ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ನೀರು ಪೂರೈಕೆಗಾಗಿ ದೊಡ್ಡಬಳ್ಳಾಪುರ ಸಮೀಪದ ಬೈರಗೊಂಡ್ಲು ಬಳಿ ಜಲಾಶಯ ನಿರ್ಮಿಸುವುದು ಸರ್ಕಾರದ ಉದ್ದೇಶ. ಜಲಾಶಯ ನಿರ್ಮಾಣಕ್ಕೆ ರಾಷ್ಟ್ರೀಯ ಹಸಿರು ನ್ಯಾಯಪೀಠವೂ ಅನುಮತಿ ನೀಡಿದೆ. ಆದರೆ, ಜಮೀನು ವಶಪಡಿಸಿಕೊಳ್ಳುವ ವಿಚಾರದಲ್ಲಿ ಉಂಟಾಗಿರುವ ತೊಡಕನ್ನು ಬಗೆಹರಿಸಲು ಕಳೆದ ಒಂದು ವರ್ಷದಿಂದಲೂ ಸಾಧ್ಯವಾಗಿಲ್ಲ. ಈ ವಿಷಯ ಈಗ ಮುಖ್ಯಮಂತ್ರಿಗಳ ಅಧ್ಯಕ್ಷತೆಯ ಸಮಿತಿ ಮುಂದಿದ್ದು, ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕಿದೆ.