇತವೇ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಉತ್ತರ ವಿಭಾಗದ ಡಿಸಿಪಿ ಶಶಿಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಪರೀಕ್ಷೆ ಮುಂದೂಡಿಕೆಯಾಗಲಿ ಎಂಬ ಉದ್ದೇಶದಿಂದ ಪ್ರಶ್ನೆಪತ್ರಿಕೆಯೇ ಸೋರಿಕೆಯಾಗಿದೆ ಎಂದು ಕಥೆ ಕಟ್ಟಿದ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ.</p>.<p>ನಿನ್ನೆ ರಾತ್ರಿ ವಿದ್ಯಾರ್ಥಿಯೊಬ್ಬನ ಕಿಡಿಗೇಡಿತನದಿಂದ ಕೊಂಚ ಗಲಿಬಿಲಿ ಉಂಟಾಯಿತು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ.</p>.<p>ಈ ಕುರಿತು ಫೇಸ್ಬುಕ್ನಲ್ಲಿ ಬರೆದುಕೊಂಡಿರುವ ಅವರು, ರಾತ್ರಿ ಪಿಯುಸಿ ಅಧಿಕಾರಿಯೊಬ್ಬರಿಗೆ ವ್ಯಕ್ತಿಯೊಬ್ಬ ವಾಟ್ಸಪ್ ಸಂದೇಶ ಕಳುಹಿಸಿ ಇಂದು (ಶನಿವಾರ) ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆಯ ಕಂಪ್ಯೂಟರ್ ಸೈನ್ಸ್ ಪ್ರಶ್ನೆಪತ್ರಿಕೆ ಬಹಿರಂಗವಾಗಿದೆ. ಆದ್ದರಿಂದ ಬದಲಿ ಪ್ರಶ್ನೆ ಪತ್ರಿಕೆ ನೀಡಬೇಕು ಎಂದು ತಿಳಿಸಿದ್ದಾನೆ.</p>.<p>ಈ ವಾಟ್ಸಪ್ ಸಂದೇಶದ ಆಧಾರದ ಮೇಲೆ ದೂರು ಸಲ್ಲಿಸಲಾಯಿತು. ದೂರಿನ ಆಧಾರದ ಮೇಲೆ ಬೆಂಗಳೂರು ಉತ್ತರ ಪೊಲೀಸರು ಪತ್ತೆ ಹಚ್ಚಿದಾಗ ಅದು ವಿದ್ಯಾರ್ಥಿಯೊಬ್ಬನ ನಂಬರ್ ಎಂದು ತಿಳಿದಿದೆ. ವಿದ್ಯಾರ್ಥಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದಾಗ ಇದರ ಹಿಂದಿನ ಅಸಲಿಯತ್ತು ಹೊರಬಂದಿದೆ.</p>.<p>'ನಾನು ಕಂಪ್ಯೂಟರ್ ಸೈನ್ಸ್ ವಿಷಯವನ್ನು ಸರಿಯಾಗಿ ಓದಿಲ್ಲವೆಂದು ಪರೀಕ್ಷೆಗಳನ್ನು ಮುಂದೂಡಿಸಲು ಹೀಗೆಮಾಡಿದೆ'ಎಂದು ವಿದ್ಯಾರ್ಥಿ ತಿಳಿಸಿದ್ದಾನೆ.</p>.<p>ಆ ವಿದ್ಯಾರ್ಥಿಯ ಮೇಲೆ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಅಲ್ಲದೆ ಆತನನ್ನು ಡಿಬಾರ್ ಮಾಡಲಾಗಿದೆ. ಅಕಸ್ಮಾತ್ ಈ ವಿದ್ಯಾರ್ಥಿಯ ವಾಟ್ಸಪ್ ಸಂದೇಶ ವೈರಲ್ ಆಗಿದ್ದರೆ ಆಗುತ್ತಿದ್ದ ಅನಾಹುತವನ್ನು ಊಹಿಸಲೂ ಸಾಧ್ಯವಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.</p>.<p>ನಿರ್ದೇಶಕಿ ಕನಗವಲ್ಲಿ ನೇತೃತ್ವದ ಪಿಯುಸಿ ಮಂಡಳಿಯ ಅಧಿಕಾರಿಗಳು ಮತ್ತು ಡಿಸಿಪಿ ಶಶಿಕುಮಾರ್ ನೇತೃತ್ವದ ಬೆಂಗಳೂರು ಉತ್ತರ ಪೋಲಿಸರ ಜಂಟಿ ಕಾರ್ಯಚರಣೆಯಿಂದ ಈ ಅನಾಹುತ ತಪ್ಪಿದೆ. ಆ ಅಧಿಕಾರಿಗಳಿಗೆ ಅಭಿನಂದನೆಗಳು. #ತಪ್ಪಿದ_ಅನಾಹುತ ಎಂದು ಹ್ಯಾಷ್ಟ್ಯಾಗ್ ಹಾಕಿದ್ದಾರೆ.</p>.<p><strong>ಪ್ರಶ್ನೆ ಪತ್ರಿಕೆ ಸೋರಿಕೆ: ಪೋಷಕರ ಸಮೇತ ಬಾಲಕ ವಶಕ್ಕೆ</strong></p>.<p>ಪಿಯುಸಿ ಪರೀಕ್ಷೆಯ ಕಂಪ್ಯೂಟರ್ ಸೈನ್ಸ್ ವಿಷಯದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಸಂದೇಶ ಕಳುಹಿಸಿದ್ದ ವಿದ್ಯಾರ್ಥಿಯನ್ನು ಉತ್ತರ ವಿಭಾಗದ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಜಯನಗರದ ಕಾಲೇಜೊಂದರ ವಿದ್ಯಾರ್ಥಿಯಾಗಿರುವ ಬಾಲಕ, ಪ್ರಶ್ನೆಪ್ರತ್ರಿಕೆ ಸೋರಿಕೆ ಬಗ್ಗೆ ಸುದ್ದಿ ಹಬ್ಬಿಸಿದ್ದ ಎನ್ನಲಾಗಿದೆ. ಈ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೋಷಕರ ಸಮೇತವೇ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಉತ್ತರ ವಿಭಾಗದ ಡಿಸಿಪಿ ಶಶಿಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>