<p><strong>ಬೆಂಗಳೂರು</strong>: ಹಾಲಿನ ಬೆಲೆ, ವಿದ್ಯುತ್ ದರ ಮತ್ತು ಕಸ ಸಂಗ್ರಹಣೆ ಶುಲ್ಕ ಹೆಚ್ಚಳದ ಬೆನ್ನಲ್ಲೇ, ಏಪ್ರಿಲ್ 1ರ ರಾತ್ರಿಯಿಂದ ಅನ್ವಯವಾಗುವಂತೆ ರಾಜ್ಯದಲ್ಲಿ ಡೀಸೆಲ್ ದರ ಪ್ರತಿ ಲೀಟರ್ಗೆ ₹2ರಷ್ಟು ಏರಿಕೆಯಾಗಿದೆ.</p>.<p>ರಾಜ್ಯ ಸರ್ಕಾರವು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಶೇ 18.44ರಿಂದ ಶೇ 21.77ರಷ್ಟಕ್ಕೆ ಏರಿಕೆ ಮಾಡಿ, ಆದೇಶಿಸಿದೆ. ಬೆಂಗಳೂರಿನಲ್ಲಿ ₹89.02ರಷ್ಟು ಇದ್ದ ಡೀಸೆಲ್ ಬೆಲೆ ₹91.02ರಷ್ಟಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಈಗಿರುವ ದರಕ್ಕೆ ಅನುಗುಣವಾಗಿ ಶೇಕಡಾ 3.33ರಷ್ಟು ಹೆಚ್ಚಳವಾಗಲಿದೆ. </p>.<p>‘2021ರ ನವೆಂಬರ್ 4ಕ್ಕೂ ಮುನ್ನ ರಾಜ್ಯದಲ್ಲಿ ಡೀಸೆಲ್ಗೆ ಶೇ 24ರಷ್ಟು ಮಾರಾಟ ತೆರಿಗೆ ವಿಧಿಸಲಾಗುತ್ತಿತ್ತು. ಆಗ ಪ್ರತಿ ಲೀಟರ್ ಡೀಸೆಲ್ನ ಬೆಲೆ ₹92.03ರಷ್ಟು ಇತ್ತು. 2024ರ ಜೂನ್ 1ರಂದು ಮಾರಾಟ ತೆರಿಗೆಯನ್ನು ಶೇ 18.44ಕ್ಕೆ ಇಳಿಸಲಾಗಿತ್ತು’ ಎಂದು ಆರ್ಥಿಕ ಇಲಾಖೆ ತಿಳಿಸಿದೆ.</p>.<p>‘ಈಗ ತೆರಿಗೆ ದರ ಏರಿಕೆಯ ನಂತರ ಮಾರಾಟ ಬೆಲೆ ಹೆಚ್ಚಳವಾದರೂ, ನೆರೆಯ ರಾಜ್ಯಗಳಿಗಿಂತ ಕರ್ನಾಟಕದಲ್ಲಿಯೇ ಡೀಸೆಲ್ ಬೆಲೆ ಕಡಿಮೆ ಇರಲಿದೆ’ ಎಂದು ಸರ್ಕಾರ ತಿಳಿಸಿದೆ.</p>.<div><blockquote>ರಾಜ್ಯದಲ್ಲಿ ‘ದರ ಬೀಜಾಸುರ’ ಸರ್ಕಾರವಿದೆ. ಘಜ್ನಿ ಮಹಮದ್, ಘೋರಿ ಮಹಮದ್ ನಾಚುವಂತೆ ಜನರ ಮೇಲೆ ದರ ಏರಿಕೆ ದಂಡಯಾತ್ರೆ ನಡೆಸುತ್ತಿದೆ</blockquote><span class="attribution">ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ಕೈಗಾರಿಕಾ ಸಚಿವ</span></div>.<div><blockquote>ಔಷಧ, ತರಕಾರಿ, ಬೇಳೆ ಕಾಳು ದರ ಒಂದೂವರೆ ಪಟ್ಟು ಹೆಚ್ಚಾಗಿದ್ದು, ಟೋಲ್ ದರ ಏರಿಕೆ ಜನರನ್ನು ಕಂಗಾಲು ಮಾಡಿದೆ. ಬಿಜೆಪಿಯವರು ಪ್ರತಿಭಟನೆ ನಡೆಸಬೇಕಿರುವುದು ಕೇಂದ್ರದ ವಿರುದ್ಧ</blockquote><span class="attribution">ಪ್ರಿಯಾಂಕ್ ಖರ್ಗೆ, ಪಂಚಾಯತ್ ರಾಜ್ ಸಚಿವ</span></div>.<h2><strong>ಯಾವುದರ ಮೇಲೆಲ್ಲಾ ಪ್ರಭಾವ</strong></h2><p>ಕೃಷಿ ಹಾಗೂ ಬಹುತೇಕ ಉದ್ಯಮಗಳು ಡೀಸೆಲ್ ಅನ್ನೇ ಅವಲಂಬಿಸಿದ್ದು, ದರ ಏರಿಕೆಯೂ ಎಲ್ಲ ಕ್ಷೇತ್ರಗಳ ಮೇಲೂ ಪರಿಣಾಮ ಬೀರಲಿದೆ. ಮುಂದಿನ ದಿನಗಳಲ್ಲಿ ಎಲ್ಲ ವಲಯಗಳ ದರ ಹೆಚ್ಚಳವಾಗಲು ಇದು ಕಾರಣವಾಗಬಹುದು.</p><p><strong>ಯಾವ ವಲಯಗಳು</strong></p><ul><li><p>ಸರಕು ಸಾಗಣೆ (ಟ್ರಕ್ಗಳು) ಮತ್ತು ಸಾರಿಗೆ (ಬಸ್ಗಳು, ಆಟೊಗಳು), ಡೀಸೆಲ್ ಕಾರುಗಳು</p></li><li><p>ಕೃಷಿ ಚಟುವಟಿಕೆ (ಟ್ರ್ಯಾಕ್ಟರ್ ಚಟುವಟಿಕೆಗಳು, ನೀರಿನ ಟ್ಯಾಂಕರ್ಗಳು...), ಕೃಷಿ ಉತ್ಪನ್ನಗಳ ಸಾಗಣೆ</p></li><li><p>ಡೀಸೆಲ್ ಜನರೇಟರ್ ಅವಲಂಬಿತ ಕೈಗಾರಿಕೆ, ಉದ್ಯಮ ಮತ್ತು ಸೇವೆಗಳು</p></li><li><p>ಕಟ್ಟಡ ನಿರ್ಮಾಣ ಕಾಮಗಾರಿ</p></li><li><p>ಅರ್ಥ್ಮೂವಿಂಗ್, ಕೊಳವೆಬಾವಿ, ರಸ್ತೆ ನಿರ್ಮಾಣ ಕಾಮಗಾರಿ</p></li></ul>.<p><strong>ಬಿಜೆಪಿಯಿಂದ ಅಹೋರಾತ್ರಿ ಧರಣಿ</strong></p><p>ಬೆಂಗಳೂರು: ಬೆಲೆ ಏರಿಕೆ ವಿರೋಧಿಸಿ ಬಿಜೆಪಿಯು ಬುಧವಾರ ಅಹೋರಾತ್ರಿ ಧರಣಿಯೂ ಸೇರಿ, ರಾಜ್ಯವ್ಯಾಪಿ ಸರಣಿ ಹೋರಾಟಗಳನ್ನು ಹಮ್ಮಿಕೊಂಡಿದೆ.</p><p>ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬೆಳಿಗ್ಗೆ 11ಕ್ಕೆ ಅಹೋರಾತ್ರಿ ಧರಣಿ ಆರಂಭವಾಗಲಿದೆ. ಬಿ.ಎಸ್.ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ, ಆರ್. ಅಶೋಕ, ಛಲವಾದಿ ನಾರಾಯಣಸ್ವಾಮಿ, ಸಂಸದರು, ಶಾಸಕರು ಧರಣಿಯಲ್ಲಿ ಭಾಗವಹಿಸಲಿದ್ದಾರೆ.</p><p>ಇದೇ 5ರಂದು ಎಲ್ಲ ಜಿಲ್ಲಾ ಕೇಂದ್ರ, ತಾಲ್ಲೂಕು ಕೇಂದ್ರ ಮತ್ತು ಮಂಡಲ ಮಟ್ಟದಲ್ಲಿ ಪಕ್ಷದ ಕಾರ್ಯಕರ್ತರು ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸಲಿದ್ದಾರೆ. ಇದೇ 7ರಿಂದ ವಿವಿಧ ಹಂತಗಳಲ್ಲಿ ರಾಜ್ಯದಾದ್ಯಂತ ಜನಜಾಗೃತಿಗಾಗಿ ‘ಜನಾಕ್ರೋಶ ಯಾತ್ರೆ’ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಹಾಲಿನ ಬೆಲೆ, ವಿದ್ಯುತ್ ದರ ಮತ್ತು ಕಸ ಸಂಗ್ರಹಣೆ ಶುಲ್ಕ ಹೆಚ್ಚಳದ ಬೆನ್ನಲ್ಲೇ, ಏಪ್ರಿಲ್ 1ರ ರಾತ್ರಿಯಿಂದ ಅನ್ವಯವಾಗುವಂತೆ ರಾಜ್ಯದಲ್ಲಿ ಡೀಸೆಲ್ ದರ ಪ್ರತಿ ಲೀಟರ್ಗೆ ₹2ರಷ್ಟು ಏರಿಕೆಯಾಗಿದೆ.</p>.<p>ರಾಜ್ಯ ಸರ್ಕಾರವು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಶೇ 18.44ರಿಂದ ಶೇ 21.77ರಷ್ಟಕ್ಕೆ ಏರಿಕೆ ಮಾಡಿ, ಆದೇಶಿಸಿದೆ. ಬೆಂಗಳೂರಿನಲ್ಲಿ ₹89.02ರಷ್ಟು ಇದ್ದ ಡೀಸೆಲ್ ಬೆಲೆ ₹91.02ರಷ್ಟಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಈಗಿರುವ ದರಕ್ಕೆ ಅನುಗುಣವಾಗಿ ಶೇಕಡಾ 3.33ರಷ್ಟು ಹೆಚ್ಚಳವಾಗಲಿದೆ. </p>.<p>‘2021ರ ನವೆಂಬರ್ 4ಕ್ಕೂ ಮುನ್ನ ರಾಜ್ಯದಲ್ಲಿ ಡೀಸೆಲ್ಗೆ ಶೇ 24ರಷ್ಟು ಮಾರಾಟ ತೆರಿಗೆ ವಿಧಿಸಲಾಗುತ್ತಿತ್ತು. ಆಗ ಪ್ರತಿ ಲೀಟರ್ ಡೀಸೆಲ್ನ ಬೆಲೆ ₹92.03ರಷ್ಟು ಇತ್ತು. 2024ರ ಜೂನ್ 1ರಂದು ಮಾರಾಟ ತೆರಿಗೆಯನ್ನು ಶೇ 18.44ಕ್ಕೆ ಇಳಿಸಲಾಗಿತ್ತು’ ಎಂದು ಆರ್ಥಿಕ ಇಲಾಖೆ ತಿಳಿಸಿದೆ.</p>.<p>‘ಈಗ ತೆರಿಗೆ ದರ ಏರಿಕೆಯ ನಂತರ ಮಾರಾಟ ಬೆಲೆ ಹೆಚ್ಚಳವಾದರೂ, ನೆರೆಯ ರಾಜ್ಯಗಳಿಗಿಂತ ಕರ್ನಾಟಕದಲ್ಲಿಯೇ ಡೀಸೆಲ್ ಬೆಲೆ ಕಡಿಮೆ ಇರಲಿದೆ’ ಎಂದು ಸರ್ಕಾರ ತಿಳಿಸಿದೆ.</p>.<div><blockquote>ರಾಜ್ಯದಲ್ಲಿ ‘ದರ ಬೀಜಾಸುರ’ ಸರ್ಕಾರವಿದೆ. ಘಜ್ನಿ ಮಹಮದ್, ಘೋರಿ ಮಹಮದ್ ನಾಚುವಂತೆ ಜನರ ಮೇಲೆ ದರ ಏರಿಕೆ ದಂಡಯಾತ್ರೆ ನಡೆಸುತ್ತಿದೆ</blockquote><span class="attribution">ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ಕೈಗಾರಿಕಾ ಸಚಿವ</span></div>.<div><blockquote>ಔಷಧ, ತರಕಾರಿ, ಬೇಳೆ ಕಾಳು ದರ ಒಂದೂವರೆ ಪಟ್ಟು ಹೆಚ್ಚಾಗಿದ್ದು, ಟೋಲ್ ದರ ಏರಿಕೆ ಜನರನ್ನು ಕಂಗಾಲು ಮಾಡಿದೆ. ಬಿಜೆಪಿಯವರು ಪ್ರತಿಭಟನೆ ನಡೆಸಬೇಕಿರುವುದು ಕೇಂದ್ರದ ವಿರುದ್ಧ</blockquote><span class="attribution">ಪ್ರಿಯಾಂಕ್ ಖರ್ಗೆ, ಪಂಚಾಯತ್ ರಾಜ್ ಸಚಿವ</span></div>.<h2><strong>ಯಾವುದರ ಮೇಲೆಲ್ಲಾ ಪ್ರಭಾವ</strong></h2><p>ಕೃಷಿ ಹಾಗೂ ಬಹುತೇಕ ಉದ್ಯಮಗಳು ಡೀಸೆಲ್ ಅನ್ನೇ ಅವಲಂಬಿಸಿದ್ದು, ದರ ಏರಿಕೆಯೂ ಎಲ್ಲ ಕ್ಷೇತ್ರಗಳ ಮೇಲೂ ಪರಿಣಾಮ ಬೀರಲಿದೆ. ಮುಂದಿನ ದಿನಗಳಲ್ಲಿ ಎಲ್ಲ ವಲಯಗಳ ದರ ಹೆಚ್ಚಳವಾಗಲು ಇದು ಕಾರಣವಾಗಬಹುದು.</p><p><strong>ಯಾವ ವಲಯಗಳು</strong></p><ul><li><p>ಸರಕು ಸಾಗಣೆ (ಟ್ರಕ್ಗಳು) ಮತ್ತು ಸಾರಿಗೆ (ಬಸ್ಗಳು, ಆಟೊಗಳು), ಡೀಸೆಲ್ ಕಾರುಗಳು</p></li><li><p>ಕೃಷಿ ಚಟುವಟಿಕೆ (ಟ್ರ್ಯಾಕ್ಟರ್ ಚಟುವಟಿಕೆಗಳು, ನೀರಿನ ಟ್ಯಾಂಕರ್ಗಳು...), ಕೃಷಿ ಉತ್ಪನ್ನಗಳ ಸಾಗಣೆ</p></li><li><p>ಡೀಸೆಲ್ ಜನರೇಟರ್ ಅವಲಂಬಿತ ಕೈಗಾರಿಕೆ, ಉದ್ಯಮ ಮತ್ತು ಸೇವೆಗಳು</p></li><li><p>ಕಟ್ಟಡ ನಿರ್ಮಾಣ ಕಾಮಗಾರಿ</p></li><li><p>ಅರ್ಥ್ಮೂವಿಂಗ್, ಕೊಳವೆಬಾವಿ, ರಸ್ತೆ ನಿರ್ಮಾಣ ಕಾಮಗಾರಿ</p></li></ul>.<p><strong>ಬಿಜೆಪಿಯಿಂದ ಅಹೋರಾತ್ರಿ ಧರಣಿ</strong></p><p>ಬೆಂಗಳೂರು: ಬೆಲೆ ಏರಿಕೆ ವಿರೋಧಿಸಿ ಬಿಜೆಪಿಯು ಬುಧವಾರ ಅಹೋರಾತ್ರಿ ಧರಣಿಯೂ ಸೇರಿ, ರಾಜ್ಯವ್ಯಾಪಿ ಸರಣಿ ಹೋರಾಟಗಳನ್ನು ಹಮ್ಮಿಕೊಂಡಿದೆ.</p><p>ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬೆಳಿಗ್ಗೆ 11ಕ್ಕೆ ಅಹೋರಾತ್ರಿ ಧರಣಿ ಆರಂಭವಾಗಲಿದೆ. ಬಿ.ಎಸ್.ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ, ಆರ್. ಅಶೋಕ, ಛಲವಾದಿ ನಾರಾಯಣಸ್ವಾಮಿ, ಸಂಸದರು, ಶಾಸಕರು ಧರಣಿಯಲ್ಲಿ ಭಾಗವಹಿಸಲಿದ್ದಾರೆ.</p><p>ಇದೇ 5ರಂದು ಎಲ್ಲ ಜಿಲ್ಲಾ ಕೇಂದ್ರ, ತಾಲ್ಲೂಕು ಕೇಂದ್ರ ಮತ್ತು ಮಂಡಲ ಮಟ್ಟದಲ್ಲಿ ಪಕ್ಷದ ಕಾರ್ಯಕರ್ತರು ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸಲಿದ್ದಾರೆ. ಇದೇ 7ರಿಂದ ವಿವಿಧ ಹಂತಗಳಲ್ಲಿ ರಾಜ್ಯದಾದ್ಯಂತ ಜನಜಾಗೃತಿಗಾಗಿ ‘ಜನಾಕ್ರೋಶ ಯಾತ್ರೆ’ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>